ಪೂಜೆಯಲ್ಲಿ ಮಹಾತ್ಮ ಗಾಂಧಿಯನ್ನು ಮಹಿಷಾಸುರನಂತೆ ಬಿಂಬಿಸಿದ ಹಿಂದೂ ಮಹಾಸಭಾ! ಭಾರಿ ಆಕ್ರೋಶ
Team Udayavani, Oct 3, 2022, 12:29 PM IST
ಕೋಲ್ಕತ್ತಾ : ಅಖಿಲ ಭಾರತ ಹಿಂದೂ ಮಹಾಸಭಾ ಆಯೋಜಿಸಿದ್ದ ದುರ್ಗಾ ಪೂಜೆಯಲ್ಲಿ ಮಹಾತ್ಮಾ ಗಾಂಧಿಯನ್ನು ಮಹಿಷಾಸುರನಂತೆ ಬಿಬಿಸಿರುವುದು ಭಾರಿ ವಿರೋದಕ್ಕೆ ಕಾರಣವಾಗಿದ್ದು ಕೇಂದ್ರ ಗೃಹ ಸಚಿವಾಲಯದ ಸೂಚನೆ ಮತ್ತು ಪಶ್ಚಿಮ ಬಂಗಾಳದ ಪೊಲೀಸರ ನಿರ್ದೇಶನದ ಮೇರೆಗೆ ಮಹಾತ್ಮಾ ಗಾಂಧಿಯ ಗೊಂಬೆಯನ್ನು ಅಖಿಲ ಭಾರತ ಹಿಂದೂ ಮಹಾಸಭಾ ತೆಗೆದು ಹಾಕಿದ ಪ್ರಸಂಗ ನಡೆದಿದೆ.
ದೇಶದೆಲ್ಲೆಡೆ ನವರಾತ್ರಿಯ ಪರ್ವಕಾಲದಲ್ಲಿ ದುರ್ಗಾ ಪೂಜೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಅದರಂತೆ ಕೋಲ್ಕತ್ತಾದ ಅಖಿಲ ಭಾರತ ಹಿಂದೂ ಮಹಾಸಭಾವೂ ದುರ್ಗಾ ಪೂಜೆಯನ್ನು ಬಹಳ ಅದ್ದೂರಿಯಾಗಿ ಆಚರಿಸುತ್ತಿದೆ. ಆದರೆ ರವಿವಾರ ನಡೆದ ದುರ್ಗಾ ಪೂಜೆಯಲ್ಲಿ ಮಹಿಷಾಸುರ ಮರ್ದಿನಿಯಂತೆ ಚಿತ್ರಿಸಲಾಗಿತ್ತು. ಅಂದರೆ ದೇವಿ, ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಿದಂತೆ ಗೊಂಬೆಗಳನ್ನು ಜೋಡಿಸಲಾಗಿತ್ತು. ಅದರಂತೆ ದೇವಿಯ ಕಾಲಡಿಯಲ್ಲಿ ಬಿದ್ದ ಮಹಿಷಾಸುರನಾಗಿ ಮಹಾತ್ಮ ಗಾಂಧಿ ಗೊಂಬೆಯನ್ನು ಇಡಲಾಗಿತ್ತು. ಅದನ್ನು ಕಂಡ ಅನೇಕ ಮಂದಿ ಆಕ್ರೋಶ ಹೊರಹಾಕಿದ್ದಾರೆ.
ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಸಚಿವಾಲಯ ಹಾಗೂ ಪೊಲೀಸರ ನಿರ್ದೇಶನದಂತೆ ಗಾಂಧಿಯ ಮೂರ್ತಿಯನ್ನು ತೆಗೆಯಲಾಗಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ಮುಖಂಡರು ಹೇಳಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ ಅಖಿಲ ಭಾರತ ಹಿಂದೂ ಮಹಾಸಭಾದ ಪಶ್ಚಿಮ ಬಂಗಾಳ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಚಂದ್ರಚೂರ್ ಗೋಸ್ವಾಮಿ “ನಾವು ಗಾಂಧಿಯನ್ನು ನಿಜವಾದ ಅಸುರನಂತೆ ನೋಡುತ್ತೇವೆ. ಹಾಗಾಗಿ ಗಾಂಧಿ ಮೂರ್ತಿಯನ್ನು ಈ ರೀತಿಯಲ್ಲಿ ಬಿಂಬಿಸಿದ್ದೇವೆ” ಎಂದು ಸ್ಪಷ್ಟನೆ ನೀಡಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ಈ ಕ್ರಮವನ್ನು ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಾರ್ಟಿ, ಸಿಪಿಐ-ಎಂ ಮತ್ತು ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಖಂಡಿಸಿವೆ.
ಇದನ್ನೂ ಓದಿ : ಅತ್ಯಂತ ಕಡಿಮೆ ಅವಧಿಯಲ್ಲಿಯೇ ಹತ್ತು ಮಿಲಿಯನ್ ಹಾರ್ಟ್ಸ್ ಗೆದ್ದ ಬನಾರಸ್ ಟ್ರೇಲರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್