ದೇಶದ ಬಡತನ,ನಿರುದ್ಯೋಗ ಸಮಸ್ಯೆ: ದತ್ತಾತ್ರೇಯ ಹೊಸಬಾಳೆ ಕಳವಳ
Team Udayavani, Oct 4, 2022, 6:30 AM IST
ಹೊಸದಿಲ್ಲಿ: ದೇಶದ ಬಡತನ, ನಿರುದ್ಯೋಗ ಸಮಸ್ಯೆ ಮತ್ತು ಆರ್ಥಿಕ ಅಸಮಾನತೆ ಬಗ್ಗೆ ಆರ್ಎಸ್ಎಸ್ ಧ್ವನಿ ಎತ್ತಿದೆ. ಉದ್ಯೋಗಿಗಳಾಗುವ ಬದಲು ಉದ್ಯಮಿಗಳಾಗಿ ಇತರರಿಗೆ ಉದ್ಯೋಗ ಕಲ್ಪಿಸುವ ವಾತಾವರಣವನ್ನು ದೇಶದಲ್ಲಿ ನಿರ್ಮಿಸಬೇಕಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪ್ರತಿ ಪಾದಿಸಿದ್ದಾರೆ.
ಸ್ವಾವಲಂಬಿ ಭಾರತ ಅಭಿಯಾನದ ಅಂಗವಾಗಿ ಸ್ವದೇಶಿ ಜಾಗರಣ ಮಂಚ್ ಆಯೋಜಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, “ದೇಶದಲ್ಲಿ ಬಡತನ ಭೂತದಂತೆ ತಾಂಡವವಾಡುತ್ತಿದೆ. ಇದನ್ನು ನಾವು ಹೊಡೆದೋಡಿಸಬೇಕಿದೆ. ಈಗಲೂ 20 ಕೋಟಿ ಮಂದಿ ಬಡತನ ರೇಖೆಗಿಂತ ಕೆಳಗಿರುವುದು ಶೋಚನೀಯ ಎಂದರು.
ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ.7.6ರಷ್ಟಿದೆ. ಜತೆಗೆ ಆರ್ಥಿಕ ಅರ್ಥಿಕ ಅಸಮಾನತೆಯೂ ಹೆಚ್ಚುತ್ತಿದೆ. ಈ ಬಗ್ಗೆ ವರದಿಯೊಂದರಲ್ಲಿ ಉಲ್ಲೇಖೀಸಲಾಗಿದೆ’ ಎಂದರು.
“ವರದಿಯೊಂದರ ಪ್ರಕಾರ, ಭಾರತದ ಜನಸಂಖ್ಯೆಯ ಶೇ.1ರಷ್ಟು ಜನರು ರಾಷ್ಟ್ರದ ಆದಾಯದ ಐದನೇ ಒಂದರಷ್ಟನ್ನು ಹೊಂದಿದ್ದಾರೆ. ಇನ್ನೊಂದೆಡೆ, ದೇಶದ ಶೇ.50ರಷ್ಟು ಜನರು ಆದಾಯದ ಶೇ.13ರಷ್ಟು ಮಾತ್ರ ಹೊಂದಿದ್ದಾರೆ,’ ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ