ನಕಲಿ ಗಾಂಧಿ ಪರಿವಾರವು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಂತ: ಪ್ರಲ್ಹಾದ್ ಜೋಶಿ
Team Udayavani, Oct 2, 2022, 11:40 AM IST
ಹುಬ್ಬಳ್ಳಿ: ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದುರಂತ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದರು.
ನಗರದಲ್ಲಿಂದು ಗಾಂಧೀಜಿ ಜಯಂತಿ ಅಂಗವಾಗಿ ಕಿಮ್ಸ್ ಆವರಣ ಮುಂಭಾಗದಲ್ಲಿ ಮಹಾತ್ಮಾ ಗಾಂಧಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಮಾತನ್ನು ಗಂಭೀರವಾಗಿ ತೆಗೆದು ಕೊಳ್ಳುವ ಪ್ರಶ್ನೆ ಇಲ್ಲ. ಅವರು ಭಾರತ ಜೋಡೋ ಯಾತ್ರೆ ಮುಗಿದ ತಕ್ಷಣ ವಿಶ್ರಾಂತಿಗೆ ವಿದೇಶಕ್ಕೆ ಹೋಗುತ್ತಾರೆ. ಈಗಾಗಲೇ ಈ ಹಿಂದಿನ ಚುನಾವಣೆಯಲ್ಲಿ ಜನರು ಯಾರು ಯಾರ ಪರ ಇದ್ದಾರೆ ಎಂಬುದನ್ನು ತಮ್ಮ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಕೇಂದ್ರದಲ್ಲಿ 10 ವರ್ಷ ನಿರಂತರವಾಗಿ ಭ್ರಷ್ಟಾಚಾರ ಹಗರಣದ್ದೆ ಸುದ್ದಿ ಇತ್ತು ಎಂದರು.
ಇದನ್ನೂ ಓದಿ:ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ : ಟ್ಯಾಂಕರ್ ಗೆ ಬೆಂಕಿ ಹತ್ತಿಕೊಂಡು ಇಬ್ಬರು ಸಜೀವ ದಹನ
ಇನ್ನು ಮೋದಿ ಆಡಳಿತದಲ್ಲಿ ದೇಶದ ಸಾಲ ಮೂರು ಪಟ್ಟು ಹೆಚ್ಚಾಗಿದೆ ಎಂಬ ರಾಹುಲ್ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು, ಯಾರ ಕಾಲದಲ್ಲಿ ಹೆಚ್ಚು ಸಾಲ ಆಗಿದೆ ಎಂಬುದನ್ನು ಅಂಕಿ ಅಂಶಗಳಿವೆ. ಕೋವಿಡ್ ಸಮಯದಂತಹ ಪರಿಸ್ಥಿತಿಯನ್ನು ಸರ್ಕಾರ ಯಶಸ್ವಿಯಾಗಿ ನಿಭಾಯಿಸಿದೆ. ಭಾರತ ಅಭಿವೃದ್ಧಿ ಹೊಂದುತ್ತಿದೆ. ಪ್ರಪಂಚವೇ ಭಾರತವನ್ನು ಗುರುತಿಸುವಂತೆ ಆಗಿದೆ. ಹೀಗಾಗಿ ಭಾರತದ ಹಿರಿಮೆ ಗರಿಮೆ ಬಗ್ಗೆ ಸುಳ್ಳು ಅಪಪ್ರಚಾರ ಮಾಡಬಾರದು ಎಂದರು.
ಈಗಾಗಲೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ 398 ಜನರ ಪೈಕಿ ಅತಿ ಹೆಚ್ಚು ಡಿಪಾಸಿಟ್ ಕಳೆದು ಕೊಂಡಿದೆ. ಇದೀಗ ರಾಹುಲ್ ಗಾಂಧಿ ಇನ್ನೊಬ್ಬರು ಬರೆದು ಕೊಟ್ಟಿದ್ದನ್ನು ಓದಿ ನಾಚಿಕೆ ಮಾನ ಮರ್ಯಾದೆ ಇಲ್ಲದೇ ಓದುತ್ತಾರೆ. ಚೀಟಿ ವಾಪಾಸ್ ಪಡೆದ ನಂತರ ಅದರಲ್ಲಿನ ವಿಷಯ ಗೊತ್ತಿರಲ್ಲ ಎಂದು ರಾಗಾ ವಿರುದ್ಧ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್