ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ


Team Udayavani, Oct 6, 2022, 4:34 PM IST

hd-k

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ದಗೊಳ್ಳುತ್ತಿವೆ ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ‌ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ‌ ಕಾರ್ಯಕ್ರಮಗಳ ಮೂಲಕ ತೋರಿಸುತ್ತೇವೆ ಅವರು ಹೇಳಿದರು.

ಇದನ್ನೂ ಓದಿ:ಅಕ್ಟೋಬರ್‌ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್‌ ಕುಮಾರ್

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರು ಜೆಡಿಎಸ್‍ ಪರ ಪ್ರಚಾರಕ್ಕೆ ಬರಲಿದ್ದಾರೆ. ಈ ಬಗ್ಗೆ ಎರಡೂ ಪಕ್ಷಗಳು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.

ಅ.8ರಂದು ಜನತಾ ಮಿತ್ರ ಸಮಾರೋಪ: ಅಕ್ಟೋಬರ್ 8ಕ್ಕೆ ಜನತಾ‌ಮಿತ್ರ ಸಮಾರೋಪ ಸಮಾರಂಭ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮದ್ಯಾಹ್ನ 3 ಘಂಟೆಗೆ ಆಯೋಜಿಸಿದ್ದೇವೆ. ಈ ಸಂಬಂಧ ಪೂರ್ವ ಸಿದ್ದತೆಗಾಗಿ ಚರ್ಚೆ ಮಾಡಲು ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಿಬಿಎಂಪಿ ಚುನಾವಣಾ ಪ್ರಚಾರ: ಮಳೆಯಿಂದಾಗಿ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅ.8ರಂದು ಮಧ್ಯಾಹ್ನ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಮುಂದಿನ ಬಿಬಿಎಂಪಿ ಚುನಾವಣಾ ಪ್ರಚಾರದ ಸಮಾವೇಶ ಕೂಡ ಇದೇ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.

ಮೆಚ್ಯುರಿಟಿ ಸಿಎಂ ಗೆ ಇದೆಯಾ?:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು. ಕಲಾವಿದರ ಕೋಟಾದಿಂದ ಬಂದವರಿಗೆ 50 ಕೋಟಿ ಅನುದಾನ ಕೊಡುವುದೆಂದರೆ ಹೇಗೆ?. ಕಾರ್ಯಕ್ರಮ ರದ್ದಾಗಿದೆ ಅಂತ ಹಿಂದಿನ ದಿನ ಹೇಳಿದ್ದಾರೆ. ಆದರೆ ಮತ್ತೆ ಯಾಕೆ ಕಾರ್ಯಕ್ರಮ ಮಾಡಿದರು ಎಂದು ಸಿಎಂ ವಿರುದ್ಧ ಗರಂ ಆದರು.

ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ, ತಾಕತ್ತಿದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.