‘ಹಿಂದೂ’ ಪದವನ್ನು ಸೃಷ್ಟಿಸಿದ್ದು ಬ್ರಿಟಿಷರು: ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ
Team Udayavani, Oct 6, 2022, 5:46 PM IST
ಚೆನ್ನೈ: ರಾಜ ರಾಜ ಚೋಳನ್ ಹಿಂದೂ ರಾಜನಲ್ಲ ಎಂದು ಹೇಳುವ ಮೂಲಕ ರಾಷ್ಟ್ರೀಯ ಪ್ರಶಸ್ತಿ ವಿಜೇತ ತಮಿಳು ನಿರ್ದೇಶಕ ವೆಟ್ರಿಮಾರನ್ ವಿವಾದವನ್ನು ಹುಟ್ಟುಹಾಕಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ್ದ ವೆಟ್ರಿಮಾರನ್ “ರಾಜ ರಾಜ ಚೋಳನ್ ಹಿಂದೂ ಅಲ್ಲ. ಆದರೆ ಅವರು (ಬಿಜೆಪಿ) ನಮ್ಮ ಗುರುತನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ. ಅವರು ಈಗಾಗಲೇ ತಿರುವಳ್ಳುವರ್ ಅವರನ್ನು ಕೇಸರಿ ಮಾಡಲು ಪ್ರಯತ್ನಿಸಿದ್ದಾರೆ. ನಾವು ಎಂದಿಗೂ ಅವಕಾಶ ನೀಡಬಾರದು” ಎಂದು ಹೇಳಿದ್ದರು.
ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ವೆಟ್ರಿಮಾರನ್ ಹೇಳಿಕೆಯನ್ನು ನಟ ಕಮಲ್ ಹಾಸನ್ ಕೂಡಾ ಬೆಂಬಲಿಸಿದ್ದಾರೆ. “ರಾಜ ರಾಜ ಚೋಳನ್ ಅವಧಿಯಲ್ಲಿ ‘ಹಿಂದೂ ಧರ್ಮ’ ಎಂಬ ಹೆಸರಿರಲಿಲ್ಲ. ವೈನವಂ, ಶಿವಂ ಮತ್ತು ಸಮಾನಂ ಎಂದಿತ್ತು. ಇವೆಲ್ಲವನ್ನೂ ಒಟ್ಟಾಗಿ ಉಲ್ಲೇಖಿಸಲು ಬ್ರಿಟಿಷರು ‘ಹಿಂದೂ’ ಎಂಬ ಪದವನ್ನು ಸೃಷ್ಟಿಸಿದರು. ಅವರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಬದಲಾಯಿಸಿದಂತೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಭಾರತ-ದ.ಆಫ್ರಿಕಾ: ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಋತುರಾಜ್- ಬಿಷ್ಣೋಯ್
ರಾಜ ರಾಜ ಚೋಳನ್ನಿಂದ ಪ್ರೇರಿತವಾದ ಕಾದಂಬರಿಯನ್ನು ಆಧರಿಸಿದ `ಪೊನ್ನಿಯಿನ್ ಸೆಲ್ವನ್: 1` ಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ವೆಟ್ರಿಮಾರನ್ ಅವರು ಹೇಳಿಕೆ ನೀಡಿದ್ದರು. ವೆಟ್ರಿಮಾರನ್ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ಮುಖಂಡ ಎಚ್ ರಾಜಾ, ‘ರಾಜರಾಜ ಚೋಳ ನಿಜವಾಗಿಯೂ ಹಿಂದೂ ರಾಜನಾಗಿದ್ದ’ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ