ನವರಾತ್ರಿ ಸಡಗರಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು


Team Udayavani, Sep 25, 2022, 7:51 PM IST

ನವರಾತ್ರಿ ಸಡಗರಕ್ಕೆ ರಬಕವಿ-ಬನಹಟ್ಟಿ ತಾಲೂಕು ಸಜ್ಜು

ರಬಕವಿ-ಬನಹಟ್ಟಿ: ರಬಕವಿ-ಬನಹಟ್ಟಿ ತಾಲೂಕಿನಲ್ಲಿ ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ನವರಾತ್ರಿಯ ಸಂಭ್ರಮ ಅಷ್ಟಾಗಿ ಇರಲಿಲ್ಲ. ಆದರೆ ಬಾರಿ ಪ್ರತಿಯೊಂದು ಪಟ್ಟಣ ಮತ್ತು ಗ್ರಾಮದ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ಹಾಕಿಕೊಂಡು ಸಂಭ್ರಮದ ನವರಾತ್ರಿ ಉತ್ಸವ ಆಚರಿಸಲು ಸಜ್ಜಾಗಿ ನಿಂತಿವೆ.

ತಾಲೂಕಿನಪಟ್ಟಣಮತ್ತು ಗ್ರಾಮಗಳ ಎಲ್ಲ ದೇವಸ್ಥಾನಗಳು ಸೆ. 26 ರಿಂದ ಆರಂಭವಾಗುವ ನವರಾತ್ರಿ ಉತ್ಸವಕ್ಕೆ ವಿಜೃಂಭಣೆಯಿಂದ ತಯಾರಾಗುತ್ತಿವೆ. ಅಂದು ಮುಂಜಾನೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮೂಲಕ ದುರ್ಗೆಯ ಮೂರ್ತಿಯ ಮೆರವಣಿಗೆ ನಡೆಯುತ್ತದೆ. ಮೆರವಣಿಗೆಯಲ್ಲಿ ಮಹಿಳೆಯರು, ಮಕ್ಕಳು ಸಹಿತಾಧಿಯಾಗಿ ಪಾಲ್ಗೋಳ್ಳುತ್ತಾರೆ. ನಗರದ ಪ್ರಮುಖ ಬೀದಿಗಳಲ್ಲಿ ಮೂರ್ತಿ ಪ್ರತಿ಼ಷ್ಟಾಪಿಸಿ 9 ದಿನಗಳ ಕಾಲ ಪೂಜೆ ಗೈದು ದೇವಿಯನ್ನು ಆರಾಧಿಸಲಾಗುತ್ತದೆ.

9 ದಿನಗಳಕಾಲ ದೇವತೆಯ ವಿವಿಧ ರೂಪಗಳ ಹೆಸರಿನಲ್ಲಿ ದೇವಿಯನ್ನು ಆರಾಧಿಸಿ ಪೂಜಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಅಲ್ಲದೇ ಮೈಸೂರಿನಲ್ಲಿರುವಂತೆ ಇಲ್ಲಿಯೂ ಕೂಡಾ ಕೆಲವೊಂದು ಮನೆಯಲ್ಲಿ ಬೊಂಬೆ ಪ್ರದರ್ಶನ ನಡೆಯುತ್ತದೆ. ಅಲ್ಲಿ ಸುಮಾರು 100ಕ್ಕೂ ಹೆಚ್ಚು ವಿವಿಧ ಕಲೆಯನ್ನು ಬಿಂಬಿಸುವ ಬೆಂಬೆಗಳ ಆ ಪ್ರದರ್ಶನ ನೋಡಿ ಜನ ಅವರ ಮನೆಗೆ ತೆರಳಿ ಸಂಭ್ರಮಿಸುತ್ತಾರೆ.

ನವರಾತ್ರಿಯಲ್ಲಿ ಆಯುಧ ಪೂಜೆಗೆ ವಿಶಿಷ್ಠ ಸ್ಥಾನವಿದೆ. ಹಿಂದಿನ ಕಾಲದಲ್ಲಿ ರಾಜರು ತಮ್ಮ ಶಸ್ತಾಸ್ತ್ರಗಳನ್ನು ವಿಜಯದಶಮಿ ಸಮಯದಲ್ಲಿ ಇಟ್ಟು ಪೂಜೆ ಮಾಡುತ್ತಿದ್ದು, ಅದು ಈಗ ಆಯುಧಪೂಜೆಯಾಗಿ ಖ್ಯಾತಿಯಾಗಿದೆ. ಪ್ರಾಚೀನ ಕಾಲದಿಂದಲ್ಲೂ ಜನತೆ ಎಲ್ಲ ಆಯುಧಗಳು ಹಾಗೂ ವಾಹನಗಳಿಗೆ ಪೂಜೆ ಸಲ್ಲಿಸಿಸುತ್ತಾ ಆಚರಿಸುತ್ತಾ ಬಂದಿದ್ದಾರೆ. ದಸರೆಯಂದು  ಆಯುಧ ಪೂಜೆ ನಡೆಸಿ ಸಂಜೆ ನಗರದ ಹಾಗೂ ಸಮಾಜದ ಹಿರಿಯರು ಸೇರಿಕೊಂಡು ಹೊಸ ಬಟ್ಟೆ ಬರೆಗಳನ್ನು ತೊಟ್ಟುಕೊಂಡು ನಿಗದಿತ ಸ್ಥಳದಲ್ಲಿ ಬನ್ನಿ ಬಂಗಾರವನ್ನು ಮುಡಿಯುವುದರ ಮೂಲಕ ದಸರಾ ಹಬ್ಬ ಸಂಭ್ರಮದಿಂದ ಆಚರಿಸುತ್ತಾರೆ. ಅಲ್ಲಿ ಪರಸ್ಪರ ಬನ್ನಿ- ಬಂಗಾರವನ್ನು ಕೊಟ್ಟು ಶುಭಾಶಯಗಳನ್ನು ನಿವಿಮಯ ಮಾಡಿಕೊಂಡು ಕಿರಿಯರು ಹಿರಿಯರ ಆಶೀರ್ವಾದ ಪಡೆದು ಕೊಳ್ಳುವ ಸಂಪ್ರದಾಯ ಇಲ್ಲಿಯ ಪಟ್ಟಣ ಮತ್ತು ಗ್ರಾಮಗಳಲ್ಲಿದೆ.

ಅಲ್ಲದೇ ನಗರದಲ್ಲಿ ಪ್ರತಿಷ್ಟಾಪಿಸಲ್ಪಡುವ ದುರ್ಗಾದೇವಿ ಮೂರ್ತಿ ಎದಿರು ಪ್ರತಿದಿನ ಸಂಜೆ ಪೂಜೆ ನಂತರ ಎಲ್ಲ ಸ್ತ್ರಿ, ಪುರುಷರು, ಮಕ್ಕಳು ಕೋಲಾಟವನ್ನು ಆಡುವ ಸಂಪ್ರದಾಯ ಇಲ್ಲಿದೆ.

ಅಲ್ಲದೇ ನವರಾತ್ರಿ ನಿಮಿತ್ತ ವಿವಿಧ ಮಠಗಳಲ್ಲಿ ಪ್ರವಚನ ಕಾರ್ಯಕ್ರಮಗಳು ನಡೆಯುತ್ತವೆ. ಒಟ್ಟಿನಲ್ಲಿ ನವರಾತ್ರಿ 9 ದಿನಗಳ ಕಾಲ ಈ ಬಾರಿ ವಿಶೇಷವಾಗಿ ನಡೆಯಲಿದೆ.

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.