ಮಗಳನ್ನು ನೋಡಲು ಬಂದ ಆರೋಪಿ ಸೆರೆ


Team Udayavani, Sep 26, 2022, 11:49 AM IST

ಮಗಳನ್ನು ನೋಡಲು ಬಂದ ಆರೋಪಿ ಸೆರೆ

ಬೆಂಗಳೂರು: ಸುಲಿಗೆ, ಮನೆಗಳವು, ಸರಗಳ್ಳತನ ಸೇರಿ 30 ಅಪರಾಧ ಪ್ರಕರಣಗಳ ಎಸಗಿ 4 ವರ್ಷಗಳಿಂದ ತಲೆಮರೆಕೊಂಡಿದ್ದ ಖತರ್ನಾಕ್‌ ಆರೋಪಿಯನ್ನು ಕೊನೆಗೂ ಅಶೋಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಸೀಫ್ ಅಲಿಯಾಸ್‌ ಪಿಸ್ತೂಲ್‌ ಬಂಧಿತ. ಆಸೀಫ್ 3 ವರ್ಷಗಳ ಹಿಂದೆ ದರೋಡೆ, ಸುಲಿಗೆ, ಮನೆ ಕಳವು, ಸರಗಳ್ಳತನ ಸೇರಿ 30ಕ್ಕೂ ಅಧಿಕ ಅಪರಾಧ ಪ್ರಕರಣ ಎಸಗಿದ್ದ. ಕೆಲ ಪ್ರಕರಣಗಳಲ್ಲಿ ಬಂಧನ ಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿದ್ದ. ಆದರೆ, ನಂತರ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಅಪರಾಧ ಎಸಗಿದ್ದ ಹಿನ್ನೆಲೆಯಲ್ಲಿ ಆತನಿಗಾಗಿ ವಿವಿಧೆಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ, ಚಲಾಕಿಯಾಗಿದ್ದ ಆಸೀಫ್ ಎಲ್ಲೂ ತನ್ನ ಸಣ್ಣ ಸುಳಿವನ್ನೂ ಬಿಟ್ಟು ಕೊಡಲಿಲ್ಲ. ಆಗಾಗ ತಾನು ವಾಸಿಸುತ್ತಿದ್ದ ಮನೆಗಳನ್ನು ಬದಲಾಯಿಸುತ್ತಿದ್ದ. ಹೀಗಾಗಿ ಆತನ ಪತ್ತೆ ಸವಾಲಾಗಿತ್ತು.

ಶಾಲಾ ವಾಹನದಲ್ಲಿ ಹೋಗಿ ಸೆರೆ: ಇತ್ತೀಚೆಗೆ ಪತ್ನಿ ಜತೆ ಜಗಳ ಮಾಡಿ ಆಕೆಯಿಂದ ದೂರ ಹೋಗಿದ್ದ. ಆರೋಪಿಗೆ ಓರ್ವ ಮಗಳಿದ್ದು, ಆಕೆಯ ಮೇಲೆ ಪ್ರೀತಿಯಿದ್ದ ಕಾರಣ ನೋಡಲೆಂದು ಆಗಾಗ ಆಕೆಯ ಶಾಲೆಯ ಬಳಿ ಬಂದು ಮಾತನಾಡಿಸಿಕೊಂಡು ಹೋಗುತ್ತಿದ್ದ. ಈ ಸಂಗತಿ ಅಶೋಕ್‌ನಗರ ಪೊಲೀಸರ ಗಮನಕ್ಕೂ ಬಂದಿತ್ತು. ಆರೋಪಿಯ ಮಗಳು ಶಾಲೆಗೆ ಹೋಗುತ್ತಿದ್ದ ಸ್ಕೂಲ್‌ ವ್ಯಾನ್‌ ಸಿಬ್ಬಂದಿಗೆ ಮಾಹಿತಿ ನೀಡಿ, ಸಿವಿಲ್‌ ಧಿರಿಸನಲ್ಲಿ ಸ್ಕೂಲ್‌ ವ್ಯಾನ್‌ನಲ್ಲಿ ಹೋಗಿದ್ದರು. ಮಗಳು ಬಸ್‌ನಿಂದ ಇಳಿಯುತ್ತಿದ್ದಂತೆ ಆಸೀಫ್ ಮಗಳನ್ನು ನೋಡಲು ಕಾತುರನಾಗಿ ಶಾಲೆ ಬಳಿ ನಿಂತಿದ್ದ. ಇದೇ ವೇಳೆ ಆತನನ್ನು ಸುತ್ತುವರಿದು ಬಂಧಿಸಿದ್ದಾರೆ.

ಪಿಸ್ತೂಲ್‌ನಂತೆ ಕೈ ಬೆರಳು :

ಆರೋಪಿ ಆಸೀಫ್ ಅಲಿಯಾಸ್‌ ಪಿಸ್ತೂಲ್‌ನ ಕೈ ಬೆರಳು ಗೂನವಾಗಿದ್ದು, ಕೊನೆಯ ಎರಡು ಬೆರಳನ್ನು ಸದಾ ಮಡಿಚುತ್ತಿದ್ದ. ಆತನ ಒಂದು ಕೈಯ ಬೆರಳುಗಳು ಪಿಸ್ತೂಲ್‌ನಂತೆ ಕಾಣುತ್ತಿದ್ದವು. ಇದಕ್ಕಾಗಿ ಆತನಿಗೆ ಆಸೀಫ್ ಅಲಿಯಾಸ್‌ ಪಿಸ್ತೂಲ್‌ ಎಂಬ ಹೆಸರು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.