ರಷ್ಯಾ-ಉಕ್ರೇನ್ ಬಿಕ್ಕಟ್ಟು ಚರ್ಚೆ: ಭಾರತ ಪ್ರತಿನಿಧಿ ಗೈರು
Team Udayavani, Oct 1, 2022, 9:15 PM IST
ನ್ಯೂಯಾರ್ಕ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶನಿವಾರ ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆದಿದೆ. ಅದರಲ್ಲಿ ಭಾರತದ ಪ್ರತಿನಿಧಿ ಗೈರುಹಾಜರಾಗಿದ್ದರು.
ಉಕ್ರೇನ್ನ ನಾಲ್ಕು ಪ್ರದೇಶಗಳನ್ನು ವಿಲೀನಗೊಳಿಸಿರುವುದಾಗಿ ರಷ್ಯಾ ಘೋಷಿಸಿಕೊಂಡ ಬೆನ್ನಲ್ಲೇ ಈ ಸಭೆ ನಡೆದಿದ್ದು, ಈ ವಿಲೀನವನ್ನು ಕಾನೂನುಬಾಹಿರ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.
15 ಸದಸ್ಯರಲ್ಲಿ 10 ಸದಸ್ಯರು ಇದಕ್ಕೆ ಒಪ್ಪಿದ್ದಾರೆ. ಆದರೆ ಶಾಶ್ವತ ಸದಸ್ಯವಾಗಿರುವ ರಷ್ಯಾ ಈ ನಿರ್ಧಾರಕ್ಕೆ ತಡೆಹಿಡಿದಿದೆ. ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಂಬೋಜ್, “ಉಕ್ರೇನ್ನಲ್ಲಾಗುತ್ತಿರುವ ಬೆಳವಣಿಗೆಯಿಂದಾಗಿ ಭಾರತ ನೊಂದಿದೆ.
ಜೀವವನ್ನು ತೆಗೆಯುವಂತಹ ಯಾವುದೇ ನಿರ್ಧಾರ ಸೂಕ್ತವಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ