ನವರಾತ್ರಿ ಹಬ್ಬದ ಅಂಗವಾಗಿ ಬನ್ನಿಮಹಾಕಾಳಿಗೆ ಮಹಿಳೆಯರಿಂದ ವಿಶೇಷ ಮೌನ ವೃತ ಪೂಜೆ, ಆಚರಣೆ
Team Udayavani, Sep 27, 2022, 4:44 PM IST
ದೋಟಿಹಾಳ: ನವರಾತ್ರಿ ಹಬ್ಬ ಆರಂಭವಾದರೆ ಸಾಕು ಮಹಿಳೆಯರಿಗೆ ಎಲ್ಲಿಲ್ಲದ ಸಡಗರ, ಸಂಭ್ರಮ. ಕಾರಣ ನವರಾತ್ರಿ ಹಬ್ಬದ 9 ದಿನಗಳ ಕಾಲ ಮಹಿಳೆಯರು ವಿಶೇಷ ಮೌನವೃತ ಆಚರಣೆ ಮಾಡುತ್ತಿರುವುದಾಗಿದೆ. ಕಳೆದ 20 ವರ್ಷಗಳಿಂದಲೂ ಗ್ರಾಮದಲ್ಲಿ ಈ ವಿಶೇಷ ವೃತ ಕಂಡು ಬರುತ್ತಿದೆ.
ಕಳೆದ ಎರಡು ವರ್ಷ ಕೊರೊನಾ ಮಾಹಾಮಾರಿಯಿಂದ ಮಂಕಾಗಿದ್ದ ದಸರಾ ಹಬ್ಬ ಈ ವರ್ಷ ಮತ್ತೆ ತನ್ನ ವೈಭವವನ್ನು ಕಾಣುತ್ತಿದೆ. ಸೋಮವಾರಿದಿಂದ ನವರಾತ್ರಿ ಆರಂಭವಾದ ಪ್ರಯುಕ್ತ ಗ್ರಾಮದಲ್ಲಿನ ಮಹಿಳೆಯರು ಮತ್ತು ಮಕ್ಕಳು ಆಶ್ವೀಜ ಮಾಸದ ನವರಾತ್ರಿ ಹಬ್ಬದಲ್ಲಿ ವಿಶಿಷ್ಠವಾದ ಮೌನಾಚರಣೆಯೊಂದನ್ನು ಆಚರಿಸುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಇಲ್ಲಿನ ನೂರಕ್ಕೂ ಹೆಚ್ಚು ಮಹಿಳೆಯರು ಬೆಳಗಿನ ಬ್ರಾಹ್ಮಿ ಮುಹೂರ್ತದಲ್ಲಿ ಮೌನವಾಗಿ ಬನ್ನಿ ಮಹಾಕಾಳಿ ಕಟ್ಟೆಗೆ ಹೋಗಿ ಪೂಜೆ ಸಲ್ಲಿಸಿ ವಿಶೇಷವಾದ ಮೌನವೃತಾಚರಣೆ ಬೆಳಗಿನ ಜಾವ ಆಚರಿಸುತ್ತಿರುವುದು ಕಂಡು ಬರುತ್ತದೆ.
ಆಚರಣೆ ಕ್ರಮ: ಆಶ್ವೀಜ ಮಾಸದ ನವರಾತ್ರಿಯ ಪ್ರತಿದಿನ ಗ್ರಾಮದ ಯುವತಿಯರು, ಮಹಿಳೆಯರು, ಮತ್ತು ಮಕ್ಕಳು ಬೆಳಗಿನ ಜಾವ ನಾಲ್ಕು ಗಂಟೆಗೆ ಎದ್ದು ಮನೆ ಸ್ವಚ್ಛಗೊಳಿಸಿ, ದೇವರ ಕೋಣೆಯಲ್ಲಿ ರಂಗೋಲಿ ಹಾಕಿ, ಶೃಂಗಾರ ಮಾಡಿ ಮೌನವಾಗಿಯೇ ಇದ್ದು, ಮಡಿವಂತಿಕೆಯಿಂದ ಮನೆಯಲ್ಲಿ ದೇವರಿಗೆ ದೀಪ ಹಚ್ಚಿ ಗುಂಪು ಗುಂಪಾಗಿ ಮಬ್ಬು ಕತ್ತಲಲ್ಲಿ ಕೈಯಲ್ಲಿ ಹೂ-ಕಾಯಿ, ಕುಂಕುಮ ಹಣ್ಣುಹಂಪಲುಗಳೊಂದಿಗೆ ಗ್ರಾಮದಲ್ಲಿರುವ ಬನ್ನಿ ಮಹಾಕಾಳಿ ಕಟ್ಟೆಗೆ ಯಾರೊಂದಿಗೂ ಮಾತನಾಡದೆ ತೆರಳಿ ಪೂಜೆ ಸಲ್ಲಿಸುತ್ತಾರೆ.
ಅಕ್ಕಪಕ್ಕ ಜನರಿದ್ದರೂ ಪರಸ್ಪರ ಮಾತನಾಡದೆ ಕತ್ತಲಲ್ಲಿ ಮೌನವಾಗಿಯೆ ಹೆಜ್ಜೆ ಹಾಕುತ್ತಾರೆ. ಬನ್ನಿಕಟ್ಟೆಗೆ ಹೋಗಿ ಪೂಜೆ ಸಲ್ಲಿಸಿ ತಮ್ಮ ತಮ್ಮ ಪ್ರಾರ್ಥನೆ, ಹರಕೆಯನ್ನು ದೇವರಿಗೆ ಸಲ್ಲಿಸುತ್ತಾರೆ. ಬನ್ನಿಕಟ್ಟೆಗೆ ಇದೆ ರೀತಿ ಮೌನ ಆಚರಿಸಲು ಬರುವ ತಮ್ಮ ಗೆಳತಿಯರೊಂದಿಗೂ ಅಲ್ಲಿ ಮಾತನಾಡುವುದಿಲ್ಲ. ಪೂಜೆ ಮುಗಿಸಿಕೊಂಡು ಮನೆಗೆ ಮರಳಿದ ಬಳಿಕವೇ ಮೌನ ಬಿಟ್ಟು ಮಾತನಾಡುತ್ತಾರೆ.
ನಂಬಿಕೆ: ಬ್ರಾಹ್ಮಿ ಮಹೂರ್ತದಲ್ಲಿ ಮೌನವೃತ ಆಚರಿಸಿ ಬನ್ನಿ ಮಹಾಕಾಳಿಗೆ ಪೂಜೆ ಸಲ್ಲಿಸುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆ ಎಂಬುದು ಹಿಂದೂ ಧರ್ಮದ ಶ್ರೇಷ್ಟವಾದ ನಂಬಿಕೆಯಾಗಿದೆ. ಮೌನವೃತಾಚರಣೆ ಸುಮಾರು 18-20 ವರ್ಷಗಳಿಂದ ಆಚರಣೆಯಲ್ಲಿದೆ. ಈ ವೃತಾಚರಣೆಯಿಂದ ಗ್ರಾಮದ ಹಲವಾರು ಜನರಿಗೆ ಒಳಿತಾಗಿರುವ ಉದಾಹರಣೆಗಳಿವೆ. ಮಹಿಳೆಯರು ತಮ್ಮ ಗಂಡಂದಿರ ಒಳಿತಿಗಾಗಿ ಪೂಜೆ ಸಲ್ಲಿಸಿದರೇ, ಯುವತಿಯರು ಕಂಕಣಭಾಗ್ಯ ದೊರೆತು ಉತ್ತಮ ಜೀವನ ಸಿಗಲಿ ಎಂದು ಬೇಡಿಕೊಳ್ಳುತ್ತಾರೆ. ಮಕ್ಕಳು ಒಳ್ಳೆಯ ವಿಧ್ಯಾಬ್ಯಾಸ ದೊರೆಯಲಿ ಎಂದು ಪ್ರಾರ್ಥಿಸುತ್ತಾರೆ.
ಕೆಲವೇ ಜನರಿಂದ ಪ್ರಾರಂಭವಾದ ಈ ಆಚರಣೆ ನಂತರದ ದಿನಗಳಲ್ಲಿ ನಂಬಿಕೆ ಬಲವಾದ ಕಾರಣ ಊರಿನ ಪ್ರತಿ ಮನೆಯಿಂದ ಒಬ್ಬರಾದರೂ ಮೌನಾಚರಣೆ ಮೂಲಕ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸುತ್ತಾರೆ.
-ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್