ಇರಾನಿ ಕಪ್‌ ಕ್ರಿಕೆಟ್‌: ರೆಸ್ಟ್‌ ಆಫ್‌ ಇಂಡಿಯಾ ಚಾಂಪಿಯನ್‌

ಸೌರಾಷ್ಟ್ರ ವಿರುದ್ಧ 8 ವಿಕೆಟ್‌ ಜಯ; 29ನೇ ಸಲ ಕಿರೀಟ

Team Udayavani, Oct 5, 2022, 5:09 PM IST

ಇರಾನಿ ಕಪ್‌ ಕ್ರಿಕೆಟ್‌: ರೆಸ್ಟ್‌ ಆಫ್‌ ಇಂಡಿಯಾ ಚಾಂಪಿಯನ್‌

ರಾಜ್‌ಕೋಟ್‌: 2019-20ರ ಸಾಲಿನ ರಣಜಿ ಚಾಂಪಿಯನ್‌ ಸೌರಾಷ್ಟ್ರವನ್ನು 8 ವಿಕೆಟ್‌ಗಳಿಂದ ಸೋಲಿಸಿದ ಶೇಷ ಭಾರತ ತಂಡ (ರೆಸ್ಟ್‌ ಆಫ್‌ ಇಂಡಿಯಾ) 29ನೇ ಸಲ “ಇರಾನಿ ಕಪ್‌’ ಕಿರೀಟ ಏರಿಸಿಕೊಂಡಿದೆ.

ಗೆಲುವಿಗೆ 105 ರನ್‌ ಮಾಡಬೇಕಿದ್ದ ಹನುಮ ವಿಹಾರಿ ನಾಯಕತ್ವದ ಶೇಷ ಭಾರತ 2 ವಿಕೆಟ್‌ ನಷ್ಟದಲ್ಲಿ ಗುರಿ ಮುಟ್ಟಿತು. ಪಂದ್ಯ 4ನೇ ದಿನಕ್ಕೇ ಮುಗಿದು ಹೋಯಿತು. ಪ್ರಿಯಾಂಕ್‌ ಪಾಂಚಾಲ್‌ (2) ಮತ್ತು ಯಶ್‌ ಧುಲ್‌ (8) ವಿಕೆಟ್‌ ಬೇಗ ಉರುಳಿತಾದರೂ ಗುರಿ ಸಣ್ಣದಿದ್ದುದರಿಂದ ಶೇಷ ಭಾರತ ಯಾವುದೇ ಆತಂಕಕ್ಕೆ ಒಳಗಾಗಲಿಲ್ಲ. ಆರಂಭಕಾರ ಅಭಿಮನ್ಯು ಈಶ್ವರನ್‌ ಅಜೇಯ 63 ರನ್‌ (78 ಎಸೆತ, 9 ಬೌಂಡರಿ) ಮತ್ತು ಶ್ರೀಕರ್‌ ಭರತ್‌ ಅಜೇಯ 27 ರನ್‌ ಮಾಡಿ ತಂಡದ ಗೆಲುವು ಸಾರಿದರು.

276 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದಾಗಲೇ ಸೋಲನ್ನು ಖಾತ್ರಿಗೊಳಿಸಿದ್ದ ಸೌರಾಷ್ಟ್ರ ತನ್ನ ದ್ವಿತೀಯ ಸರದಿಯನ್ನು 380ರ ತನಕ ಬೆಳೆಸಿತು.

78 ರನ್‌ ಮಾಡಿ ಆಡುತ್ತಿದ್ದ ನಾಯಕ ಜೈದೇವ್‌ ಉನಾದ್ಕತ್‌ 89 ರನ್‌ ಮಾಡಿ ಕುಲದೀಪ್‌ ಸೇನ್‌ಗೆ ವಿಕೆಟ್‌ ಒಪ್ಪಿಸಿದರು (133 ಎಸೆತ, 10 ಬೌಂಡರಿ, 2 ಸಿಕ್ಸರ್‌). ಪಾರ್ಥ್ ಭಟ್‌ (7) ವಿಕೆಟ್‌ ಕೂಡ ಸೇನ್‌ ಪಾಲಾಯಿತು. ಕುಲದೀಪ್‌ ಸಾಧನೆ 94ಕ್ಕೆ 5 ವಿಕೆಟ್‌. ಮೊದಲ ಇನ್ನಿಂಗ್ಸ್‌ನಲ್ಲಿ ಅವರು 3 ವಿಕೆಟ್‌ ಉರುಳಿಸಿದ್ದರು. ಈಗ ಸೇನ್‌ ಟಿ20 ವಿಶ್ವಕಪ್‌ಗಾಗಿ ಭಾರತದ ನೆಟ್‌ ಬೌಲರ್‌ ಆಗಿ ಪರ್ತ್‌ಗೆ ಪಯಣಿಸಲಿದ್ದಾರೆ.

ಮುಕೇಶ್‌ ಕುಮಾರ್‌ ಪಂದ್ಯಶ್ರೇಷ್ಠ
ಬಂಗಾಲದ ಪೇಸ್‌ ಬೌಲರ್‌ ಮುಕೇಶ್‌ ಕುಮಾರ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಪಂದ್ಯದ ಮೊದಲ ದಿನವೇ 4 ವಿಕೆಟ್‌ಗಳನ್ನು ಬಹಳ ಅಗ್ಗಕ್ಕೆ ಉಡಾಯಿಸಿ ಸೌರಾಷ್ಟ್ರದ ಕುಸಿತಕ್ಕೆ ಚಾಲನೆ ನೀಡಿದ ಕಾರಣಕ್ಕಾಗಿ ಮುಕೇಶ್‌ಗೆ ಈ ಗೌರವ ಒಲಿಯಿತು. ಭಾರತದ ಏಕದಿನ ತಂಡಕ್ಕೆ ಸೇರ್ಪಡೆಗೊಂಡ ಅವರ ಖುಷಿ ಇಮ್ಮಡಿಗೊಂಡಿತು.

ಪಂದ್ಯಶ್ರೇಷ್ಠ ರೇಸ್‌ನಲ್ಲಿ ಸರ್ಫರಾಜ್ ಖಾನ್ ಕೂಡ ಇದ್ದರು. ಮೊದಲ ಇನ್ನಿಂಗ್ಸ್‌ನಲ್ಲಿ ಅವರು ಅಮೋಘ ಬ್ಯಾಟಿಂಗ್‌ ನಡೆಸಿ 138 ರನ್‌ ಬಾರಿಸಿದ್ದರು.

ಸಂಕ್ಷಿಪ್ತ ಸ್ಕೋರ್‌: ಸೌರಾಷ್ಟ್ರ-98 ಮತ್ತು 380 (ಉನಾದ್ಕತ್‌ 89, ಮಂಕಡ್‌ 72, ಜಾಕ್ಸನ್‌ 71, ಕುಲದೀಪ್‌ 98ಕ್ಕೆ 5). ಶೇಷ ಭಾರತ-374 ಮತ್ತು 2 ವಿಕೆಟಿಗೆ 105 (ಅಭಿಮನ್ಯು ಈಶ್ವರನ್‌ ಔಟಾಗದೆ 63, ಶ್ರೀಕರ್‌ ಭರತ್‌ ಔಟಾಗದೆ 27, ಉನಾದ್ಕತ್‌ 37ಕ್ಕೆ 2).

ಪಂದ್ಯಶ್ರೇಷ್ಠ: ಮುಕೇಶ್‌ ಕುಮಾರ್‌.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.