ಕ್ಷೇತ್ರದ ಎಲ್ಲ ರೀತಿಯ ಅಭಿವೃದ್ಧಿಗೆ ಬದ್ಧ: ನಾಗೇಶ್‌


Team Udayavani, Oct 1, 2022, 4:03 PM IST

ಕ್ಷೇತ್ರದ ಎಲ್ಲ ರೀತಿಯ ಅಭಿವೃದ್ಧಿಗೆ ಬದ್ಧ: ನಾಗೇಶ್‌

ಮುಳಬಾಗಿಲು: ಕ್ಷೇತ್ರದಲ್ಲಿ ಯಾರು ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ಆದ್ದರಿಂದ ತಮ್ಮ ಅವಧಿಯಲ್ಲಿ ಎಲ್ಲಾ ರೀತಿ ಯಲ್ಲೂ ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ ಎಂದು ಶಾಸಕ ಎಚ್‌.ನಾಗೇಶ್‌ ಹೇಳಿದರು.

ತಾಲೂಕಿನ ಆವಣಿ ಹೋಬಳಿ ಊ.ಮಿಟ್ಟೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ 4 ಕೋಟಿ ವೆಚ್ಚದಲ್ಲಿ ನಡೆದಿರುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪಿಚ್ಚಗುಂಟ್ಲಹಳ್ಳಿ ಗ್ರಾಮ ದಲ್ಲಿ 80 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಊ.ಮಿಟ್ಟೂರು ಗ್ರಾಮದಲ್ಲಿ 1 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ, ಎಂ.ಕೊತ್ತೂರು ಗ್ರಾಮದಲ್ಲಿ 10 ಲಕ್ಷ ವೆಚ್ಚದ ಶುದ್ಧ ಕುಡಿವ ನೀರಿನ ಘಟಕ, ಬಟ್ಲಬಾವನಹಳ್ಳಿ ಗ್ರಾಮ ದಲ್ಲಿ 5 ಲಕ್ಷದಲ್ಲಿ ಹೈಮಾಸ್ಟ್‌ ದೀಪ, 10 ಲಕ್ಷ ವೆಚ್ಚದಲ್ಲಿ ಕುಡಿವ ನೀರಿನ ಘಟಕ, ಬಟ್ಲಬಾವನಹಳ್ಳಿಯಿಂದ ಮುಖ್ಯರಸ್ತೆ ವರೆಗೂ 1 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆಯನ್ನು ಮಾಡಿದರು. ಇಲ್ಲಿನ ಗ್ರಾಮಗಳು ಗಡಿ ಭಾಗಕ್ಕೆ ಹೊಂದಿಕೊಂಡಿರುವೆ, ಇಲ್ಲಿ ಯಾರು ಸಹ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಮಾಡಿಲ್ಲ, ಆದ್ದರಿಂದ ನನ್ನ ಅವಧಿಯಲ್ಲಿ ಎಲ್ಲಾ ರೀತಿಯಲ್ಲೂ ಸಹ ಅಭಿವೃದ್ಧಿ ಮಾಡಲು ಮುಂದಾಗಿದ್ದೇನೆ, ಇದು ವರೆಗೂ ತಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ರಸ್ತೆಗಳನ್ನು ಸರಿ ಪಡಿಸಲು ಏಕೆ ಮುಂದಾಗಿಲ್ಲ ಎಂದು ಗರಂ ಆದರು.

ತಾಲೂಕಿನಲ್ಲಿ ಇದುವರೆಗೂ ಯಾವುದೇ ರೀತಿ ಯ ವಿದ್ಯುತ್‌ ಸಮಸ್ಯೆ ಉಂಟಾಗದಂತೆ ನೋಡಿ ಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಕೆರೆ-ಕುಂಟೆಗಳು ತುಂಬಿ ತುಳುಕುತ್ತಿವೆ. ಅದಲ್ಲದೆ ಕೆಸಿ ವ್ಯಾಲಿ ನೀರು ಸಹ ತಾಲೂಕಿನ ಕೆರೆಗಳಿಗೆ ಬರುತ್ತಿರುವುದರಿಂದ ತಾಲೂಕಿನಲ್ಲಿ ನೀರಿನ ಸಮಸ್ಯೆ ಇಲ್ಲ ಎಂದರು.

ಎಂ.ಕೊತ್ತೂರು ಗ್ರಾಮದ ಬಳಿ ಕೆರೆ ಕೋಡಿ ಹರಿಯುತ್ತಿದೆ, ಇದರಿಂದ ವಿದ್ಯಾರ್ಥಿಗಳು ಪ್ರತಿ ದಿನ ಶಾಲೆಗೆ ಹೋಗಬೇಕಾಗಿತ್ತು, ಇದನ್ನು ನನ್ನ ಅವಧಿಯಲ್ಲಿ ಸರಿ ಪಡಿಸಲಾಗುವುದು, ಇಲ್ಲಿ ಮೋರಿ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

ನರೇಗಾ ಯೋಜನೆ ಅಡಿಯಲ್ಲಿ ಜೆಸಿಬಿ ಮೂಲಕ ಕೆಲಸ ನಡೆಯುತ್ತಿದೆ ಎಂಬ ಆರೋಪಗಳು ಕಡಿಮೆಯಾಗಲಿ ದೂರು ಗಳು ಬಂದರೆ ಅಂತಹ ಕಾಮಗಾರಿಗಳಿಗೆ ಯಾವುದೇ ರೀತಿಯ ಬಿಲ್ಲುಗಳು ಮಾಡದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗುವುದು ಎಂದರು.

ಕೆಲವರು ನಾನೇ ಎಂದವನು ಗ್ರಾಪಂನಲ್ಲಿ ಗೆದ್ದಿಲ್ಲ, ನಾನೇ ದೊಡ್ಡವನು ಎನ್ನವರು ಮೊದಲು ಗ್ರಾಪಂ ಸದಸ್ಯನಾಗಲಿ ಎಂದರು.

ಒಬ್ಬರು ಮತ್ತೂಬ್ಬರಿಂದ ಮತ್ತೂಬ್ಬರಿಗೆ ಚಾಡಿ ಹೇಳುವ ಅವರೊಂದಿಗೆ ವಿವಿಧ ರೀತಿಯ ಹೇಳಿಕೆಗಳನ್ನು ಪದ್ಧತಿಗಳು ಬಿಡಬೇಕು, ಮೊದಲು ಗಾಪಂ ನಲ್ಲಿ ಗೆದ್ದು ಬರಲಿ, ಅದು ಬಿಟ್ಟು ತಾಲೂಕು ಮಟ್ಟದಲ್ಲಿ ರಾಜಕೀಯಕ್ಕೆ ಬರುತ್ತಾರೆ ಯಾರೋ ಮಾತು ಕೇಳಿ ಮಾತನಾಡುವುದನ್ನು ಮೊದಲಿಗೆ ಕೈ ಬಿಡಬೇಕು ಅವರ ಸ್ವಂತ ಬುದ್ಧಿಯಿಂದ ಮಾತನಾಡುವುದನ್ನು ಕಲಿಯಬೇಕು ಎಂದರು.

ತಾಪಂ ಇಒ ಸರ್ವೇಶ್‌, ಲೋಕೋಪಯೋಗಿ ಎಇಇ ಶೇಷಾದ್ರಿ, ಗಣೇಶ್‌, ಎಂಜಿನಿಯರ್‌ ರವಿ, ಮುಖಂಡ ರಾಜೇಂದ್ರ ಪ್ರಸಾದ್‌, ಚಲಪತಿ, ಆವಣಿ ವಿಜಯಕುಮಾರ್‌, ಗೊಲ್ಲಹಳ್ಳಿ ಜಗದೀಶ್‌, ಪೆದ್ದಪ್ಪಯ್ಯ, ಬೈರಪ್ಪ, ಗಂಜಿಗುಂಟೆ ಈಶ್ವರ್‌, ಅಂಬ್ಲಿಕಲ್‌ ವೆಂಕಟಾ ಚಲಪತಿ, ಹೊಸಕೆರೆ ರಘು ಇತರರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.