ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌


Team Udayavani, Sep 26, 2022, 8:05 AM IST

ದೀಪ್ತಿ ಶರ್ಮ ರನೌಟ್‌ ಪ್ರಕರಣ: ನಾವೇನೂ ಅಪರಾಧ ಮಾಡಿಲ್ಲ: ಹರ್ಮನ್‌ಪ್ರೀತ್‌ ಕೌರ್‌

ಲಂಡನ್‌: “ದೀಪ್ತಿ ಶರ್ಮ ಮಾಡಿದ ರನೌಟ್‌ ಬಗ್ಗೆ ಬಹಳ ಚರ್ಚೆ ಆಗುತ್ತಿದೆ. ಆದರೆ ನಾವು ಮಾಡಿದ್ದು ಖಂಡಿತವಾಗಿಯೂ ಅಪರಾಧವಲ್ಲ’ ಎಂಬುದಾಗಿ ಟೀಮ್‌ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಟೀಕಾಕಾರರಿಗೆ ಚಾಟಿ ಬೀಸಿದ್ದಾರೆ.

“ಇದು ಕ್ರಿಕೆಟಿನ ಒಂದು ಭಾಗ. ಐಸಿಸಿ ನಿಯಮಾವಳಿಗೆ ಬದ್ಧವಾಗಿದೆ. ಈ ಸಂದರ್ಭದಲ್ಲಿ ನಮ್ಮ ಆಟಗಾರ್ತಿಯರನ್ನು ಬೆಂಬಲಿಸುವುದು ನನ್ನ ಕರ್ತವ್ಯ. ದೀಪ್ತಿ ಶರ್ಮ ಅವರ ಈ ಕ್ರಮ ಸರಿಯಾಗಿಯೇ ಇದೆ. ನನಗೆ ಬಹಳ ಖುಷಿಯಾಗಿದೆ’ ಎಂದು ಕೌರ್‌ ಹೇಳಿದರು.

“ಈ ವಿವಾದದಿಂದ ಜೂಲನ್‌ ಗೋಸ್ವಾಮಿ ಅವರ ವಿದಾ ಯದ ಹೊಳಪೇನೂ ಮಾಸಲಿಲ್ಲ. ಲೆಜೆಂಡ್‌ ಯಾವತ್ತಿಗೂ ಲೆಜೆಂಡ್‌ ಆಗಿರುತ್ತಾರೆ’ ಎಂದೂ ಕೌರ್‌ ಹೇಳಿದರು.

ಮುಂದೋಡಿದ ಡೀನ್‌
170 ರನ್ನುಗಳ ಸಣ್ಣ ಮೊತ್ತದ ಚೇಸಿಂಗ್‌ ವೇಳೆ ಇಂಗ್ಲೆಂಡ್‌ ತೀವ್ರ ಕುಸಿತ ಅನುಭವಿಸಿ ಸೋಲನ್ನು ಖಾತ್ರಿಗೊಳಿಸಿತ್ತು. ಆಗ ಅಂತಿಮ ವಿಕೆಟಿಗೆ ಜತೆಗೂಡಿದ ಚಾರ್ಲೋಟ್‌ ಡೀನ್‌ ಮತ್ತು ಫ್ರೆàಯಾ ಡೇವಿಸ್‌ ಹೋರಾಟ ಸಂಘಟಿಸಿ ಗೆಲುವಿನ ಸಾಧ್ಯತೆಯೊಂದನ್ನು ತೆರೆದಿರಿಸಿದರು. ಕೊನೆಯಲ್ಲಿ 44ನೇ ಓವರ್‌ ಎಸೆಯಲು ಬಂದ ದೀಪ್ತಿ ಶರ್ಮ, 3ನೇ ಎಸೆತದಲ್ಲಿ ಡೀನ್‌ ಅವರನ್ನು “ಮಂಕಡ್‌’ ಮಾದರಿಯಲ್ಲಿ ರನೌಟ್‌ ಮಾಡಿದರು. ದೀಪ್ತಿ ಚೆಂಡನ್ನೆಸೆಯುವ ಮೊದಲೇ ನಾನ್‌ ಸ್ಟ್ರೈಕಿಂಗ್‌ ತುದಿಯಲ್ಲಿದ್ದ ಡೀನ್‌ ಕ್ರೀಸ್‌ ಬಿಟ್ಟು ಅದೆಷ್ಟೋ ಮುಂದಿದ್ದರು.

ನಿಜಕ್ಕಾದರೆ ಮೈದಾನದ ಅಂಪಾಯರ್‌ಗಳಾದ ಅನ್ನಾ ಹ್ಯಾರಿಸ್‌ ಮತ್ತು ಮೈಕ್‌ ಬರ್ನ್ಸ್ ಔಟ್‌ ತೀರ್ಪು ನೀಡಬಹುದಿತ್ತು. ಅವರು ಥರ್ಡ್‌ ಅಂಪಾಯರ್‌ ಮೊರೆಹೋದರು. ಇಲ್ಲಿ ಔಟ್‌ ತೀರ್ಪು ಬಂತು. ಭಾರತ ವೈಟ್‌ವಾಶ್‌ ಸಂಭ್ರಮ ಆಚರಿಸಿದರೆ, ಡೀನ್‌ ಕಣ್ಣೀರು ಸುರಿಸಿದರು.

ಈ ತೀರ್ಪಿಗೆ ಇಂಗ್ಲೆಂಡ್‌ ಕ್ರಿಕೆಟ್‌ ಅಭಿಮಾನಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2019ರಲ್ಲಿ ಬೌಂಡರಿ ಲೆಕ್ಕಾಚಾರದಲ್ಲಿ ಏಕದಿನ ವಿಶ್ವಕಪ್‌ ಗೆದ್ದಾಗ “ಅದು ನಿಯಮಾವಳಿಯಲ್ಲಿದೆ’ ಎಂದು ಸಮರ್ಥಿಸಿಕೊಂಡ ಇಂಗ್ಲೆಂಡಿಗರು, ಈ ನಿಯಮಬದ್ಧ ರನೌಟ್‌ ವಿಧಾನವನ್ನು ಒಪ್ಪಿಕೊಳ್ಳುವುದಿಲ್ಲವೇಕೆ ಎಂಬುದೇ ಇಲ್ಲಿನ ಪ್ರಶ್ನೆ!

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.