ದುಬೈನಲ್ಲಿ ಭಾರತೀಯ-ಅರೇಬಿಕ್ ಶೈಲಿಯ ಭವ್ಯ ಹಿಂದೂ ದೇವಾಲಯ ಲೋಕಾರ್ಪಣೆ: ಇಲ್ಲಿದೆ ಚಿತ್ರಗಳು


Team Udayavani, Oct 5, 2022, 1:22 PM IST

Majestic Hindu Temple Opens In Dubai On Dussehra

ದುಬೈ: ಭಾರತೀಯ ಮತ್ತು ಅರೇಬಿಕ್ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಿರುವ ನೂತನ ಹಿಂದೂ ದೇವಾಲಯವನ್ನು ದಸಾರಾ ಸಂದರ್ಭದಲ್ಲಿ ದುಬೈನಲ್ಲಿ ಉದ್ಘಾಟಿಸಲಾಗಿದೆ. ದುಬೈನ ಜೆಬೆಲ್ ಅಲಿ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣ ಮಾಡಲಾಗಿದೆ.

ಎಮಿರೇಟ್‌ನ ‘ಆರಾಧನಾ ಗ್ರಾಮ’ ಎಂದು ಕರೆಯಲ್ಪಡುವಲ್ಲಿರುವ ಈ ದೇವಾಲಯವು ಇಂದು ಯುಎಇಯಾದ್ಯಂತ ಆರಾಧಕರಿಗೆ ಔಪಚಾರಿಕವಾಗಿ ತನ್ನ ಬಾಗಿಲು ತೆರೆಯಿತು.

ಸಹಬಾಳ್ವೆ ಮತ್ತು ಸಹಿಷ್ಣುತೆ ಸಚಿವರಾದ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಮತ್ತು ಭಾರತೀಯ ರಾಯಭಾರಿ ಸಂಜಯ್ ಸುಧೀರ್ ಅವರು ಈ ದೇವಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ರಾಯಭಾರಿ ಸಂಜಯ್ ಸುಧೀರ್ ಅವರು ಯುಎಇಯಲ್ಲಿರುವ 3.5 ಮಿಲಿಯನ್ ಭಾರತೀಯ ವಲಸಿಗರಿಗೆ ನೀಡಿದ ಬೆಂಬಲಕ್ಕಾಗಿ ಯುಎಇ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು” ಎಂದು ಅಬುಧಾಬಿಯ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವನ್ನು ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್

‘ಆರಾಧನಾ ಗ್ರಾಮ’ ಜೆಬೆಲ್ ಅಲಿಯಲ್ಲಿ ಈಗ ಏಳು ಚರ್ಚುಗಳು, ಗುರು ನಾನಕ್ ದರ್ಬಾರ್ ಸಿಖ್ ಗುರುದ್ವಾರ ಮತ್ತು ಹೊಸ ಹಿಂದೂ ದೇವಾಲಯ ಸೇರಿದಂತೆ ಒಟ್ಟು ಒಂಬತ್ತು ಧಾರ್ಮಿಕ ದೇವಾಲಯಗಳಿವೆ.

ರಾಜತಾಂತ್ರಿಕ ಮಿಷನ್‌ ಗಳ ಮುಖ್ಯಸ್ಥರು, ಹಲವಾರು ಧರ್ಮಗಳ ಧಾರ್ಮಿಕ ಮುಖಂಡರು, ಉದ್ಯಮಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರು ಸೇರಿದಂತೆ 200 ಕ್ಕೂ ಹೆಚ್ಚು ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕೋವಿಡ್ 19 ಸಾಂಕ್ರಾಮಿಕವು ದುಬೈಗೆ ಅಪ್ಪಳಿಸಿದ ಸ್ವಲ್ಪ ಸಮಯದ ನಂತರ, ಅಂದರೆ 2020 ರಲ್ಲಿ 70,000 ಚದರ ಅಡಿ ವಿಸ್ತೀರ್ಣದ ಈ ಹಿಂದೂ ದೇವಾಲಯ ನಿರ್ಮಿಸುವ ಯೋಜನೆಗಳನ್ನು ಘೋಷಿಸಲಾಗಿತ್ತು.

ಈ ದೇವಾಲಯವು ಸೂಕ್ಷ್ಮ ಕೆತ್ತನೆಗಳು, ಅಲಂಕೃತ ಕಂಬಗಳು, ಹಿತ್ತಾಳೆಯ ಗೋಪುರಗಳು ಮತ್ತು ಭಾರತೀಯ ಮತ್ತು ಅರೇಬಿಕ್ ವಾಸ್ತುಶಿಲ್ಪವನ್ನು ಸಂಯೋಜನೆಯ ಲ್ಯಾಟಿಸ್ ಸ್ಕ್ರೀನ್ ಗಳನ್ನು ಒಳಗೊಂಡಿದೆ.

ದೇವಸ್ಥಾನಕ್ಕೆ ಭೇಟಿ ನೀಡಲು ಮುಂಗಡ ನೋಂದಣಿ ಅಗತ್ಯ. ಭಕ್ತರು ಆಗಮಿಸುವ ಮೊದಲು ಆನ್‌ ಲೈನ್‌ ನಲ್ಲಿ ನೋಂದಾಯಿಸಿಕೊಳ್ಳಬಹುದು.

ವರ್ಷಾಂತ್ಯಕ್ಕೆ ವಿವಾಹಗಳು ಸೇರಿದಂತೆ ಹಿಂದೂ ಆಚರಣೆಗಳು ಮತ್ತು ಪ್ರಾರ್ಥನೆಗಳು ನಡೆಯಬಹುದಾದ ವಿಶಾಲವಾದ ಸಮುದಾಯ ಭವನವೂ ಉದ್ಘಾಟನೆಯಾಗಲಿದೆ.

ಟಾಪ್ ನ್ಯೂಸ್

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.