ಮೈಸೂರು ದಸರಾ; ತುಮಕೂರು ಜಿಲ್ಲೆಯ ಸ್ತಬ್ಧಚಿತ್ರ


Team Udayavani, Sep 30, 2022, 12:30 PM IST

7

ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಕಲ್ಪತರು ನಾಡಿನಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್.ಎ.ಎಲ್. ಹೆಲಿಕ್ಯಾಪ್ಟರ್ ಘಟಕ ಮತ್ತು ಪ್ರಸಿದ್ದ ಪಾವಗಡ ಸೋಲಾರ್ ಪಾರ್ಕ್ ಸ್ತಬ್ಧಚಿತ್ರ ಜನರ ಗಮನ ಸೆಳೆಯಲಿವೆ.

ಕೋವಿಡ್-19 ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೈಸೂರು ದಸರಾ ಮಹೋತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ.

ಅಕ್ಟೋಬರ್ 5 ರಂದು ಜರುಗಲಿರುವ ಜಂಬೂ ಸವಾರಿಗೆ ತುಮಕೂರು ಜಿಲ್ಲೆಯಿಂದ ಎರಡು ವಿಷಯಾಧಾರಿತ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ನಿಟ್ಟೂರಿನಲ್ಲಿ ಸ್ಥಾಪನೆಯಾಗಿ ಉದ್ಘಾಟನೆಗೆ ಸಿದ್ಧವಾಗಿರುವ ಹೆಚ್.ಎ.ಎಲ್. ಹೆಲಿಕ್ಯಾಪ್ಟರ್ ತಯಾರಿಕಾ ಘಟಕ ಮತ್ತು ಪಾವಗಡದ ವಿಶ್ವದ ಮೊದಲ ಬೃಹತ್ ಸೋಲಾರ್ ಪಾರ್ಕ್ ವಿಷಯವನ್ನು ಹೊಂದಿರುವ ಸ್ತಬ್ಧಚಿತ್ರ ಅಂದು ಪ್ರದರ್ಶನಗೊಳ್ಳಲಿದೆ.

ಸ್ತಬ್ಧಚಿತ್ರದ ವಿವರ:

ಹೆಚ್.ಎ.ಎಲ್. ಹೆಲಿಕ್ಯಾಪ್ಟರ್ ತಯಾರಿಕಾ ಘಟಕ: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರು ಬಿದರೆಹಳ್ಳ ಕಾವಲಿನಲ್ಲಿ 610 ಎಕರೆ ಜಾಗದಲ್ಲಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಹೆಲಿಕ್ಯಾಪ್ಟರ್ ತಯಾರಿಕಾ ಘಟಕದಲ್ಲಿ ವಾರ್ಷಿಕ ಸೇನೆಗೆ ಬಳಸುವ 30 ಲಘು ವಿಮಾನಗಳು ತಯಾರಾಗಲಿವೆ. ಘಟಕದಿಂದ 2 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗ ದೊರೆಯಲಿದೆ. ಈ ವರ್ಷ ಘಟಕ ಉದ್ಘಾಟನೆ ಆಗಲಿದೆ. ಅದಕ್ಕಾಗಿ ಸಿದ್ಧತೆಯೂ ನಡೆದಿದೆ.

ಪಾವಗಡ ಸೋಲಾರ್ ಪಾರ್ಕ್ ವಿಶ್ವದ ಮೊದಲ ಬೃಹತ್ ಸೋಲಾರ್ ವಿದ್ಯುತ್ ತಯಾರಿಕಾ ಘಟಕವಾಗಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ 13 ಸಾವಿರ ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು 2050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತದೆ.

ವಿಶೇಷ:

ಸುಮಾರು 27 ಅಡಿ ಉದ್ದ 12 ಅಡಿ ಅಗಲ ಹಾಗೂ 13 ಅಡಿ ಎತ್ತರದಲ್ಲಿ ಎರಡು ವಿಷಯಗಳ ಸ್ತಬ್ಧಚಿತ್ರ ನಿರ್ಮಾಣವಾಗುತ್ತಿದೆ. ಮುಂಭಾಗದಲ್ಲಿ ಹೆಲಿಕ್ಯಾಪ್ಟರ್ ಮತ್ತು ಘಟಕ, ಹಿಂಭಾಗದಲ್ಲಿ ಸೋಲಾರ್ ಪಾರ್ಕ್ ವಿನ್ಯಾಸಗೊಳಿಸಲಾಗಿದೆ.

ಸೆಪ್ಟೆಂಬರ್ 19 ರಿಂದ ಕಲಾವಿದ, ಪತ್ರಕರ್ತ ತಿಪಟೂರು ಕೃಷ್ಷನೇತೃತ್ವದಲ್ಲಿ ಸುಮಾರು 18 ಜನ  ಕಲಾವಿದರು ಸೇರಿ ಕಲಾಕೃತಿ ತಂಡ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿದ್ದಾರೆ.

2015 ರಿಂದ ತುಮಕೂರು ಜಿಲ್ಲೆ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿರುವ  ಕಲಾಕೃತಿ ತಂಡ ಮೂರು ಬಾರಿ ವಿಭಾಗ ಮಟ್ಟದ ಪ್ರಶಸ್ತಿ ಪಡೆದು, ಜಿಲ್ಲೆಗೆ ಕೀರ್ತಿ ತಂದಿರುವುದು ವಿಶೇಷ.

ಅರಳುಗುಪ್ಪೆ ಚನ್ನಕೇಶವ ದೇವಾಲಯ, ಎಡೆಯೂರು ಸಿದ್ದಲಿಂಗೇಶ್ವರ, ಸಿದ್ದಗಂಗ ಶ್ರೀ ಶಿವಕುಮಾರ ಸ್ವಾಮಿಗಳ ಸ್ತಬ್ಧಚಿತ್ರ ಜನಮನ್ನಣೆ ಗಳಿಸಿದ್ದವು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.