ಮೈಸೂರು ದಸರಾ: ಜಿಲ್ಲೆಯಿಂದ ಆಕರ್ಷಣೀಯ ಸ್ತಬ್ಧಚಿತ್ರ


Team Udayavani, Oct 1, 2022, 4:20 PM IST

tdy-13

ತುಮಕೂರು: ವಿಶ್ವ ಪ್ರಸಿದ್ಧ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಕಲ್ಪತರು ನಾಡಿನಲ್ಲಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್‌ ಎಎಲ್‌ ಹೆಲಿಕಾಪ್ಟರ್‌ ಘಟಕ ಮತ್ತು ಪ್ರಸಿದ್ಧ ಪಾವಗಡ ಸೋಲಾರ್‌ ಪಾರ್ಕ್‌ ಸ್ತಬ್ಧಚಿತ್ರ ಜನರ ಗಮನ ಸೆಳೆಯಲಿವೆ.

ಕೊರೊನಾ ಕಾರಣದಿಂದ ಕಳೆದ ಎರಡು ವರ್ಷದಿಂದ ಸ್ಥಗಿತಗೊಂಡಿದ್ದ ವಿಶ್ವ ವಿಖ್ಯಾತ ದಸರಾ ಮಹೋತ್ಸವ ಈ ಬಾರಿ ವಿಜೃಂಭಣೆ ಯಿಂದ ನಡೆಯಲಿದೆ. ಅ.5 ರಂದು ಜರುಗ ಲಿರುವ ಜಂಬೂ ಸವಾರಿಗೆ ತುಮಕೂರು ಜಿಲ್ಲೆಯಿಂದ ಎರಡು ವಿಷಯಾಧಾರಿತ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ನಿಟ್ಟೂರಿನಲ್ಲಿ ಸ್ಥಾಪನೆಯಾಗಿ ಉದ್ಘಾಟನೆಗೆ ಸಿದ್ಧವಾಗಿರುವ ಎಚ್‌ಎಎಲ್‌ ಹೆಲಿಕಾಪ್ಟರ್‌ ತಯಾರಿಕಾ ಘಟಕ ಮತ್ತು ಪಾವಗಡದ ವಿಶ್ವದ ಮೊದಲ ಬೃಹತ್‌ ಸೋಲಾರ್‌ ಪಾರ್ಕ್‌ ಕುರಿತ ಸ್ತಬ್ಧಚಿತ್ರ ಅಂದು ಪ್ರದರ್ಶನಗೊಳ್ಳಲಿದೆ.

ಸ್ತಬ್ಧಚಿತ್ರದ ವಿವರ: ಎಚ್‌ಎಎಲ್‌ ಹೆಲಿಕಾ ಪ್ಟರ್‌ ತಯಾರಿಕಾ ಘಟಕ, ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಿದರೆಹಳ್ಳ ಕಾವಲಿನಲ್ಲಿ 610 ಎಕರೆ ಜಾಗದಲ್ಲಿ ಸುಮಾರು 5 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಹೆಲಿಕಾಪ್ಟರ್‌ ತಯಾರಿಕಾ ಘಟಕದಲ್ಲಿ ವಾರ್ಷಿಕ ಸೇನೆಗೆ ಬಳಸುವ 30 ಲಘು ವಿಮಾನಗಳು ತಯಾರಾಗಲಿವೆ. ಘಟಕದಿಂದ 2 ಸಾವಿರಕ್ಕೂ ಹೆಚ್ಚು ನೇರ ಉದ್ಯೋಗ ದೊರೆ ಯಲಿದೆ. ಈ ವರ್ಷ ಘಟಕ ಉದ್ಘಾಟನೆ ಆಗ ಲಿದೆ. ಅದಕ್ಕಾಗಿ ಸಿದ್ಧತೆಯೂ ನಡೆದಿದೆ. ಪಾವ ಗಡ ಸೋಲಾರ್‌ ಪಾರ್ಕ್‌ ವಿಶ್ವದ ಮೊದಲ ಬೃಹತ್‌ ಸೋಲಾರ್‌ ವಿದ್ಯುತ್‌ ತಯಾರಿಕಾ ಘಟಕವಾಗಿದೆ. ಸುಮಾರು 12 ಸಾವಿರ ಕೋಟಿ ವೆಚ್ಚದಲ್ಲಿ 13 ಸಾವಿರ ಎಕರೆ ಪ್ರದೇಶ ದಲ್ಲಿ ನಿರ್ಮಾಣವಾಗಿದ್ದು, 2050 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತದೆ.

ಸ್ತಬ್ಧಚಿತ್ರದ ವಿಶೇಷ : ಸುಮಾರು 27 ಅಡಿ ಉದ್ದ 12 ಅಡಿ ಅಗಲ ಹಾಗೂ 13 ಅಡಿ ಎತ್ತರದಲ್ಲಿ ಎರಡು ವಿಷಯಗಳ ಸ್ತಬ್ಧಚಿತ್ರ ನಿರ್ಮಾಣವಾಗುತ್ತಿದೆ. ಮುಂಭಾಗದಲ್ಲಿ ಹೆಲಿಕಾಪ್ಟರ್‌ ಮತ್ತು ಘಟಕ, ಹಿಂಭಾಗದಲ್ಲಿ ಸೋಲಾರ್‌ ಪಾರ್ಕ್‌ ವಿನ್ಯಾಸಗೊಳಿಸಲಾಗಿದೆ. ಸೆಪ್ಟೆಂಬರ್‌ 19 ರಿಂದ ಕಲಾವಿದ, ಪತ್ರಕರ್ತ ರಾದ ತಿಪಟೂರು ಕೃಷ್ಣ ನೇತೃತ್ವದಲ್ಲಿ ಸುಮಾರು 18 ಜನ ಕಲಾವಿದರು ಸೇರಿ ಕಲಾಕೃತಿ ತಂಡ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿದ್ದಾರೆ. 2015 ರಿಂದ ತುಮಕೂರು ಜಿಲ್ಲೆ ಸ್ತಬ್ಧಚಿತ್ರ ನಿರ್ಮಾಣದಲ್ಲಿ ತೊಡಗಿರುವ ಕಲಾಕೃತಿ ತಂಡ ಮೂರು ಬಾರಿ ವಿಭಾಗ ಮಟ್ಟದ ಪ್ರಶಸ್ತಿ ಪಡೆದು, ಜಿಲ್ಲೆಗೆ ಕೀರ್ತಿ ತಂದಿರುವುದು ವಿಶೇಷ. ಅರಳುಗುಪ್ಪೆ ಚನ್ನಕೇಶವ ದೇವಾಲಯ, ಎಡೆಯೂರು ಸಿದ್ದಲಿಂಗೈಶ್ವರ, ಸಿದ್ದಗಂಗ ಶ್ರೀ ಶಿವಕುಮಾರ ಸ್ವಾಮಿಗಳ ಸ್ತಬ್ಧಚಿತ್ರ ಜನಮನ್ನಣೆಗಳಿದ್ದವು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.