ಅಡಿಕೆ ಆಮದು ವಿಚಾರದಲ್ಲಿ ಅಪಪ್ರಚಾರ: ಸಚಿವ ಆರಗ ಜ್ಞಾನೇಂದ್ರ

ರಾಜಕೀಯ ಲಾಭಕ್ಕಾಗಿ ವಿಪಕ್ಷಗಳಿಂದ ಸಲ್ಲದ ಆರೋಪ

Team Udayavani, Oct 3, 2022, 11:17 PM IST

ಅಡಿಕೆ ಆಮದು ವಿಚಾರದಲ್ಲಿ ಅಪಪ್ರಚಾರ: ಸಚಿವ ಆರಗ ಜ್ಞಾನೇಂದ್ರ

ಹೊಸನಗರ: ಭೂತಾನ್‌ನಿಂದ ಹಸಿ ಅಡಿಕೆ ಆಮದು ವಿಚಾರವಾಗಿ ಆಗಿರುವ ಬಹುದೊಡ್ಡ ಅಪಪ್ರಚಾರದಿಂದ ಅಡಿಕೆ ಬೆಳೆಗಾರರು ಆತಂಕಗೊಂಡಿದ್ದಾರೆ ಎಂದು ಗೃಹ ಸಚಿವ, ಅಡಕೆ ಪ್ರಕೋಷ್ಠದ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.

ತಾಲೂಕಿನ ನಗರ ಗುಜರಿಪೇಟೆ ಚೇತನ ಬಳಗದ 25ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಸುದ್ದಿ ಗಾರೊಂದಿಗೆ ಮಾತನಾಡಿದ ಅವರು, ಅಡಿಕೆ ಆಮದು ವಿಚಾರವಾಗಿ ಶೀಘ್ರದಲ್ಲೇ ಕೇಂದ್ರಕ್ಕೆ ನಿಯೋಗ ಹೋಗಲಿದೆ ಎಂದು ಭರವಸೆ ನೀಡಿದರು.

ಭೂತಾನ್‌ ವಿಚಾರದಲ್ಲಿ ಒಂದು ವಿಚಾರ ವನ್ನು ಗಮನಿಸಬೇಕಿದೆ. ನಮ್ಮಲ್ಲಿ ಪ್ರೊಸಸ್‌ ಆಗಿರುವ ಅಡಿಕೆ, ಒಣ ಅಡಿಕೆ ಮತ್ತು ಒಣ ಅಡಿಕೆಯ ಉತ್ಪನ್ನಗಳಾದ ಗುಟ್ಕಾ, ಪಾನ್‌ ಮಸಾಲ, ಸ್ವೀಟ್‌ ಸುಫಾರಿಗಳು ಭೂತಾನ್‌ಗೆ ಹೋಗುತ್ತಿವೆ. ಭೂತಾನ್‌ನಿಂದ ನಮಗೇನು ಬರುತ್ತಿದೆ. ಅದಕ್ಕಿಂತ ಹೆಚ್ಚು ಅಲ್ಲಿಗೆ ಹೋಗುತ್ತಿದೆ ಎಂದರು.

17 ಸಾವಿರ ಟನ್‌ ಅಡಕೆ ಆಮದಾಗುತ್ತಿದೆ ಎಂದು ಭಾರೀ ಪ್ರಚಾರ ಪಡೆದಿದೆ. ಆದರೆ ಅದು ಹಸಿ ಅಡಿಕೆ, ಆಮದಿನ ಷರತ್ತುಗಳನ್ನು ನೋಡಿದೆ. ಅದರ ಪ್ರಕಾರ ಇಲ್ಲಿಗೆ ಅಡಕೆಯನ್ನು ತರಲು ಸಾಧ್ಯವಾಗುವುದಿಲ್ಲ. ಸಮುದ್ರ ಮಾರ್ಗದಿಂದ ತರಬೇಕು. ಆದರೆ ಅಡಕೆ ದರಕ್ಕಿಂತ ಸಾರಿಗೆ ವೆಚ್ಚವೇ ದುಪ್ಪಟ್ಟಾಗುತ್ತದೆ. ಹಾಗಾಗಿ ಅಡಕೆ ಬಂದೇ ಬರುತ್ತೆ ಎಂದು ಹೇಳಲಾಗದು ಎಂದರು.

ಭೂತಾನ್‌ ದೇಶದ ಜತೆ ಭಾರತದ ಭಾರೀ ದೊಡ್ಡ ಬಾಂಧವ್ಯವಿದೆ. ಚೀನ ಪಕ್ಕದಲ್ಲಿರುವ ಭೂತಾನ್‌ ನಮ್ಮ ದೇಶದ ಆಯಕಟ್ಟಿನ ಜಾಗ. ನಮ್ಮ ಮಿಲಿಟರಿ ನೆಲೆ ಕೂಡ ಆಗಿದೆ. ನಮಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡುವ ಪ್ರದೇಶ. ಹೀಗಾಗಿ ಭೂತನ್‌ ಅನ್ನು ಚೆನ್ನಾಗಿಟ್ಟುಕೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಭೂತಾನ್‌ ಸೇರಿ 5 ದೇಶಗಳ ಜತೆ ಕೆಲವು ವ್ಯಾಪಾರ ಒಪ್ಪಂದಗಳು ಆಗಿವೆ ಎಂದರು.

ಭಯ ಬೇಡ
ಈ ಬಗ್ಗೆ ದೊಡ್ಡಮಟ್ಟದ ಸುದ್ದಿಯಾದ ಕಾರಣ ರೈತರು ಆತಂಕಗೊಂಡಿದ್ದಾರೆ. ಆದರೆ ಭಯದ ಅಗತ್ಯವಿಲ್ಲ. ಅಡಿಕೆಗೆ ಭಾರತವೇ ಬಹುದೊಡ್ಡ ಮಾರುಕಟ್ಟೆ. 25 ವರ್ಷಗಳಿಂದ ಅಡಿಕೆ ಬೆಳೆ ಮೂರು ಪಟ್ಟು ಜಾಸ್ತಿಯಾಗಿದೆ. ಆದರೂ ಅಡಿಕೆಗೆ ಬೇಡಿಕೆ ಇದ್ದು ದರ ಹೆಚ್ಚಾಗುತ್ತಿದೆ ಎಂದರು.

ಕಾಂಗ್ರೆಸ್‌ ಅರೋಪ ವಿಪರ್ಯಾಸ
ಅಡಿಕೆ ಕೊಯ್ಲಿಗೆ ಬಂದ ಸಂದರ್ಭದಲ್ಲಿ ಒಂದಲ್ಲ ಒಂದು ಸುದ್ದಿ ಹಬ್ಬಿಸುವ ಕೆಲಸವನ್ನು ದಲ್ಲಾಳಿ ವ್ಯಾಪಾರಿಗಳು ಮಾಡುತ್ತಾರೆ. ಇದರ ಜತೆಗೆ ಕಾಂಗ್ರೆಸ್‌ ಕೂಡ ಆರೋಪ ಮಾಡುತ್ತಿದೆ. ಈ ಹಿಂದೆ ಅಡಕೆ ಹಾನಿಕಾರಕ ಎಂದು ಕೋರ್ಟ್‌ಗೆ ಅಫಿದವಿತ್‌ ನೀಡಿದೆ. ಅದನ್ನು ತೆಗೆಸುವ ವಿಶೇಷ ಪ್ರಯತ್ನವನ್ನು ನಾವೆಲ್ಲ ಮಾಡುತ್ತಿದ್ದೇವೆ. ಅದೇನಾದರೂ ಜಾರಿಯಾದಲ್ಲಿ ಅಡಕೆ ಬೆಳೆಯುವುದಿರಲಿ. ಗಿಡಗಳನ್ನು ನಾಶ ಮಾಡಬೇಕಾದ ಸ್ಥಿತಿ ಬರುತ್ತದೆ. ಕಾಂಗ್ರೆಸ್‌ ಸರಕಾರ ಅಡಿಕೆಗೆ ಮಾಡಿದ ಅನ್ಯಾಯವನ್ನು ಬೆಳೆಗಾರರು ಎಂದೂ ಮರೆಯಲು ಸಾಧ್ಯವಿಲ್ಲ. ಆದರೆ ಈಗ ಕಾಂಗ್ರೆಸ್‌ ಈ ವಿಚಾರ ಮುಂದಿಟ್ಟುಕೊಂಡು ಚುನಾವಣ ವರ್ಷವಾದ ಕಾರಣ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.