ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಪ್ರಧಾನಿಗಳಿಂದ ಉದ್ಘಾಟನೆ
ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ
Team Udayavani, Oct 6, 2022, 9:20 PM IST
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ 6 ನೇ ಸಭೆಯಲ್ಲಿ ಮಾತನಾಡಿದ ಸಿಎಂ, ನಾಡಿನ ವಿವಿಧ ಸ್ಥಳಗಳಿಂದ ಪವಿತ್ರ ಮೃತ್ತಿಕೆ ಹಾಗೂ ಜಲಸಂಗ್ರಹಿಸುವ ಅಭಿಯಾನದಲ್ಲಿ ತಾಲೂಕು ಕೇಂದ್ರಗಳಿಗೆ ಮಣ್ಣನ್ನು ತಲುಪಿಸುವಂತೆ ಸೂಚನೆ ನೀಡಿ, ಅಲ್ಲಿಂದ ಜಿಲ್ಲಾ ಕೇಂದ್ರಕ್ಕೆ ತರಿಸುವಂತೆ ಸೂಚಿಸಿದರು. ಕೆಂಪೇಗೌಡರ ಜೀವನಚರಿತ್ರೆಯನ್ನು ಬಿಂಬಿಸುವ ವಿಡಿಯೋ ಮ್ಯಾಪಿಂಗ್ ಹಾಗೂ ನೃತ್ಯ ರೂಪಕ ಆಯೋಜಿಸಲು ಅನುಮತಿ ನೀಡಿದ್ದರು.
ಕೆಂಪೇಗೌಡರ ವೀರ ಸಮಾಧಿ ಅಭಿವೃದ್ಧಿಗೆ ಭೂಸ್ವಾಧೀನ ಪ್ರಕ್ರಿಯೆ, 46 ತಾಣಗಳಲ್ಲಿ ನಾಮಫಲಕಗಳ ಅಳವಡಿಕೆ, ಮಾಗಡಿ ಕೋಟೆ ಸಂರಕ್ಷಣೆ ಮುಂತಾದ ಕಾರ್ಯಗಳನ್ನು ಚುರುಕುಗೊಳಿಸುವಂತೆ ಸೂಚಿಸಿದರು.
ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಆರ್.ಅಶೋಕ್, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ