ಸಿದ್ದು- ಡಿಕೆಶಿ ಫೋಟೊ ಹಾಕಿ ‘ಕೂಡಿ ಬಾಳಿದರೆ ಸ್ವರ್ಗ’ ಎಂದು ಟ್ವೀಟ್ ಮಾಡಿದ ರಾಹುಲ್
Team Udayavani, Sep 30, 2022, 4:40 PM IST
ಬೆಂಗಳೂರು: ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ಪ್ರಾರಂಭಿಸಿರುವ ರಾಹುಲ್ ಗಾಂಧಿ “ಕೂಡಿ ಬಾಳಿದರೆ ಸ್ವರ್ಗ” ಎಂದು ಟ್ವೀಟ್ ಮಾಡಿರುವುದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.
ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಾಣ ಪ್ರತಿಪಾದಿಸಿದ್ದ ಮಹಾ ಗುರು ಬಸವಣ್ಣನ ನಾಡಿಗೆ ನಾವು ಪ್ರವೇಶಿಸುತ್ತಿದ್ದೇವೆ. ರಾಜ್ಯದ ಜನತೆಯ ಧ್ವನಿ ಆಲಿಸುವುದಕ್ಕೆ ನಾವು ಬಂದಿದ್ದೇವೆ ಎಂಬ ಬರಹದೊಂದಿಗೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಫೋಟೋ ಹಾಕಿ “ಕೂಡಿ ಬಾಳಿದರೆ ಸ್ವರ್ಗ” ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ರಾಹುಲ್ ಹೆಜ್ಜೆ ಜೊತೆಗೆ ಇತಿಹಾಸ ನಿರ್ಮಾಣವಾಗುತ್ತಿದೆ: ಡಿಕೆ ಶಿವಕುಮಾರ್
ಉಭಯ ನಾಯಕರು ಒಳಜಗಳ ಮರೆತು ಒಟ್ಟಾಗಿ ಸಾಗಬೇಕೆಂದು ಈ ಮೂಲಕ ರಾಹುಲ್ ಗಾಂಧಿ ಆಶಯ ವ್ಯಕ್ತಪಡಿಸಿದ್ದಾರೆಂಬ ವ್ಯಾಖ್ಯಾನ ಈಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ.
“ಕೂಡಿ ಬಾಳಿದರೆ ಸ್ವರ್ಗ”
Greetings to Karnataka – the land of the great Guru Basavanna, whose teachings of building an inclusive society is the guiding light of #BharatJodoYatra.
We have come to listen to you. This Yatra is the voice of the people of Karnataka. pic.twitter.com/YMSrM1CMBz
— Rahul Gandhi (@RahulGandhi) September 30, 2022
ಭಾರತ್ ಜೋಡೋ ವೇದಿಕೆಯನ್ನು ರಾಹುಲ್ ಗಾಂಧಿ ಅವರು ಮತ್ತೆ ನಾಯಕರ ಒಗ್ಗೂಡುವಿಕೆಗೆ ಬಳಸಿಕೊಂದಿದ್ದು ವಿಶೇಷವಾಗಿತ್ತು. ಕಾರ್ಯಕ್ರಮದಲ್ಲಿ ಡೋಲು ಬಾರಿಸಲು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಕೈಯನ್ನು ಒಟ್ಟಾಗಿ ಹಿಡಿದುಕೊಂಡು ರಾಹುಲ್ ಡೋಲು ಬಾರಿಸಿ ಸಂದೇಶ ನೀಡಿದರು.
ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮೊದಲು ಪ್ರತ್ಯೇಕವಾಗಿ ಡೋಲು ಬಾರಿಸಿದರು. ಬಳಿಕ ರಾಹುಲ್ ತಾವೇ ಸಿದ್ದು, ಡಿಕೆಶಿ ಕೈ ಹಿಡಿದುಕೊಂಡು ಡೋಲು ಬಾರಿಸಿದರು.
ಈ ಹಿಂದೆ ಸಿದ್ದರಾಮೋತ್ಸವದಲ್ಲೂ ಸಿದ್ದರಾಮಯ್ಯರನ್ನು ಅಪ್ಪಿಕೊಳ್ಳುವಂತೆ ಡಿಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ಕೈಸನ್ನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ