ಪಂಜುರ್ಲಿ ಕೋಲದಲ್ಲಿ ದೈವ ಬಣ್ಣ ತೆಗೆದು ಪ್ರಸಾದ ನೀಡಿದ್ದು ಮರೆಯಲಾಗದ್ದು; ರಿಷಬ್ ಶೆಟ್ಟಿ


Team Udayavani, Oct 3, 2022, 5:32 PM IST

rishab-shetty

ಮಣಿಪಾಲ: ಕಾಂತಾರ ಚಿತ್ರದ ಒಂದು ಸೀಕ್ವೆನ್ಸ್ ಶೂಟ್ ಆದ ಬಳಿಕ ನಾನು ತಂಡದ ಜೊತೆ ಪಂಜುರ್ಲಿ ದೈವದ ಕೋಲಕ್ಕೆ ಹೋಗಿದ್ದೆ.ಆಗ ದೈವದ ಬಳಿ ಈ ಸಿನಿಮಾ ಮಾಡುತ್ತಿರುವುದಾಗಿ ಪ್ರಶ್ನೆ ಇಟ್ಟಿದ್ದೆ. ‘ದೈವದ ಕಾರ್ಣಿಕ ಹೇಳುವ ಸಿನಿಮಾಗೆ ಕೈ ಹಾಕಿದ್ದೇನೆ, ಅನುಗ್ರಹ ಬೇಕು’ ಎಂದು ಹೇಳಿದ್ದೆ. ‘ಅಲ್ಲಿ ಪಂಜುರ್ಲಿ ದೈವ ಬಣ್ಣ ತೆಗೆದು ಮುಖಕ್ಕೆ ಹಚ್ಚಿತ್ತು. ಆ ಕ್ಷಣ ನನಗೆ ರೋಮಾಂಚನವಾಗಿತ್ತು.. “ ಹೀಗೆ ಹೇಳುತ್ತಾ ಹೋದ ರಿಷಬ್ ಶೆಟ್ರ ಮುಖದಲ್ಲಿ ಅದೇನೋ ಸಾಧಿಸಿದ ಭಾವವಿತ್ತು.

ಕಾಂತಾರ ಚಿತ್ರದ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ತಂಡ ಇಂದು ಮಣಿಪಾಲದ ಉದಯವಾಣಿ ಪ್ರಧಾನ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಮಾತಿಗೆ ಕುಳಿತ ರಿಷಬ್ ಶೆಟ್ಟಿ ಅವರು ಹಂಚಿಕೊಂಡ ಕೆಲವು ವಿಚಾರಗಳು ಇಲ್ಲಿದೆ.

ಚಿತ್ರದ ಬಗ್ಗೆ ಮಾತನಾಡುತ್ತಾ, ‘ಎಲ್ಲವೂ ದೈವೇಚ್ಚೆ. ಪಂಜುರ್ಲಿ ಕೋಲದಲ್ಲಿ ನಮಗೆ ದೈವದ ಆಶೀರ್ವಾದ ಸಿಕ್ಕಿತ್ತು. ಇಡೀ ಸಿನಿಮಾದಲ್ಲಿ ನನಗೆ ಒಂದು ಶಕ್ತಿಯ ರಕ್ಷಣೆಯಿತ್ತು. ಏನೇ ಸಮಸ್ಯೆ ಇದ್ದರೂ ಪರಿಹಾರ ಸಿಗುತ್ತಿತ್ತು’ ಎಂದರು ರಿಷಬ್.

ಕಾಂತಾರ ಚಿತ್ರವನ್ನು ಕನ್ನಡದಲ್ಲೇ ಜನರು ನೋಡಬೇಕು ಎಂದು ನಾವು ಪ್ಯಾನ್ ಇಂಡಿಯಾ ಹೋಗಲಿಲ್ಲ. ಆದರೆ ಸದ್ಯ ಬೇರೆ ಭಾಷೆಗಳಿಂದಲೂ ಡಿಮ್ಯಾಂಡ್ ಬರುತ್ತಿದೆ. ಕೆಲವು ವಾರಗಳು ಕಳೆದ ಬಳಿಕ ಬೇರೆ ಭಾಷೆಗಳಲ್ಲಿ ಡಬ್ ಆಗಿ ಚಿತ್ರ ಬರಲಿದೆ ಎಂದರು.

ಕಾಡು ಮತ್ತು ಮನುಷ್ಯನ ಸಂಬಂಧದ ಕತೆಯನ್ನು ಹೇಳಲು ದೈವವೇ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ರಿಷಬ್, ‘ಸಮಾಜದ ಸಮತೋಲನವನ್ನು ಕಾಪಾಡುವುದು ದೈವಗಳು. ಮನುಷ್ಯ ಮತ್ತು ಪೃಕೃತಿಯ ನಡುವಿನ ಕೊಂಡಿ ಎಂದರೆ ದೈವಗಳು ಎಂದು ನಂಬಿರುವವನು ನಾನು” ಎಂದರು. ಮುಂದುವರಿಸಿ, more regional is more universal ಎಂಬಂತೆ, ಸಮಗ್ರ ಭಾರತೀಯ ಸಂಸ್ಕೃತಿಯಲ್ಲಿ ಈ ಚಿತ್ರವನ್ನು ನೋಡಬಹುದು. ಕರಾವಳಿ ಅಲ್ಲದೆಯೂ ಬೇರೆ ಭಾಗದ ಆಚರಣೆಗೂ ಇದು ಅನ್ವಯಿಸುತ್ತದೆ ಎಂದರು.

ದೈವ ನರ್ತಕರ ಬೆಂಬಲ: ಈ ಚಿತ್ರ ಮಾಡುವಲ್ಲಿ ದೈವ ನರ್ತಕರ ಬೆಂಬಲ ದೊಡ್ಡದು. ಅವರು ನನಗೆ ತುಂಬಾ ಮಾರ್ಗದರ್ಶನ ಮಾಡಿದ್ದರು. ಚಿತ್ರದ ಬಗ್ಗೆ ನನಗೆ ಅವರ ಅಭಿಪ್ರಾಯ ಬೇಕಿತ್ತು. ಚಿತ್ರ ನೋಡಿದ ಬಳಿಕ ಅವರೂ ಭಾವುಕರಾಗಿದ್ದರು ಎಂದರು ರಿಷಬ್ ಶೆಟ್ಟಿ.

ಚಿತ್ರದ ಪ್ರೇಕ್ಷಕರಿಗೆ ಒಂದು ವಿಶೇಷ ಮನವಿ ಮಾಡಿದ ರಿಷಬ್, “ ನೀವು ಚಿತ್ರ ನೋಡಿ ಸಂತಸದಲ್ಲಿ ಥಿಯೇಟರ್ ನಲ್ಲಿ ತೆಗೆದ ಫೋಟೊ- ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದೀರಿ. ದಯವಿಟ್ಟು ಹಾಗೆ ಮಾಡಬೇಡಿ. ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಾಕಿರುವ ಫೋಟೊಗಳನ್ನು ಸ್ಟೇಟಸ್ ಗೆ ಹಾಕಿ” ಎಂದರು.

ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್, ರಂಜನ್, ಶನಿಲ್ ಗುರು, ಚಿರಂತ್ ಸೇರಿದಂತೆ ಚಿತ್ರತಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿತು.

 

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kushee ravi spoke about Case of Kondana

Case of Kondana; ‘ಖುಷಿ’ಗೆ ವಿಭಿನ್ನ ಪಾತ್ರದ ಮೇಲೆ ಭರ್ಜರಿ ನಿರೀಕ್ಷೆ…

aradhana

Aradhana; ಕಾಟೇರಾದಲ್ಲಿ ನಾನು ಸ್ಟ್ರಾಂಗ್‌ ಗರ್ಲ್; ಮಾಲಾಶ್ರೀ ಪುತ್ರಿಯ ಗ್ರ್ಯಾಂಡ್ ಎಂಟ್ರಿ

TDY-39

ಸಾರ್ವಜನಿಕರೇ ಆನ್‌ಲೈನ್‌ ಆಮಿಷಕ್ಕೆ ಮಾರುಹೋಗದಿರಿ

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

ಉದಯವಾಣಿ ಸಂದರ್ಶನ: ಸಿಎಂ ಆಗಲು ಸಮಾವೇಶ ಮಾಡುತ್ತಿಲ್ಲ; ಸಿದ್ದರಾಮಯ್ಯ  

thumb-3

ಯೋಜನೆ- ಯೋಚನೆ ಅಖಂಡ ಭಾರತಕ್ಕಾಗಿ: ಉದಯವಾಣಿಯೊಂದಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.