ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ


Team Udayavani, Oct 2, 2022, 11:20 AM IST

ಗ್ರಾಹಕರಿಗೆ ಅಪ್ರತಿಮ ಸೇವೆಯೇ ನಮ್ಮ ಗುರಿ: ಆನಂದ ಬಿ. ಮೂಲ್ಯ

ಡೊಂಬಿವಲಿ: ಕಳೆದ 23 ವರ್ಷಗಳಿಂದ ಡೊಂಬಿವಲಿ ಪರಿಸರದ ತುಳು-ಕನ್ನಡಿಗರ ಪ್ರತಿಷ್ಠಿತ ಆರ್ಥಿಕ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ತುಳುಶ್ರೀ ಕೋ – ಆಪರೇ ಟಿವ್‌ ಸೊಸೈಟಿ ತನ್ನ ಗ್ರಾಹಕರಿಗೆ ಅಪ್ರತಿಮ ಸೇವೆ ಸಲ್ಲಿಸುವ ಮುಖಾಂತರ ಜನಮಾನಸ ದಲ್ಲಿ ಉತ್ತಮ ಸ್ಥಾನ ನಿರ್ಮಿಸಿ ಕೊಂಡಿದೆ. ಮುಂಬರುವ ದಿನಗಳಲ್ಲಿ ಇನ್ನೂ ಉತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುವ ಗುರಿ ನಮ್ಮ ಸಂಸ್ಥೆಯದ್ದಾಗಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ ಬಿ. ಮೂಲ್ಯ ಹೇಳಿದರು.

ಡೊಂಬಿವಲಿ ಪೂರ್ವದ ಕೆ. ಡಿ. ಅಗರ್ವಾಲ್‌ ಸಭಾಗೃಹದಲ್ಲಿ ಸೆ. 25ರಂದು ಸಂಜೆ ನಡೆದ ತುಳುಶ್ರೀ ಕೋ – ಆಪರೇಟಿವ್‌ ಕ್ರೆಡಿಟ್‌ ಸೊಸೈಟಿ ಡೊಂಬಿವಲಿ 23ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಸ್ಥೆಯ ಸಂಸ್ಥಾಪಕ ಸದಸ್ಯರು ಹಾಗೂ ಆಡಳಿತ ಮಂಡಳಿಯ ಉತ್ತಮ ಕಾರ್ಯ ವೈಖರಿ ಹಾಗೂ ಸಿಬಂದಿಯ ಸೇವಾ ತತ್ಪರತೆಯಿಂದ ಸಂಸ್ಥೆ ಉತ್ತಮ ಸಾಧನೆಗೈಯುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ನಮ್ಮೆಲ್ಲರ ಹೆಮ್ಮೆಯ ಈ ಸಂಸ್ಥೆ ರಜತ ಮಹೋತ್ಸವ ಆಚರಿಸಲಿದ್ದು, ಈ ನಿಟ್ಟಿನಲ್ಲಿ ಶೇರು ಬಂಡವಾಳದ ಠೇವಣಿ ಹೆಚ್ಚಿಸುವ ಹಾಗೂ ಸಾಲವನ್ನು ಹೆಚ್ಚಿಸುವ ಗುರಿ ಹೊಂದಿದ್ದೇವೆ. ಸೊಸೈಟಿಯ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮಣ್‌ ಸುವರ್ಣ 22ನೇ ವಾರ್ಷಿಕ ಮಹಾಸಭೆಯ ವಾರ್ಷಿಕ ವರದಿ ಮಂಡಿಸಿ, ಟಿ. ಕೆ. ಪುತ್ರನ್‌ ಅವರ ಸೂಚನೆ ಮತ್ತು ಸಂತೋಷ್‌ ಶೆಟ್ಟಿ ಅವರ ಅನುಮೋದನೆಯೊಂದಿಗೆ ಮಂಜೂರು ಮಾಡಿದರು. 2021 – 22ರ ವಾರ್ಷಿಕ ವರದಿಯನ್ನು ನಾಗೇಶ ಹೊಸ್ಬೇಟಕರ ಅವರ ಸೂಚನೆ, ಲಕ್ಷ್ಮಣ್‌ ಸಿ. ಮೂಲ್ಯ ಅವರ ಅನುಮೋದನೆಯೊಂದಿಗೆ ಮಂಜೂರು ಮಾಡಲಾಯಿತು. 2021-22ನೇ ವಾರ್ಷಿಕ ಆಯವ್ಯಯ ಪಟ್ಟಿಯನ್ನು ಕೋಶಾಧಿಕಾರಿ ನಾರಾಯಣ ಬಿ. ಪೂಜಾರಿ ಮಂಡಿಸಿದರು. ಜಿ. ಎಸ್‌. ನಾಯಕ್‌ ಅವರ ಸೂಚನೆ, ವಸಂತ ಸುವರ್ಣ ಅವರ ಅನುಮೋದನೆಯೊಂದಿಗೆ ಲೆಕ್ಕಪತ್ರವನ್ನು ಮಂಜೂರು ಮಾಡಲಾಯಿತು. 2021-22ನೇ ವರ್ಷದ ಲಾಭಾಂಶದ ವಿಷಯವನ್ನು ಮಂಡಿಸಲಾಯಿತು.

ವಿನೋದಾ ಶೆಟ್ಟಿ ಅವರ ಸೂಚನೆ ಹಾಗೂ ಚಂದ್ರಾ ನಾಯ್ಕ ಅವರ ಅನುಮೋದನೆಯಂತೆ ಶೇ. 6ರಷ್ಟು ಲಾಭಾಂಶವನ್ನು ಶೇರುದಾರರಿಗೆ ಘೋಷಿಸಲಾ ಯಿತು. 2022-23ನೇ ಸಾಲಿನ ಆಂತರಿಕ ಲೆಕ್ಕಪರಿಶೋಧಕರಾಗಿ ಯು. ಪಿ. ಪೈ ಆ್ಯಂಡ್‌ ಕಂಪೆನಿ ಹಾಗೂ ಲೆಕ್ಕಪರಿಶೋಧಕಕರಾಗಿ ಆರ್‌. ಕೆ. ಪಾಟೀಲ್‌ ಅವರನ್ನು ನಾಗೇಶ ಹೊಸ್ಬೇಟಕರ ಅನುಮೋದನೆಯಂತೆ ನೇಮಿಸಲಾಯಿತು. ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ ಬಿ. ಮೂಲ್ಯ, ಕಾರ್ಯದರ್ಶಿ ಲಕ್ಷ್ಮಣ್‌ ಸುವರ್ಣ, ಕೋಶಾಧಿಕಾರಿ ನಾರಾಯಣ ಬಿ. ಪೂಜಾರಿ, ಸದಸ್ಯ ಎಂ. ಪಿ. ಪೈ, ದೇವದಾಸ್‌ ಕುಲಾಲ್‌ ಹಾಗೂ ಲೆಕ್ಕಪರಿಶೋಧಕ ಯು. ಪಿ. ಪೈ ಉಪಸ್ಥಿತರಿದ್ದರು. ಸಭೆಯಲ್ಲಿ ಅನೇಕ ಗಣ್ಯರು ಮಾತನಾಡಿ ಸಲಹೆ-ಸೂಚನೆಗ ಳನ್ನು ನೀಡಿದರು.

ದೇವದಾಸ್‌ ಕುಲಾಲ್‌ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಣ್‌ ಸುವರ್ಣ ವಂದಿಸಿದರು. ಶೇರುದಾರರು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

-ಚಿತ್ರ-ವರದಿ: ಗುರುರಾಜ್‌ ಪೋತನೀಸ್‌

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.