ನಿಷೇಧ ಬೆನ್ನಲ್ಲೇ ಕಠಿನ ಕ್ರಮ: ರಾಜ್ಯಾದ್ಯಂತ 44 ಕಡೆ ಪಿಎಫ್ಐ ಕಚೇರಿಗೆ ಬೀಗ
Team Udayavani, Sep 30, 2022, 6:55 AM IST
ಬೆಂಗಳೂರು/ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 44ಕ್ಕೂ ಹೆಚ್ಚು ಪಿಎಫ್ಐ ಹಾಗೂ ಅದರ ಸಹವರ್ತಿ ಕಚೇರಿಗಳಿಗೆ ಗುರುವಾರ ಬೀಗ ಜಡಿಯ ಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೇಲೆ ಕೇಂದ್ರ ಸರಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಸಂಘಟನೆಯ ಹಾಗೂ ಅದರ 8 ಸಹವರ್ತಿ ಸಂಘಟನೆಗಳ ಕಚೇರಿಗಳಿಗೆ ಬೀಗ ಹಾಕಲಾಯಿತು.
ಬೆಂಗಳೂರಿನ ಕೇಂದ್ರ ವಿಭಾಗದ 2, ಉತ್ತರ ವಿಭಾಗದ 2 ಮತ್ತು ಪೂರ್ವ ವಿಭಾಗದ 1 ಕಚೇರಿಗೆ ಬೀಗ ಹಾಕಲಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ 19 ಹಾಗೂ ಉಡುಪಿಯಲ್ಲಿ 9 ಕಡೆ ಕಚೇರಿಗಳನ್ನು ಮುಚ್ಚಲಾಗಿದೆ. ಉಡುಪಿ ನಗರ, ಮಲ್ಪೆಯ ಹೂಡೆ, ಗಂಗೊಳ್ಳಿಯಲ್ಲಿ ಪಿಎಫ್ಐ ಕಚೇರಿ ಮೇಲೆ ಗುರುವಾರ ದಾಳಿ ನಡೆಸಲಾಯಿತು. ಶುಕ್ರವಾರವೂ ಬೀಗ ಹಾಕುವ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಹಲಸೂರು ಗೇಟ್, ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಚೇರಿಗಳು, ಉತ್ತರ ವಿಭಾಗದಲ್ಲಿ ಎರಡು ಪಿಎಫ್ಐನ ಎರಡು ಅಂಗ ಸಂಸ್ಥೆಗಳು, ಕೆ.ಜಿ.ಹಳ್ಳಿಯಲ್ಲಿರುವ ಒಂದು ಕಚೇರಿಗೆ ಬೀಗ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಕಾನೂನು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ಕುಮಾರ್, ಬೆಂಗಳೂರು ಸೇರಿ ರಾಜ್ಯದಲ್ಲಿ ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳು ಸೇರಿ 44 ಕಚೇರಿಗಳಿಗೆ ಪೊಲೀಸರು ಬೀಗ ಹಾಕಿದ್ದಾರೆ. ಜತೆಗೆ ಬುಧವಾರ ಮತ್ತು ಗುರುವಾರ 50ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಶೋಧಿಸಲಾಗಿದೆ ಎಂದು ಹೇಳಿದರು.
12 ಮಂದಿ ನಾಪತ್ತೆ? :
ಇದೇ ಮಂಗಳೂರಿನಲ್ಲಿ ನಿಷೇಧಿತ ಸಂಘಟನೆಯ ಬಂಧನದ ಪಟ್ಟಿಯಲ್ಲಿದ್ದ 12 ಮಂದಿ ನಾಯಕರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಂಗಳೂರು ನಗರದ 10 ಮತ್ತು ಎಸ್ಪಿ ಕಚೇರಿ ವ್ಯಾಪ್ತಿಯ ಒಟ್ಟು 14 ಮಂದಿಯನ್ನು ಸೆ.27ರಂದು ಮುಂಜಾನೆ ಬಂಧಿಸಲಾಗಿತ್ತು.
50ಕ್ಕೂ ಹೆಚ್ಚು ಕಡೆ ಶೋಧ ಕಾರ್ಯ :
ಪಿಎಫ್ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ನಿಷೇಧಿಸಿದ ಬಳಿಕ ಸಂಘಟನೆಯ ಕೆಲ ಕಾರ್ಯಕರ್ತರು ಅಕ್ರಮವಾಗಿ ಮನೆ ಹಾಗೂ ಇತರ ಸ್ಥಳಗಳಲ್ಲಿ ಸಭೆ ನಡೆಸಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬುಧವಾರ ಮತ್ತು ಗುರುವಾರ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಹಾಗೂ ಇತರೆಡೆ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ನಡೆಸಲಾಗಿದೆ. ಕಚೇರಿಯಲ್ಲಿದ್ದ ಕಾರ್ಯಕರ್ತರನ್ನು ಹೊರಗೆ ಕಳುಹಿಸಿ ಬೀಗ ಹಾಕಲಾಗಿದೆ. ಹಾಗೆಯೇ ಸಭೆ ನಡೆಸಿದ ಸ್ಥಳಗಳನ್ನು ಮಹಜರು ನಡೆಸಿ ಪೊಲೀಸ್ ನಿಯಂತ್ರಣಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ