ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ


Team Udayavani, Oct 6, 2022, 6:35 AM IST

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ಎರಡು ವರ್ಷಗಳ ಕಾಲ “ಸರಳ ದಸರೆ’ಯ ಬಳಿಕ ಸಾಂಸ್ಕೃತಿಕ ನಗರಿಯು ಈ ಬಾರಿ ಅದ್ದೂರಿ ದಸರಾಕ್ಕೆ ಸಾಕ್ಷಿಯಾಯಿತು. 750 ಕೆ.ಜಿ. ತೂಕದ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ಸಾಗಿತು. ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ದೇವಿಯನ್ನು ಕಂಡು ಭಕ್ತರು ಪುನೀತರಾದರು. ಜಂಬೂ ಸವಾರಿಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಮಂದಿ ನೆರೆದಿದ್ದರು.

ಮೈಸೂರು: ವಿಜಯದಶಮಿಯ ದಿನವಾದ ಬುಧವಾರ ವೈಭವಯುತ ಜಂಬೂ ಸವಾರಿಯ ಮೆರವಣಿಗೆಯೊಂದಿಗೆ ವಿಶ್ವ ವಿಖ್ಯಾತ ಮೈಸೂರು ದಸರಾ ಬುಧವಾರ ಸಂಪನ್ನಗೊಂಡಿತು. ವಿದ್ಯುತ್‌ ದೀಪಾಲಂಕಾರದ ಹೊನ್ನ ಬೆಳಕಿನಲ್ಲಿ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಅಭಿಮನ್ಯು ಬಲರಾಮ ದ್ವಾರದ ಮೂಲಕ ಅರಮನೆಯಿಂದೀಚೆಗೆ ಮುಂದಡಿಯಿಡುತ್ತಿದ್ದಂತೆಯೇ ಅಂಬಾರಿಯಲ್ಲಿದ್ದ ದೇವಿ ಚಾಮುಂಡೇಶ್ವರಿ ಕಂಡ ಜನಸ್ತೋಮ ಜೈಕಾರ ಕೂಗಿ, ಶಿಳ್ಳೆ ಚಪ್ಪಾಳೆ ತಟ್ಟಿ, ಕೈಮುಗಿದು ನಮಿಸುತ್ತಾ ಭಾವ ಪರವಶರಾದರು.

ನಗರದ ಅರಮನೆ ಆವರಣದಿಂದ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ನಾಡಿನ ಅಧಿದೇವತೆ ಶ್ರೀ ಚಾಮುಂಡೇ ಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಹೊತ್ತು ತನ್ನ ಗಜ ಗಾಂಭೀರ್ಯದಿಂದ ಕುಮ್ಕಿ ಆನೆಗಳಾದ ಚೈತ್ರಾ ಮತ್ತು ಕಾವೇರಿಯೊಂದಿಗೆ ಕ್ಯಾಪ್ಟನ್‌ ಅಭಿಮನ್ಯು ಹೆಜ್ಜೆ ಹಾಕಿತು. ಅರ ಮನೆ ಆವರಣದಲ್ಲಿ ಚಿನ್ನದ ಅಂಬಾರಿಯಲ್ಲಿದ್ದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಜೆ 5.37 ಗಂಟೆಗೆ ಪುಷ್ಪಾರ್ಚನೆ ಸಲ್ಲಿಸಿದರು.

ಎರಡು ವರ್ಷಗಳ ಕಾಲ ಕೋವಿಡ್‌ ಕಾರಣದಿಂದ ಜಂಬೂ ಸವಾರಿ ಅರ ಮನೆ ಆವರಣಕ್ಕೆ ಸೀಮಿತವಾಗಿತ್ತು. ಈ ಬಾರಿ ಎಂದಿನಂತೆ ಅರಮನೆ ಆವರಣದಿಂದ ಬನ್ನಿಮಂಟಪಕ್ಕೆ ಸಾಗಿತು.

ಮುಂಜಾನೆ 6ರಿಂದಲೇ ಪೂಜೆ
ವಿಜಯದಶಮಿ ಅಂಗವಾಗಿ ಅರಮನೆಯೊಳಗೆ ಮುಂಜಾನೆ 6ರಿಂದ 11ರ ವರೆಗೆ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿದವು. ಬುಧವಾರ ಮುಂಜಾನೆ ನಡೆದ ಹೋಮಕ್ಕೆ ಪೂರ್ಣಾಹುತಿ ಸಲ್ಲಿಸಿದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ವಿವಿಧ ಪೂಜಾ ಕೈಂಕರ್ಯದಲ್ಲಿ ತೊಡಗಿದರು. ಬೆಳ್ಳಿ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿ, ಕಾರಿನಲ್ಲಿ ಯದುವೀರ್‌ ಕುಳಿತು ವಿಜಯಯಾತ್ರೆ ಕೈಗೊಂಡು ಅರಮನೆ ಮುಖ್ಯದ್ವಾರದಿಂದಅರಮನೆ ಆವರಣ ಭುವನೇಶ್ವರಿ ದೇಗುಲದ ವರೆಗೂ ಮೆರವಣಿಗೆ ನೆರವೇರಿಸಿದರು ಹಾಗೂ ಭುವನೇಶ್ವರಿ ಮಂಟಪದಲ್ಲಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆ ಮೂಲಕ ಅರಮನೆಗೆ ಮರಳಿ ಕಂಕಣ ವಿಸರ್ಜನೆ ಮೂಲಕ ಜಂಬೂ ಸವಾರಿಯ ಧಾರ್ಮಿಕ ಕಾರ್ಯ ಸಂಪನ್ನಗೊಂಡವು.

ಪುಷ್ಪಾರ್ಚನೆ ವಿಳಂಬ
ಚಿನ್ನದ ಅಂಬಾರಿಯಲ್ಲಿದ್ದ ತಾಯಿ ಚಾಮುಂಡೇಶ್ವರಿ ದೇವಿಗೆ ಸಂಜೆ 5.07ರಿಂದ 5.18ರ ವ ರೆಗೆ ಸಲ್ಲುವ ಶುಭ ಲಗ್ನ ದಲ್ಲಿ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಸಲ್ಲಿಸಬೇಕಿತ್ತು. ಆದರೆ ಪುಷ್ಪಾರ್ಚನೆ ಸಲ್ಲಿಸಿದಾಗ ಸಂಜೆ 5.37 ಗಂಟೆ ಆಗಿತ್ತು. ಅರಮನೆ ಬಲರಾಮ ದ್ವಾರದಲ್ಲಿ ಬೊಮ್ಮಾಯಿ ಅವರು ಪತ್ನಿಯೊಂದಿಗೆ ನಂದಿ ಧ್ವಜಕ್ಕೆ ಮಧ್ಯಾಹ್ನ 2.29ಕ್ಕೆ ಪೂಜೆ ಸಲ್ಲಿಸಿದರು. ಮುಹೂರ್ತಕ್ಕಿಂತ ಏಳು ನಿಮಿಷಗಳ ಮುನ್ನವೇ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಯಿತು.

ಪ್ರಮುಖ ಆಕರ್ಷಣೆಗಳು
ಮೈಸೂರು ಜಿಲ್ಲೆ ವತಿಯಿಂದ ಸಿದ್ಧಪಡಿಸಲಾಗಿದ್ದ ಸ್ತಬ್ಧಚಿತ್ರದಲ್ಲಿ ಮೈಸೂರು ವೀಳ್ಯದೆಲೆ, ನಂಜನಗೂಡು ರಸಬಾಳೆ, ಮೈಸೂರು ಮಲ್ಲಿಗೆಯನ್ನು ರಚಿಸಲಾಗಿತ್ತು. ಮೈಸೂರು ಪಾಕ್‌, ಮೈಸೂರು ಪೇಟಾ, ಮೈಸೂರು ರೇಷ್ಮೆ ಸೀರೆ, ಹಂಪಿಯ ಕಲ್ಲಿನ ರಥ, ಉಡುಪಿ ಜಿಲ್ಲೆಯ ಕೈಮಗ್ಗ ಸೀರೆ ನೇಯ್ಗೆ, ಯಕ್ಷಗಾನ ಚಿತ್ರಗಳು ಎಲ್ಲರನ್ನು ಮಂತ್ರಮುಗ್ಧಗೊಳಿಸಿದವು. ಮಂಡ್ಯ ಜಿಲ್ಲೆಯ ಭೂವರಾಹನಾಥಸ್ವಾಮಿ ವಿಗ್ರಹ ಹಾಗೂ ಶ್ರೀರಂಗಪಟ್ಟಣದ ರಂಗನಾಥಸ್ವಾಮಿ ಸ್ತಬ್ಧಚಿತ್ರಗಳು ಭಕ್ತಿಭಾವ ಮೂಡಿಸಿದವು. ಮುಧೋಳದ ಶ್ವಾನ, ಇಳಕಲ್‌ ಸೀರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಪಿಲೇಶ್ವರ ದೇವಸ್ಥಾನ, ಬೀದರ್‌ ಜಿಲ್ಲೆಯ ನೂತನ ಅನುಭವ ಮಂಟಪದ ಸ್ತಬ್ಧಚಿತ್ರಗಳೂ ಗಮನ ಸೆಳೆದವು.

ಜಂಬೂಸವಾರಿ ವೀಕ್ಷಿಸಿದ ಜನಸಾಗರ
ಈ ಬಾರಿ ದಸರಾ ಅದ್ದೂರಿಯಾಗಿ ನಡೆದಿದ್ದು, ರಾಜ್ಯದ ಮೂಲೆ ಮೂಲೆಗಳು, ಹೊರ ರಾಜ್ಯಗಳೂ ಸೇರಿ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಬಂದಿದ್ದರು. ಅರಮನೆಯಿಂದ ಬನ್ನಿಮಂಟಪದವರೆಗಿನ ಮಾರ್ಗದ ಇಕ್ಕೆಲಗಳಲ್ಲಿ ನಿಂತು ಅಂಬಾರಿಯನ್ನು ಕಣ್ತುಂಬಿಕೊಂಡರು.ಕೆಲವರಂತೂ ರಸ್ತೆ ಬದಿಯ ಕಟ್ಟಡಗಳು, ಮರಗಳನ್ನು ಏರಿ ಮೆರವಣಿಗೆ ವೀಕ್ಷಿಸಿದರು.

ಸಿಂಹಾಸನ ಸಿಂಹ ವಿಸರ್ಜನೆ
ಸಂಜೆ 7ಕ್ಕೆ ಖಾಸಗಿ ದರ್ಬಾರ್‌ ನಡೆದ ಬಳಿಕ ದರ್ಬಾರ್‌ ಹಾಲ್‌ನಲ್ಲಿ ಸಿಂಹಾಸನದಿಂದ ಸಿಂಹದ ತಲೆಯನ್ನು ವಿಸರ್ಜಿಸಲಾಯಿತು. ದೇವರ ಮನೆಯಲ್ಲಿ ಯದುವೀರ್‌ ಹಾಗೂ ವಾಣಿ ವಿಲಾಸ ದೇವರ ಅರಮನೆಯಲ್ಲಿ ತ್ರಿಷಿಕಾ ಕುಮಾರಿ ಒಡೆಯರ್‌ ಕಂಕಣ ವಿಸರ್ಜಿಸಿದರು.

ಶೀಘ್ರವೇ ಮೈಸೂರು ಪ್ರವಾಸೋದ್ಯಮ ಸರ್ಕಿಟ್‌
ಸದ್ಯದಲ್ಲೇ ಮೈಸೂರು ಪ್ರವಾಸೋದ್ಯಮ ಸರ್ಕಿಟ್‌ ಕಾರ್ಯಾರಂಭವಾಗಲಿದೆ. ಈ ಟೂರಿಸಂ ಸರ್ಕಿಟ್‌ ಮೈಸೂರು, ಹಳೆಬೀಡು, ಬೇಲೂರು, ಸೋಮನಾಥಪುರ ಸಹಿತ ಹಲವು ಪ್ರಮುಖ ಸ್ಥಳಗಳನ್ನು ಒಳಗೊಂಡಿದೆ. ವೆಬ್‌ಸೈಟ್‌ನಲ್ಲಿ ಬುಕ್‌ ಮಾಡುವ ಸೌಲಭ್ಯವಿರಲಿದೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

 

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.