ಗಂಗಾವತಿ: ಸರ್ವರ್ ತೊಂದರೆ ಪಡಿತರ ಅಕ್ಕಿ ಪಡೆಯಲು ಪರದಾಟ
Team Udayavani, Sep 26, 2022, 2:29 PM IST
ಗಂಗಾವತಿ: ಸಾರ್ವಜನಿಕ ಪಡಿತರ ದವಸ ಧಾನ್ಯ ವಿತರಿಸುವ ಆಹಾರ ಇಲಾಖೆಯ ಸರ್ವರ್ ತಾಂತ್ರಿಕ ತೊಂದರೆಯ ಕಾರಣ ಪಡಿತರ ವಿತರಣೆ ವಿಳಂಬವಾಗುತ್ತಿದೆ .ಎರಡರಿಂದ 3ತಾಸು ಸರ್ವರ್ ಬಾರದೇ ಇರುವುದರಿಂದ ಪಡಿತರ ಗ್ರಾಹಕರಿಗೆ ಕೂಪನ್ ನೀಡಲು ನ್ಯಾಯಬೆಲೆ ಅವರು ಸಂಕಷ್ಟ ಎದುರಿಸುತ್ತಿದ್ದಾರೆ.
ಕಳೆದ 2 ತಿಂಗಳಿಂದ ಈ ತೊಂದರೆಯಾಗಿದ್ದು ಆಹಾರ ಪಡಿತರ ವಿತರಣೆ ವಿಳಂಬವಾಗುತ್ತಿದೆ .ಪ್ರತಿ ನ್ಯಾಯಬೆಲೆ ಅಂಗಡಿ ಮುಂದೆ ತಾಸುಗಟ್ಟಲೆ ಕಾಯುವ ಸ್ಥಿತಿ ಪಡಿತರ ಕಾರ್ಡುದಾರರಿಗೆ ಉಂಟಾಗಿದೆ. ಪಡಿತರ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಡಿತರಗಳನ್ನು ಹೊಂದಾಣಿಕೆ ಮಾಡಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಬೇಕಾಗಿದೆ.ಇದರಿಂದ ಸರ್ವರ್ ಮತ್ತು ಓಟಿಪಿ ತೊಂದರೆ ಉಂಟಾಗಿದ್ದು ಇದನ್ನು ಸರಿಪಡಿಸಬೇಕಾದ ಎನ್ ಐಸಿ ನಿರ್ಲಕ್ಷ್ಯ ವಹಿಸಿದೆ.
ಪಡಿತರ ವಿತರಣೆ ಕುರಿತು ಈಗಾಗಲೇ ಇತ್ತೀಚೆಗೆ ಮುಕ್ತಾಯವಾದ ವಿಧಾನಮಂಡಲದ ಅಧಿವೇಶನದಲ್ಲೂ ಚರ್ಚೆಯಾಗಿದ್ದು ಆಹಾರ ಇಲಾಖೆಯ ಸರ್ವರ್ ತೊಂದರೆ ನೀಗಿಸುವ ಕುರಿತು ಸರ್ಕಾರ ಯಾವುದೇ ಕೆಲಸ ಮಾಡುತ್ತಿಲ್ಲ ಎಂದುಆಡಳಿತ ಮತ್ತು ವಿಪಕ್ಷಗಳ ಶಾಸಕರು ಸರ್ಕಾರದ ಗಮನ ಸೆಳೆದಿದ್ದರು.
ಗ್ರಾಮೀಣ ಮತ್ತು ನಗರ ಭಾಗದಲ್ಲಿ ಕೂಲಿ ಕೆಲಸಕ್ಕೆ ತೆರಳದೆ ಪಡಿತರ ಪಡೆಯಲು ದಿನಗಟ್ಟಲೆ ಕಾಯುವ ಸ್ಥಿತಿ ಸಾರ್ವಜನಿಕರಿಗೆ ಉಂಟಾಗಿದೆ ಸರಕಾರ ಕೂಡಲೇ ಕ್ರಮ ಕೆಗೊಂಡು ಪಡಿತರ ವಿತರಣೆಯ ಸರ್ವರ್ ದುರಸ್ತಿ ಕಾರ್ಯ ಮಾಡಬೇಕಿದ್ದು ಪಡಿತರವನ್ನು ಪಡೆಯುವ ವ್ಯವಸ್ಥೆಯನ್ನು ಸರಳಗೊಳಿಸಬೇಕಾಗಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ .
ತೊಂದರೆ ಕುರಿತು ಸರ್ಕಾರಕ್ಕೆ ಪತ್ರ: ಸರ್ವರ್ ತೊಂದರೆ ಪರಿಣಾಮ ಸಾರ್ವಜನಿಕರಿಗೆ ಪಡಿತರ ವಿತರಣೆಯ ತೊಂದರೆ ಕುರಿತು ಈಗಾಗಲೇ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ ಶೀಘ್ರವೇ ತಾಂತ್ರಿಕ ಸರಿಪಡಿಸಿ ಸರ್ವರ್ ಸರಳವಾಗಿ ಸುಲಭವಾಗಿ ಪಡಿತರದಾರರಿಗೆ ಆಹಾರ ಪಡಿತರಗಳು ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಹಾರ ಇಲಾಖೆಯ ಕೊಪ್ಪಳ ಜಿಲ್ಲಾ ಉಪನಿರ್ದೇಶಕ ಮಲ್ಲಿಕಾರ್ಜುನ್ ಉದಯವಾಣಿಗೆ ತಿಳಿಸಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ