ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?

ಮೀಸಲು ನಿಗದಿ, ಕ್ಷೇತ್ರ ಪುನರ್‌ವಿಂಗಡಣೆ ಹಿನ್ನೆಲೆಯಲ್ಲಿ ವಿಳಂಬ

Team Udayavani, Sep 26, 2022, 7:05 AM IST

ವಿಧಾನಸಭೆ ಬಳಿಕವೇ ತಾ.ಪಂ.-ಜಿ.ಪಂ ಚುನಾವಣೆ?

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಗೆ “ಉಪಾಂತ್ಯ’ ಎಂದೇ ಪರಿಗಣಿಸಲಾಗಿದ್ದ ತಾ.ಪಂ.- ಜಿ.ಪಂ. ಚುನಾ ವಣೆ ಗಳು 2023ರ ಮೇ ಒಳಗೆ ನಡೆಯವುದಕ್ಕೆ ಸಾಧ್ಯವೇ ಇಲ್ಲ. ರಾಜ್ಯ ಸರಕಾರದಲ್ಲಿನ ಈಗಿನ ಬೆಳ ವಣಿಗೆಗಳನ್ನು ಗಮನಿಸಿದರೆ ವಿಧಾನಸಭೆ ಚುನಾವಣೆ ಬಳಿಕವಷ್ಟೇ ತಾ.ಪಂ. ಮತ್ತು ಜಿ.ಪಂ. ಚುನಾವಣೆಗಳು ನಡೆಯಲಿವೆ.

ಒಂದು ಕಡೆ ಕ್ಷೇತ್ರಗಳ ಗಡಿ ನಿಗದಿಗೆ ಸೀಮಾ ನಿರ್ಣಯ ಆಯೋಗ ಇನ್ನೂ ಮೂರು ತಿಂಗಳು ಕಾಲಾವಕಾಶ ಕೇಳಿದೆ. ಇನ್ನೊಂದಡೆ ಕ್ಷೇತ್ರಗಳು ನಿಗದಿಯಾದ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರಕಾರ ಮೂರು ತಿಂಗಳು ಮಿತಿ ಹಾಕಿಕೊಂಡಿದೆ.

ಈ ರೀತಿ ಇನ್ನೂ ಆರು ತಿಂಗಳು ಅಂದರೆ 2023ರ ಮಾರ್ಚ್‌ ತನಕ ಕ್ಷೇತ್ರಗಳ ನಿಗದಿ, ಮೀಸಲಾತಿ ಪ್ರಕ್ರಿಯೆ ನಡೆಯುತ್ತದೆ.

ಕ್ಷೇತ್ರಗಳ ಗಡಿ ನಿಗದಿಯಾಗಿ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮತದಾರರ ಪಟ್ಟಿ ಸಿದ್ಧಪಡಿಸಿಕೊಳ್ಳಲು ರಾಜ್ಯ ಚುನಾವಣ ಆಯೋಗಕ್ಕೆ ಕನಿಷ್ಠ ಒಂದು ತಿಂಗಳು ಬೇಕು. ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸಿದ ಬಳಿಕ ಚುನಾವಣ ವೇಳಾ ಪಟ್ಟಿ ಹೊರಡಿಸಲು ಒಂದೂವರೆ ತಿಂಗಳು ಬೇಕಾಗುತ್ತದೆ. ಕನಿಷ್ಠ ಎರಡು ಹಂತಗಳಲ್ಲಿ ಚುನಾವಣೆ ನಡೆಸಿದರೂ ಅದಕ್ಕೂ ಕನಿಷ್ಠ 1 ತಿಂಗಳು ಬೇಕಾಗುತ್ತದೆ. ಈ ಮಧ್ಯೆ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಆರಂಭವಾದರೆ ತಾ.ಪಂ., ಜಿ.ಪಂ. ಚುನಾವಣ ಪ್ರಕ್ರಿಯೆ ಇನ್ನಷ್ಟು ವಿಳಂಬವಾಗುತ್ತದೆ.

ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರ ಗಳಿಗೆ ಸದಸ್ಯರ ಸಂಖ್ಯೆ ಹಾಗೂ ಜನಸಂಖ್ಯೆ ನಿಗದಿಪಡಿಸುವ ಕರ್ನಾ ಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕ್ಷೇತ್ರಗಳ ಮರು ವಿಂಗಡಣೆಗೆ ಸಾಕಷ್ಟು ಕಾಲಾವಕಾಶ ಬೇಕಾಗು ತ್ತದೆ. ಆದ್ದರಿಂದ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸುವಂತೆ ಸೀಮಾ ನಿರ್ಣಯ ಆಯೋಗ ಸೆ. 19ರಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದೆ. ಈ ಮಧ್ಯೆ ತಾ.ಪಂ., ಜಿ.ಪಂ. ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು 12 ವಾರಗಳಲ್ಲಿ ಪೂರ್ಣಗೊಳಿಸುವಂತೆ 2022ರ ಮೇ 24ರಂದು ನೀಡಿದ್ದ ಗಡುವನ್ನು ಇನ್ನೂ 6 ತಿಂಗಳು ವಿಸ್ತರಿಸುವಂತೆ ಸರಕಾರ ಹೈಕೋರ್ಟ್‌ಗೆ ಮನವಿ ಮಾಡಿದೆ.

ಸೀಮಾ ನಿರ್ಣಯ ಆಯೋಗ ರಚನೆಯಾದ ಅನಂತರ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದಿದೆ. ಆಯೋಗದ ರಚನೆಗಿಂತ ಮುನ್ನ 30 ಜಿಲ್ಲೆಗಳು 233 ತಾಲೂಕುಗಳು ಇದ್ದವು. ಅನಂತರ 31 ಜಿಲ್ಲೆ, 238 ತಾಲೂಕು ಆಗಿದೆ. ಈ ಮಧ್ಯೆ ಅನೇಕ ಗ್ರಾ.ಪಂ.ಗಳು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿವೆ. ಹೀಗಾಗಿ
ಇನ್ನಷ್ಟು ಸಮಯ ಬೇಕೆಂದು ಆಯೋಗ ಹೇಳಿದೆ.

ಸೀಮಾ ನಿರ್ಣಯ ಆಯೋಗ ಹೇಳಿದ್ದು
– ಜಿಲ್ಲಾಧಿಕಾರಿಗಳಿಂದ ಹೊಸದಾಗಿ ಪ್ರಸ್ತಾವನೆ ತರಿಸಿಕೊಳ್ಳಲು 30 ದಿನ ಕಾಲಾವಕಾಶ ಬೇಕು.
– ಪ್ರಸ್ತಾವನೆಗಳ ಪರಿಶೀಲನೆಗೆ 15 ದಿನ.
– ಕ್ಷೇತ್ರ ಮರುವಿಂಗಡಣೆ ಪ್ರಸ್ತಾವನೆ ಗಳಿಗೆ ಆಕ್ಷೇಪಣೆಗಳ ಆಹ್ವಾನ ಮತ್ತು ಅವುಗಳ ಪರಿಶೀಲನೆಗೆ 15 ದಿನ.
– ಕರಡು ಅಧಿಸೂಚನೆ ಮೇಲಿನ ಸಲಹೆ ಗಳನ್ನು ಅಂತಿಮಗೊಳಿಸಲು 15 ದಿನ.
– ಆಕ್ಷೇಪಣೆಗಳ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಅದಾಲತ್‌ಗಳನ್ನು ನಡೆಸಲು 15 ದಿನ.
– ಅಂತಿಮ ವರದಿ ಸಲ್ಲಿಸಲು ಒಂದು ವಾರ ಬೇಕು.

ಸರಕಾರ ಹೇಳಿದ್ದು
ತಾ.ಪಂ., ಜಿ.ಪಂ. ಕ್ಷೇತ್ರಗಳ ನಿಗದಿ ಹಾಗೂ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು 6 ತಿಂಗಳು ಕಾಲಾವಕಾಶ ಬೇಕು. ಈ ಕಾಲಾವಕಾಶ ಲಭಿಸದಿದ್ದರೆ ತಾಲೂಕು, ಜಿಲ್ಲೆಗಳ ಸಂಖ್ಯೆ ಹೆಚ್ಚಾದ್ದರಿಂದ ಕಾನೂನು ಬದಲಾವಣೆ ಮತ್ತು ಇನ್ನಿತರ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಾ.ಪಂ., ಜಿ.ಪಂ. ಕ್ಷೇತ್ರಗಳನ್ನು ಮರು ವಿಂಗಡಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಇಡೀ ಚುನಾವಣ ಪ್ರಕ್ರಿಯೆ ಅನೂರ್ಜಿತಗೊಳ್ಳುತ್ತದೆ.

ಚುನಾವಣ ಆಯೋಗ ಹೇಳಿದ್ದು
ಕ್ಷೇತ್ರಗಳ ನಿಗದಿಯ ಅನಂತರ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ತಾ.ಪಂ., ಜಿ.ಪಂ. ಚುನಾವಣೆಗೆ ಮತ ದಾರರ ಪಟ್ಟಿ ಪ್ರಕಟಿಸಲು ಕನಿಷ್ಠ ಒಂದು ತಿಂಗಳು ಬೇಕು. ಅನಂತರ ಚುನಾವಣ ಅಧಿಸೂಚನೆ, ಚುನಾ ವಣ ವೇಳಾ ಪಟ್ಟಿ ಪ್ರಕಟನೆಗೆ ಸಮಯ ಬೇಕಾಗುತ್ತದೆ. ಉಳಿದಂತೆ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ.

- ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.