ಹಿರಿಯರನ್ನು ಮಕ್ಕಳಂತೆ ಆರೈಕೆ ಮಾಡಿ


Team Udayavani, Oct 2, 2022, 3:21 PM IST

ಹಿರಿಯರನ್ನು ಮಕ್ಕಳಂತೆ ಆರೈಕೆ ಮಾಡಿ

ದೇವನಹಳ್ಳಿ: ಹಿರಿಯ ನಾಗರಿಕರನ್ನು ಗೌರವಯುತವಾಗಿ ಕಾಣುವ ಮೂಲಕ ಅವರಲ್ಲಿರುವ ಜ್ಞಾನ ಮತ್ತು ಅನುಭವಗಳನ್ನು ಇಂದಿನ ಯುವಕರು ಬಳಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಜಿಲ್ಲಾಧಿಕಾರಿ ಆರ್‌. ಲತಾ ತಿಳಿಸಿದರು.

ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಮಾತ ನಾಡಿದ ಅವರು, ದೇಹಕ್ಕೆ ವಯಸ್ಸಾಗಿದ್ದರೂ ಸಹ ಯುವಕರಂತೆ ಹಿರಿಯರು ಲವಲವಿಕೆಯಿಂದ, ಕ್ರಿಯಾಶೀಲತೆಯಿಂದ ಹಾಡುಗಾರಿಕೆ ಪ್ರತಿಯೊಂದರಲ್ಲೂ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದರು.

ಆರೋಗ್ಯದ ಕಡೆ ಗಮನಹರಿಸಿ: ಮನೆಯಲ್ಲಿ ಹಿರಿಯರು ಇದ್ದರೆ ನಮಗೆ ಖುಷಿ ತರುತ್ತದೆ. ಹಿರಿಯರು ಮನೆಯಲ್ಲಿದ್ದರೆ ಆರೋಗ್ಯಕರ ವಾತಾವರಣ ಇರುತ್ತದೆ. ಅಜ್ಜ-ಅಜ್ಜಿ ಮನೆಯಲ್ಲಿದ್ದರೆ ಮಕ್ಕಳಿಗೆ ಯಾವುದೇ ತರಹದ ಹೊಟ್ಟೆನೋವು ಇತರೆ ಸಮಸ್ಯೆ ಬಂದಾಗ ಅದಕ್ಕೆ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಹಿರಿ ಯರು ಮನೆಯಲ್ಲಿದ್ದರೆ ಆರೋಗ್ಯದ ಕಡೆ ಹೋಗಲು ಅನುಕೂಲ ಆಗುತ್ತದೆ. ಹಿರಿಯರು ಮನೆ ಯಲ್ಲಿದ್ದರೆ ನಮ್ಮ ಪೂರ್ವಜನ್ಮದ ಪುಣ್ಯವಾಗಿದೆ. ಹಿರಿಯ ನಾಗರಿಕರನ್ನು ಮಕ್ಕಳಂತೆ ಆರೈಕೆ ಮಾಡಬೇಕು. ಹಿರಿಯರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕು. ಆರೋಗ್ಯ ಕ್ಷೇತ್ರ ಸಾಕಷ್ಟು ಬೆಳೆಯುತ್ತಿದೆ ಎಂದು ಹೇಳಿದರು.

ಜಿಪಂ ಸಿಇಒ ರೇವಣಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಂದೆ-ತಾಯಿಗಳನ್ನು ಬಿಟ್ಟು ಜಪಾನ್‌, ಅಮೆರಿಕಾ, ಯೂರೋಪ್‌, ಇತರೆ ದೇಶಗಳ ಕಡೆ ನೌಕರಿಗೆ ಹೋಗುತ್ತಾರೆ. ವಯಸ್ಸಾದ ತಂದೆ-ತಾಯಿ ಇಲ್ಲೇ ಇದ್ದು ತಮ್ಮ ಯೋಗಕ್ಷೇಮವನ್ನು ನೋಡಿಕೊಳ್ಳುತ್ತಾರೆ. ಹಿರಿಯ ನಾಗರಿಕರು ತಮ್ಮ ಮಕ್ಕಳು ಮತ್ತು ಸೊಸೆಯಂದಿರಿಗೆ ಮಕ್ಕಳಾಗಿ ಮೊಮ್ಮಕ್ಕಳಾಗಿ ಆಟವಾಡುತ್ತಾ ಸಂತೋಷದಿಂದ ಸಮಯ ಕಳೆಯಬೇಕು ಎಂದರು.

ಪೋಷಕರಿಗೆ ಉತ್ತಮ ಸೌಲಭ್ಯ ಒದಗಿಸಿ: ಹಿರಿಯರ ನಾಗರಿಕರಲ್ಲಿ ಸ್ಪೂರ್ತಿ ತುಂಬುವ ಕೆಲಸ ಮಾಡಬೇಕು. ಯುವಜನತೆ ನಾವು ಸಹ ಮುಂದೆ ಹಿರಿಯ ನಾಗರಿಕರಾಗುತ್ತೇವೆ ಎಂಬುವುದನ್ನು ನೆನಪಿಟ್ಟು ಕೊಳ್ಳಬೇಕು. ಹಿರಿಯರು ಒಳ್ಳೆಯ ನಾಲ್ಕು ಮಾತು ನಿರೀಕ್ಷಿ ಸು ತ್ತಾರೆ. ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರಿನ್ನು ವೃದ್ಧಾಶ್ರಮಗಳಿಗೆ ಬಿಡುವ ಪದ್ಧತಿ ಹೆಚ್ಚುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿಯಾಗಿದ್ದು, ಮಕ್ಕಳು ತಮ್ಮ ಪೋಷಕರಿಗೆ ಉತ್ತಮ ಸೌಲಭ್ಯ ಒದಗಿಸಿ ಆರೈಕೆ ಮಾಡಬೇಕು ಎಂದರು.

ಅವಿಭಕ್ತ ಕುಟುಂಬ ಹೆಚ್ಚಾಗಲಿ: ಯುವಕರು ನಗರ ಜೀವನಕ್ಕೆ ಮಾರುಹೋಗಿ ತಮ್ಮ ಸಂಬಂಧಗಳನ್ನು ಕಡಿತಗೊಳಿಸುತ್ತಿದ್ದಾರೆ. ವಿಭಕ್ತ ಕುಟುಂಬದಿಂದ ಹಿರಿಯ ನಾಗರಿಕರು ಹೆಚ್ಚು ಸಮಸ್ಯೆ ಅನುಭವಿ ಸುತ್ತಿ ರುವುದರಿಂದ ಅವಿಭಕ್ತ ಕುಟುಂಬ ಹೆಚ್ಚಾಗಬೇಕು. ಮಕ್ಕಳು ಹಿರಿಯರಿಗೆ ಹೆಚ್ಚಿನ ಪ್ರೀತಿ ಮತ್ತು ಗೌರವ ನೀಡುವ ಮೂಲಕ ಆಸರೆಯಾಗಿರಬೇಕು. ಯುವಜನತೆ ಆಧುನಿಕತೆಯ ಗೀಳಿಗೆ ಬೀಳದೆ ಹಿರಿ ಯರನ್ನು ಗೌರವಿಸಬೇಕು ಎಂದು ಸಲಹೆ ನೀಡಿದರು.

ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್‌. ನಟರಾಜ್‌, ಜಿಲ್ಲಾ ದಿವ್ಯಾಂಗರ ಕಲ್ಯಾಣಾಧಿಕಾರಿ ಎನ್‌.ಎಂ. ಜಗದೀಶ್‌, ನಿವೃತ್ತ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಭಾಕರ್‌, ನಿವೃತ್ತ ತಹಶೀಲ್ದಾರ್‌ ಸಿದ್ದಲಿಂಗಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಷಕರನ್ನು ವೃದ್ಧಾ ಶ್ರಮಕ್ಕೆ ಕಳಿಸಬೇಡಿ: ಡೀಸಿ : ಹಿರಿಯರ ಆಶೀರ್ವಾದದಿಂದ ಇಂದು ನಾವು ಬದುಕುತ್ತಿದ್ದೇವೆ. ಪೋಷಕರನ್ನು ಯಾವುದೇ ವೃದ್ಧಾಶ್ರಮಗಳಿಗೆ ಕಳುಹಿಸದೆ ಹೆತ್ತವರನ್ನು ನೋಡಿಕೊಳ್ಳುವುದು ಎಲ್ಲಾ ಮಕ್ಕಳ ಕರ್ತವ್ಯವಾಗಿದೆ. ಹಿರಿಯರನ್ನು ಗೌರವಿಸುವವರು ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ. ಹಿರಿಯರನ್ನು ಸದಾಕಾಲ ಗೌರವದಿಂದ ಕಾಣಬೇಕು. ಪ್ರತಿಯೊಬ್ಬರೂ ಹಿರಿಯರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಮನೆಯಲ್ಲಿ ಹಿರಿಯರನ್ನು ಕೀಳಾಗಿ ಕಾಣದೆ ಅವರನ್ನು ಪ್ರೀತಿಯಿಂದ ಆರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ಹೇಳಿದರು.

ಟಾಪ್ ನ್ಯೂಸ್

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.