ರಾಷ್ಟ್ರಪತಿ ವಿರುದ್ಧ ಕೀಳು ಹೇಳಿಕೆ : ಸ್ಪಷ್ಟನೆ ನೀಡುವಂತೆ ಉದಿತ್ಗೆ ಕಾಂಗ್ರೆಸ್ ಸೂಚನೆ
10ರೊಳಗೆ ವಿಚಾರಣೆ ಬರುವಂತೆ ಎನ್ಸಿಡಬ್ಲ್ಯೂ ಆದೇಶ
Team Udayavani, Oct 7, 2022, 7:11 AM IST
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಮುಖಂಡ ಉದಿತ್ ರಾಜ್ ಅವರ ವಿವಾದಾತ್ಮಕ ಹೇಳಿಕೆ ಬಗ್ಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. “ಯಾವ ದೇಶಕ್ಕೂ ದ್ರೌಪದಿ ಮುರ್ಮು ಅವರಂತಹ ರಾಷ್ಟ್ರಪತಿ ಸಿಗಬಾರದು. “ಚಮಚಾಗಿರಿ’ ಮಾಡಲು ಕೂಡ ಒಂದು ಮಿತಿ ಇದೆ. ದೇಶದ ಶೇ.70ರಷ್ಟು ಜನರು ಗುಜರಾತ್ನ ಉಪ್ಪು ತಿನ್ನುತ್ತಾರೆ ಎಂದು ದ್ರೌಪದಿ ಮುರ್ಮು ಹೇಳುತ್ತಾರೆ. ಕೇವಲ ಉಪ್ಪು ತಿಂದು ಜೀವಿಸಲು ಆರಂಭಿಸಿದರೆ ಆಗ ಅವರಿಗೆ ಅದರ ಅರಿವಾಗುತ್ತದೆ,’ ಎಂದು ಟ್ವೀಟ್ ಮಾಡಿದ್ದರು.
ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ನಾಯಕ ಶೆಹಬಾಜ್ ಪೂನಾವಾಲ, “ಕಾಂಗ್ರೆಸ್ನ ಅಜಯ್ ಕುಮಾರ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೂತ, ಅಧಿರ್ ರಂಜನ್ ಚೌಧರಿ ರಾಷ್ಟ್ರಪತ್ನಿ ಎಂದು ಟೀಕಿಸಿದ್ದರು. ಉದಿತ್ ರಾಜ್ ಬುಡಕಟ್ಟು ಸಮುದಾಯಕ್ಕೆ ಮಾಡಿದ ಅವಮಾನವನ್ನು ಬೆಂಬಲಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ಘಟನೆಯಿಂದ ಮುಜುಗರಕ್ಕೆ ಒಳಗಾದ ಕಾಂಗ್ರೆಸ್ ವಿವಾದದ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ಇದೇ ವೇಳೆ, ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಶಾಸಕ ಲಕ್ಷ್ಮಣ್ ಸಿಂಗ್ ಒತ್ತಾಯಿಸಿದ್ದಾರೆ. ಈ ನಡುವೆ, ರಾಷ್ಟ್ರೀಯ ಮಹಿಳಾ ಆಯೋಗ ಕೂಡ ಅ.10ರ ಒಳಗಾಗಿ ವಿವರಣೆ ನೀಡುವಂತೆಯೂ ಸೂಚಿಸಿದೆ.
ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆಯೇ ತೇಪೆ ಹಚ್ಚಿರುವ ಉದಿತ್ ರಾಜ್, “ಹೇಳಿಕೆ ನನ್ನ ಸ್ವಂತ ಅಭಿಪ್ರಾಯ. ಕಾಂಗ್ರೆಸ್ಗೂ ಅದಕ್ಕೂ ಸಂಬಂಧವಿಲ್ಲ. ದಲಿತರು ಮತ್ತು ಬುಡಕಟ್ಟು ಜನಾಂಗದವರ ಬಗ್ಗೆ ಗೌರವವಿದೆ,’ ಎಂದು ಟ್ವೀಟ್ ಮಾಡಿದ್ದಾರೆ.
राष्ट्रपति जी को बयान सोच करके देना चाहिए।नमक खाने का अर्थ गहरा है।मेरे शब्द चयन में गलती हुई,खेद है। मै सवाल करता रहूँगा।मैं पद का मोह नही रखता, एससी/एसटी का प्रतिनिधित्व करता हूं तो तड़प जाता हूं जब इनके नाम से उच्च पद पर रहकर चुप रहते हैं।
— Dr. Udit Raj (@Dr_Uditraj) October 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ