ಚನ್ನಪಟ್ಟಣದಲ್ಲಿ ಬಿಜೆಪಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ
ರಾಮನಗರದಲ್ಲಿ ನಿಲ್ಲದ ಕಮಲ - ತೆನೆ ಕದನ
Team Udayavani, Oct 3, 2022, 6:36 PM IST
ಚನ್ನಪಟ್ಟಣ : ಬಿಜೆಪಿ ಮುಖಂಡ,ಆರ್ ಟಿಐ ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸೋಮವಾರ ನಗರದ ಲೋಕೋಪಯೋಗಿ ಇಲಾಖೆಯ ಕಚೇರಿ ಮುಂಭಾಗ ನಡೆದಿದೆ.
ಸಿದ್ದೇಗೌಡ ಎನ್ನುವವರ ಮೇಲೆ ಜೆಡಿಎಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಗೋವಿಂದಹಳ್ಳಿ ನಾಗರಾಜ್ ಮತ್ತು ಸಂಗಡಿಗರು ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.
ಮುಖಕ್ಕೆ 3 ಹೊಲಿಗೆ ಹಾಕುವಷ್ಟರ ಮಟ್ಟಿಗೆ ಹಲ್ಲೆ ನಡೆಸಲಾಗಿದ್ದು, ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದ್ದು, ಗಾಯಾಳು ಸಿದ್ದೇಗೌಡ ಹೇಳಿಕೆ ನೀಡಿದ್ದು, ನಾನು 2006 ರಿಂದ ಆರ್ ಟಿಐ ಕಾರ್ಯಕರ್ತನಾಗಿದ್ದೇನೆ. ಕೆಲವು ಮಾಹಿತಿ ಬೇಕೆಂದು ಪಿಡಬ್ಲ್ಯೂ ಡಿ ಕಚೇರಿಗೆ ಹೋಗಿದ್ದೆ. ಎಂಜಿನಿಯರ್ ರಮ್ಯಾರವರ ಭೇಟಿ ಮಾಡಿದ್ದೆ. ಈ ಸಂದರ್ಭದಲ್ಲಿ ಗೋವಿಂದಹಳ್ಳಿ ನಾಗರಾಜು ಸಹ ಬಂದರು. ನಾನು ಅವರು ಬರುತ್ತಿದ್ದಂತೆ ಹೊರಗೆ ಹೋಗಲು ಬಂದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದು, ಕೊರಳ ಪಟ್ಟಿ ಹಿಡಿದರು.ಅವರ ಸಂಬಂಧಿಕರು, ಕಾರು ಚಾಲಕ ಸೇರಿ ಎಲ್ಲರೂ ಹಲ್ಲೆ ಮಾಡಿದರು. ರಾಡ್ ನಿಂದ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿಕೂಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು