ನೀರು ಸಂಗ್ರಹಣಾ ಘಟಕಕ್ಕೆ ಸಹಾಯಧನ


Team Udayavani, Oct 1, 2022, 3:27 PM IST

tdy-7

ದೇವನಹಳ್ಳಿ: ಬಯಲು ಸೀಮೆಯ ಪ್ರದೇಶ ಆಗಿರುವುದರಿಂದ ಮಳೆ ನೀರನ್ನು ಅವಲಂಬಿಸಿದ್ದ ಜನರಿಗೆ ಜಿಲ್ಲೆಯಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ವೈಯಕ್ತಿಕ, ಸಮುದಾಯ ನೀರು ಸಂಗ್ರಹಣಾ ಘಟಕ ನಿರ್ಮಾಣ ಕಾರ್ಯಕ್ರಮಕ್ಕೆ ಸಿದ್ಧತೆ ತೊಡಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು. ಮಳೆಗಾಲದಲ್ಲಿ ಅಥವಾ ಆಯಾ ಭಾಗಗಳಲ್ಲಿ ನೀರಿನ ಸೌಲಭ್ಯ ಲಭ್ಯವಿದ್ದಲ್ಲಿ ಈ ಹೆಚ್ಚುವರಿ ನೀರನ್ನು ಸಂಗ್ರಹಣೆ ಮಾಡಿ ಹಾಗೂ ತೋಟಗಾರಿಕೆ ಬೆಳೆ ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ಸಂರಕ್ಷಿಸುವ ಅವಶ್ಯಕತೆ ಇರುವುದರಿಂದ ನೀರು ಸಂಗ್ರಹಣಾ ಘಟಕ ರಚಿಸಿಬೇಕು.

ಮಳೆಗಾಲದಲ್ಲಿ ಮಳೆಯ ನೀರು, ನಾಲೆ ನೀರು, ಹರಿಯುವ ನೀರು ಹೀಗೆ ಇತ್ಯಾದಿ ಮೂಲಗಳಿಂದ ನೀರನ್ನು ಸಂಗ್ರಹಿಸಿ ಅದರ ಸದುಪಯೋಗ ಪಡಿಸಿಕೊಂಡು ಅವಶ್ಯಕವಾಗಿರುವುದರಿಂದ ನೆಲ ಮಟ್ಟದಿಂದ ಕೆಳಗೆ ರಚಿಸಿರುವ ನೀರು ಸಂಗ್ರಹಣಾ ಘಟಕ ಮತ್ತು ನೆಲ ಮಟ್ಟಕ್ಕಿಂತ ಮೇಲೆ ರಚಿಸಿರುವ ನೀರು ಸಂಗ್ರಹ ವಿನ್ಯಾಸಗಳ ಅನುಗುಣ ಸಹಾಯಧನವನ್ನು ತೋಟಗಾರಿಕೆ ಇಲಾಖೆ ನೀಡಲಾಗುವುದು ಎಂದು ಮಾಹಿತಿ ನೀಡಿದೆ. ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ನೀರು ಸಂಗ್ರಹಣಾ ಘಟಕ ಅನುಷ್ಠಾನ ಗೊಳಿಸುತ್ತಿದೆ.

ಜಿಲ್ಲೆಯ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ತೋಟಗಾರಿಕೆ ಇಲಾಖೆ ಆಹ್ವಾನಿಸಿದೆ. ಅ.7ರ ಒಳಗಾಗಿ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ತೋಟಗಾರಿಕೆ ಇಲಾಖೆ ಕೋರಿದೆ.

ಅಧಿಕಾರಿಗಳನ್ನು ಸಂಪರ್ಕಿಸಿ: ತೋಟಗಾರಿಕೆ ಬೆಳೆಗಳಿಗೆ ನೀರಿನ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲಮಟ್ಟಕ್ಕಿಂತ ಕೆಳಗಿರುವ 4,500 ಚ.ಮೀ., 6,500 ಚ.ಮೀ. ಅಳತೆಯುಳ್ಳ ವೈಯಕ್ತಿಕ, ಸಮುದಾಯ ನೀರು ಸಂಗ್ರಹಣ ಘಟಕಗಳನ್ನು ನಿರ್ಮಿಸಿಕೊಳ್ಳುವ ಫ‌ಲಾನುಭವಿಗಳಿಗೆ ನೆಲಮಟ್ಟಕ್ಕಿಂತ ಕೆಳಗೆ ರಚಿಸಿರುವ ವಿನ್ಯಾಸಗಳಿಗೆ ಸಹಾಯ ನೀಡಲು ಅವಕಾಶವಿದೆ. ಘಟಕಗಳ ರಚನೆ ಗಾತ್ರ, ಘಟಕ ವೆಚ್ಚ, ಗರಿಷ್ಠ ಸಹಾಯಧನ ಹಾಗೂ ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ತಾಲೂಕುಮಟ್ಟದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಬೇಕು.

ಇಲಾಖೆಯಿಂದ ಟ್ಯಾಂಕರ್‌ ವಿತರಣೆ: ಇತ್ತೀಚಿನ ದಿನಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆ ಕುಂಟೆಗಳಲ್ಲಿ ಉತ್ತಮ ನೀರು ಬಂದಿರುವುದರಿಂದ ಅಂತರ್ಜಲಮಟ್ಟ ಹೆಚ್ಚಾಗಿದೆ. ಈ ನಡುವೆ ಕೊರೊನಾ ಲಾಕ್‌ಡೌನ್‌ನಿಂದ ಹೂವು, ಹಣ್ಣು ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಇದೀಗ ಅವರನ್ನು ಮತ್ತೆ ತೋಟಗಾರಿಕೆ ಬೆಳೆಯತ್ತ ಆಕರ್ಷಿಸಲು ಮತ್ತು ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಟ್ಯಾಂಕರ್‌ ವಿತರಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ನೀರು ಸಂಗ್ರಹಣಾ ಘಟಕವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಇದರಿಂದ ರೈತರು ನೀರು ಸಂಗ್ರಹಣೆ ಮಾಡಿ ಬೆಳೆಗೆ ನೀರನ್ನು ಬಳಸಬಹುದು. ವೈಯಕ್ತಿಕ, ಸಮುದಾಯ ನೀರು ಸಂಗ್ರಹಣಾ ಘಟಕ ನಿರ್ಮಿಸುವ ಫ‌ಲಾನುಭವಿಗಳಿಗೆ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. -ಗುಣವಂತ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.