ವಿಜಯದಶಮಿ ಸಂಭ್ರಮಾಚರಣೆ

ರೋಬೋಟಿಕ್‌ ಆನೆ ಮೇಲೆ ಬೆಳ್ಳಿ ಅಂಬಾರಿ ಅದ್ಧೂರಿ ಮೆರವಣಿಗೆ

Team Udayavani, Oct 6, 2022, 11:12 AM IST

8

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಹಿರಿಯರು-ಕಿರಿಯರೆನ್ನದೇ ಬನ್ನಿ ಪತ್ರಿ ವಿನಿಮಯ ಮಾಡಿಕೊಳ್ಳುವ ಮೂಲಕ ವಿಜಯದಶಮಿ ಹಬ್ಬವನ್ನು ಬುಧವಾರ ಸಡಗರ, ಸಂಭ್ರಮದಿಂದ ಆಚರಿಸಿದರು.

ನವರಾತ್ರಿ ಆರಂಭದಿಂದ ನಸುಕಿನ ಜಾವ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸಿ, ಪ್ರದಕ್ಷಿಣೆ ಹಾಕಿ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದ ಮಹಿಳೆಯರು, ವಿಜಯದಶಮಿ ಹಬ್ಬದಂದು ಬೆಳಗ್ಗೆ ಬನ್ನಿ ಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಿ, ಮುತ್ತೈದೆಯರಿಗೆ ಉಡಿ ತುಂಬಿ ಹರಸಿದರು. ನವರಾತ್ರಿ ಉತ್ಸವದ ಅಂಗವಾಗಿ ಒಂಭತ್ತು ದಿನಗಳ ಕಾಲ ನಿರಂತರವಾಗಿ ಸಾಗಿಬಂದ ಆದಿಶಕ್ತಿ ಕುರಿತಾದ ಪುರಾಣ ಪ್ರವಚನಗಳು ಮಂಗಳವಾರ ಮಂಗಲಗೊಂಡವು.

ತೋಂಟದಾರ್ಯ ಮಠದ ಆವರಣ, ಶಂಕ ರಲಿಂಗ ದೇವಸ್ಥಾನ, ರಾಜೀವಗಾಂ ನಗರದ ಬನ್ನಿಮ ಹಾಂಕಾಳಿ ದೇವಸ್ಥಾನ, ಬೆಟಗೇರಿ ಟರ್ನಲ್‌ ಪೇಟೆ, ರಂಗಪ್ಪಜ್ಜನಮಠದ ಮುಂಭಾಗ, ನರಸಾಪೂರ ಬಸ್‌ ನಿಲ್ದಾಣ ಹತ್ತಿರ ಸೇರಿದಂತೆ ವಿವಿಧ ಭಾಗಗಳಲ್ಲಿನ ಬನ್ನಿಗಿಡಕ್ಕೆ ವಿಶೇಷ ಪೂಜೆ ಸಲ್ಲಿಸಿ ಬನ್ನಿ ಮುಡಿದ ನಂತರ ನಾವು-ನೀವೂ ಬಂಗಾರದಂತಹ ಜೀವನ ಸಾಗಿಸೋಣ ಎಂಬ ವಾಕ್ಯದೊಂದಿಗೆ ಸಾರ್ವಜನಿಕರು ಪರಸ್ಪರ ಬನ್ನಿ ಪತ್ರಿ ವಿನಿಮಯ ಮಾಡಿಕೊಂಡರು.

ಕಿರಿಯರು ಹಿರಿಯರಿಗೆ ಬನ್ನಿ ಪತ್ರಿ ನೀಡಿ ಆಶೀರ್ವಾದ ಪಡೆದರು. ನಗರದ ಪ್ರಮುಖ ದೇವಸ್ಥಾನಗಳಾದ ಹಳೇ ಸರಾಫ್‌ ಬಜಾರ್‌ನ ಜಗದಂಬಾ ದೇವಸ್ಥಾನ, ಗಂಗಾಪೂರಪೇಟೆಯ ದುರ್ಗಾದೇವಿ ದೇವಸ್ಥಾನ, ಹುಡ್ಕೊà ಕಾಲನಿಯ ತುಳಜಾಭವಾನಿ ದೇವಸ್ಥಾನ, ಬೆಟಗೇರಿಯ ಅಂಬಾಭವಾನಿ ದೇವಸ್ಥಾನ, ಹಳೇ ಬನಶಂಕರಿ ದೇವಸ್ಥಾನ, ಶಿವಶರಣೆ ನೀಲಮ್ಮತಾಯಿ ಅಸುಂಡಿ ಆಧ್ಯಾತ್ಮ ವಿದ್ಯಾಶ್ರಮ, ರಾಜೀವಗಾಂ ನಗರದ ಶ್ರೀದೇವಿ ದೇವಸ್ಥಾನ, ಹರ್ಲಾಪೂರದ ದಾನಮ್ಮದೇವಿ ದೇವಸ್ಥಾನ, ಡೋಹರ ಗಲ್ಲಿಯ ಶ್ರೀದೇವಿ ದೇವಸ್ಥಾನ, ಅಮರೇಶ್ವರ ನಗರದ ಬನ್ನಿ ಮಹಾಂಕಾಳಿ ದೇವಸ್ಥಾನ, ಅಡವೀಂದ್ರಸ್ವಾಮಿ ಮಠದ ಅನ್ನಪೂರ್ಣೆಶ್ವರಿ ಮಂದಿರ, ನರಸಾಪೂರ ಗ್ರಾಮದ ಲಕ್ಕಮ್ಮದೇವಿ ದೇವಸ್ಥಾನ ಹಾಗೂ ಅಕ್ಕನ ಬಳಗದಲ್ಲಿ ಆದಿಶಕ್ತಿಗೆ ವಿಶೇಷ ಪೂಜೆ ಜರುಗಿತು.

ಆಯುಧ ಪೂಜೆ: ಜಿಲ್ಲಾದ್ಯಂತ ಮಂಗಳವಾರ ಸಡಗರ ಸಂಭ್ರಮದಿಂದ ಆಯುಧ ಪೂಜೆ ಆಚರಿಸಲಾಯಿತು. ನೇಕಾರರು ಮಗ್ಗಗಳಿಗೆ, ಮುದ್ರಣಕಾರರು ಮದ್ರಣ ಮಷಿನ್‌ಗಳಿಗೆ, ಪೀಠೊಪಕರಣ ತಯಾರಕರು ವೆಲ್ಡಿಂಗ್‌ ಮಷಿನ್‌ ಸೇರಿ ವಿವಿಧ ಉದ್ದಿಮೆದಾರರು ತಾವು ಉಪಯೋಗಿಸುವ ವಾಹನ ಹಾಗೂ ಆಯುಧಗಳಿಗೆ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಿದರು.

ರೋಬೋಟ್‌ ಆನೆ ಮೇಲೆ ದಸರಾ ಮೆರವಣಿಗೆ: ನಗರದ ಹಳೇಯ ಸರಾಫ್‌ ಬಜಾರನಲ್ಲಿರುವ ಜಗದಂಬಾ ದೇವಸ್ಥಾನ ಹಾಗೂ ತುಳಜಾ ಭವಾನಿ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ರೋಬೋಟ್‌ ಆನೆ ಮೇಲೆ ಬೆಳ್ಳಿ ಅಂಬಾರಿಯ ದಸರಾ ಮೆರವಣಿಗೆ ನಡೆಯಿತು.

ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ್ದ ದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿಗಳು ಸಂಜೆ ನಗರದ ಭೀಷ್ಮ ಕೆರೆ ಆವರಣದಲ್ಲಿರುವ ಬನ್ನಿ ಮಹಾಂಕಾಳಿ ದೇವಸ್ಥಾನ ಬಯಲಿಗೆ ಆಗಮಿಸಿದವು. ಅಲ್ಲಿನ ಬನ್ನಿ ಗಿಡಕ್ಕೆ ವೀರ ನಾರಾಯಣ ದೇವಸ್ಥಾನದ ಅರ್ಚಕರು ಪೂಜೆ ಸಲ್ಲಿಸಿದರು. ಬನ್ನಿ ಮುಡಿದ ನಂತರ ಹಲವು ಗಣ್ಯರು ಕೆರೆ ಆವರಣದಲ್ಲಿಯೇ ಬನ್ನಿ ವಿನಿಮಯ ಮಾಡಿಕೊಂಡು, ಪರಸ್ಪರ ಶುಭಾಶಯ ಕೋರಿದರು. ನಗರದ ಜಗದ್ಗುರು ತೋಂಟದಾರ್ಯ ಮಠದ ಆವರಣದಲ್ಲಿ ತೋಂಟದ ಡಾ| ಸಿದ್ಧರಾಮ ಸ್ವಾಮೀಜಿ ಸಂಜೆ ಭಕ್ತರಿಗೆ ಬನ್ನಿ ನೀಡಿ ಆಶೀರ್ವದಿಸಿದರು. ನೂರಾರು ಭಕ್ತರು ಮಠದ ಆವರಣದಲ್ಲಿ ನೆರೆದು, ಶ್ರೀಗಳ ಆಶೀರ್ವಚನ ಆಲಿಸಿದರು. ಸ್ವಾಮೀಜಿಗೆ ಬನ್ನಿ ಕೊಟ್ಟು ಪುನೀತರಾದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.