ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಐಐಎಂಪಿ ಸಲ್ಲಿಕೆ ಬಳಿಕವಷ್ಟೇ ಅಭಿವೃದ್ಧಿ ಯೋಜನೆಗಳಿಗೆ ಅವಕಾಶ

Team Udayavani, Sep 26, 2022, 7:50 AM IST

ಸಿಆರ್‌ಝಡ್‌ ಹೊಸ ನಿಯಮ: ಕುದ್ರುಗಳಿಗಿಲ್ಲ ರಿಯಾಯಿತಿ

ಮಂಗಳೂರು: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ಸರಳೀಕೃತ ಹೊಸ ನಿಯಮಗಳಲ್ಲಿ ಕುದ್ರು (ನದಿ /ಸಮುದ್ರ ಮಧ್ಯದ ಕಿರು ದ್ವೀಪ)ಗಳಿಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಸಚಿವಾಲಯ ಯಾವುದೇ ರಿಯಾಯಿತಿ ನೀಡಿಲ್ಲ. ಹಳೆ ನಿಯಮಗಳೇ ಜಾರಿಯಲ್ಲಿರಲಿದ್ದು ಕುದ್ರುಗಳನ್ನು ಪ್ರವಾಸಿ ತಾಣವಾಗಿ ರೂಪಿಸುವ ಯೋಜನೆಗಳಿಗೆ ಹಿನ್ನಡೆಯಾಗಿದೆ.

ಕುದ್ರುಗಳಲ್ಲಿ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಆಯಾಯ ರಾಜ್ಯಗಳು ಸಮಗ್ರ ದ್ವೀಪ ಹೊಸ ನಿರ್ವಹಣ ಯೋಜನೆ (ಇಂಟಿಗ್ರೇಟೆಡ್‌ ಐಲ್ಯಾಂಡ್‌ ಮ್ಯಾನೇಜ್‌ಮೆಂಟ್‌ ಪ್ಲಾನ್‌- ಐಐಎಂಪಿ) ರೂಪಿಸಿ ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಸಚಿವಾಲಯಕ್ಕೆ ಸಲ್ಲಿಸಬೇಕಾಗಿದ್ದು ಇದನ್ನು ಪರಿಶೀಲಿಸಿ ಸಚಿವಾಲಯ ರಿಯಾಯಿತಿ ಬಗ್ಗೆ ನಿರ್ಧರಿಸಲಿದೆ.

ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣ ಪ್ರಾಧಿಕಾರವು (ಕೆಎಸ್‌ಸಿಝಡ್‌ಎಂಎ) ಸಿಆರ್‌ಝಡ್‌ ಅಧಿಸೂಚನೆ 2019ರಂತೆ ಸಿದ್ಧಪಡಿಸಿದ್ದ ನಕ್ಷೆಯಲ್ಲಿ ಕುದ್ರುಗಳ ಸಿಆರ್‌ಝಡ್‌ ವ್ಯಾಪ್ತಿಯನ್ನು 100 ಮೀಟರ್‌ನಿಂದ 20 ಮೀ.ಗೆ ಇಳಿಸಲು ಕೇಂದ್ರ ಪರಿಸರ ಅರಣ್ಯ ಮತ್ತು ಹವಾಮಾನ ಸಚಿವಾಲಯ ಅನುಮೋದನೆ ನೀಡಿಲ್ಲ.

ಕೇರಳ, ಗೋವಾದಲ್ಲಿದೆ
ನೆರೆಯ ಕೇರಳ ಮತ್ತು ಗೋವಾ ದಲ್ಲಿ 2011ರ ಸಿಆರ್‌ಝಡ್‌ನ‌ಲ್ಲಿ ಕುದ್ರುಗಳಿಗೆ ಸಂಬಂಧಿಸಿದಂತೆ ಹಿನ್ನೀರು ಹಾಗೂ ದ್ವೀಪಗಳ ಪ್ರದೇಶ ದಲ್ಲಿ ಈಗಾಗಲೇ ಇಲ್ಲಿ 100 ಮೀಟರ್‌ ಬದಲು 50 ಮೀ. ವ್ಯಾಪ್ತಿ ಇದೆ. ಹೊಸ ನಕ್ಷೆಯಲ್ಲಿ ಕರ್ನಾಟಕದಲ್ಲಿ ಸಿಆರ್‌ಝಡ್‌ ವ್ಯಾಪ್ತಿಯ ನದಿ ಹಾಗೂ ಹಿನ್ನೀರು ಪ್ರದೇಶಕ್ಕೆ ಸಿಆರ್‌ಝಡ್‌ ವ್ಯಾಪ್ತಿಯನ್ನು 100 ಮೀ. ಬದಲು 50 ಮೀ.ಗೆ ಇಳಿಸಿದ್ದು ಕುದ್ರುಗಳ ಮಿತಿಯನ್ನು 100 ಮೀ. ಉಳಿಸಿಕೊಳ್ಳಲಾಗಿದೆ.

ಅಭಿವೃದ್ಧಿಗೊಳ್ಳಲಿರುವ ಕುದ್ರುಗಳು
ದಕ್ಷಿಣ ಕನ್ನಡದಲ್ಲಿ ಜಪ್ಪಿನಮೊಗರು ಕಡೆಕಾರು ಬಳಿ ನೇತ್ರಾವತಿ ನದಿಯಲ್ಲಿರುವ ಕುದ್ರು, ಹಳೆ ಬಂದರು ಬಳಿಯಲ್ಲಿ ಫಲ್ಗುಣಿ ನದಿ ಮಧ್ಯದಲ್ಲಿರುವ ಕುದ್ರು, ತಣ್ಣೀರುಬಾವಿ ಬೀಚ್‌ ಬಳಿಯ ಕುಡ್ಲಕುದ್ರು ಸೇರಿದಂತೆ ಮಂಗಳೂರು ಸುತ್ತಲಿನ 4 ಕುದ್ರುಗಳನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣಗಳಾಗಿ ರೂಪಿಸಲು ನಿರ್ಧರಿಸಲಾಗಿತ್ತು. ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಕುದ್ರುಗಳಿದ್ದು ಪ್ರಮುಖವಾಗಿರುವ ಸೈಂಟ್‌ ಮೆರೀಸ್‌, ಬಹದ್ದೂರುಗಢ ಹಾಗೂ ದಿಂಡಿ ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಹೆಚ್ಚು ಆಕರ್ಷಣೀಯಗೊಳಿಸುವ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸಲು ನಿರ್ಧರಿಸಲಾಗಿದೆ.

ಕೇರಳದಲ್ಲಿ ವೈಪಿನ್‌ ದ್ವೀಪ, ಗುಂಡು ದ್ವೀಪ, ವಿಲಿಂಗ್ಟನ್‌ ದ್ವೀಪ, ಬೊಲ್ಗಟ್‌ ದ್ವೀಪ, ಧರ್ಮಾದಂ ಐಲ್ಯಾಂಡ್‌, ಕವ್ವಯಿ ದ್ವೀಪ, ಕಕ್ಯ ತುರ್ತು ದ್ವೀಪ, ಪೂವರ್‌ ದ್ವೀಪ, ಪೊನ್ನುಂತುರುತು ದ್ವೀಪ, ಮುನ್ರೊ ç
ದ್ವೀಪ ಸೇರಿದಂತೆ ಸುಮಾರು 8 ಸಣ್ಣ ದ್ವೀಪಗಳು ಪ್ರವಾಸೋದ್ಯಮ ಕೇಂದ್ರಗಳಾಗಿ ಅಭಿವೃದ್ಧಿ ಹೊಂದಿ ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಅಭಿವೃದ್ಧಿಗೆ ಅವಕಾಶ
ದ.ಕ., ಉಡುಪಿ ಜಿಲ್ಲೆಗಳಲ್ಲಿ ಸುಂದರ ಕುದ್ರುಗಳಿದ್ದು ಕೇರಳದಂತೆ ಪ್ರವಾಸಿ ತಾಣಗಳಾಗಿ ರೂಪಿಸಬಹು ದಾಗಿದೆ. ಮೆರಿಟೈಮ್‌ ಬೋರ್ಡ್‌ ನಲ್ಲಿ ಸಾಗರ ತೀರಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಅವಕಾಶಗಳಿವೆ. ಉಭಯ ಡಿಸಿಗಳು ಬೋರ್ಡ್‌ ಸದಸ್ಯರಾಗಿರುತ್ತಾರೆ. ಈ ಅವಕಾಶಗಳನ್ನು ಬಳಸಿಕೊಂಡು ಸಮುದ್ರತೀರ ಪ್ರದೇಶಗಳನ್ನು ಹಾಗೂ ಕುದ್ರುಗಳನ್ನು ಪ್ರವಾಸಿತಾಣಗಳಾಗಿ ಅಭಿವೃದ್ಧಿಪಡಿಸಬಹುದು.

ಹೊಸ ನಿಯಮಾವಳಿಯಲ್ಲಿ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಬರುವ ಕುದ್ರು, ದ್ವೀಪಗಳಿಗೆ ಸಂಬಂಧಿಸಿ ಹಳೆಯ ನಿಯಮಗಳನ್ನೇ ಉಳಿಸಿಕೊಳ್ಳ ಲಾಗಿದೆ. ಇವುಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಮಗ್ರ ದ್ವೀಪ ನಿರ್ವಹಣ ಯೋಜನೆ ಸಿದ್ಧಪಡಿಸಬೇಕಾಗಿದೆ.
– ಡಾ| ದಿನೇಶ್‌ ಕುಮಾರ್‌,
ಪ್ರಾದೇಶಿಕ ನಿರ್ದೇಶಕರು ಪರಿಸರ (ಪ್ರಭಾರ)

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.