ಬಹುಗ್ರಾಮ ಯೋಜನೆಯಿಂದ ಬಹು ಕ್ಷೇತ್ರಗಳಿಗೆ ನೀರು!


Team Udayavani, Oct 7, 2022, 7:17 AM IST

ಬಹುಗ್ರಾಮ ಯೋಜನೆಯಿಂದ ಬಹು ಕ್ಷೇತ್ರಗಳಿಗೆ ನೀರು!

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳ 15 ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಒಟ್ಟು 73.10 ಕೋ.ರೂ.ಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಒಂದೇ ಬಹುಗ್ರಾಮ ಯೋಜನೆ ಯಿಂದ ಮೂರು ಕ್ಷೇತ್ರಗಳ ಗ್ರಾಮೀಣ ಭಾಗಕ್ಕೆ ನೀರು ಸಿಗುತ್ತಿರುವುದು ಇದೇ ಮೊದಲು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಂಗಳೂರು ವಿಭಾಗದಿಂದ ಜಲಜೀವನ್‌ ಮಿಷನ್‌ ಯೋಜನೆ-2215 ಎಂವಿಎಸ್‌ ಮೂಲಕ ಅನು ಷ್ಠಾನಗೊಳ್ಳುವ ಈ ಯೋಜನೆಗೆ ಉಳಾçಬೆಟ್ಟು ಮತ್ತು ಬಂಟ್ವಾಳ ಇತರ 132 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಎಂಬ ಹೆಸರನ್ನು ಇಡಲಾಗಿದೆ.

ಬಂಟ್ವಾಳ ಹಾಗೂ ಮಂಗಳೂರು ಉತ್ತರ ಕ್ಷೇತ್ರಕ್ಕೆ ತಲಾ 26.58 ಕೋ.ರೂ., ಮಂಗಳೂರು ಕ್ಷೇತ್ರಕ್ಕೆ 19.94 ಕೋ.ರೂ. ಮೀಸಲಿಡಲಾಗಿದೆ. 18 ತಿಂಗಳಲ್ಲಿ ಯೋಜನೆ ಪೂರ್ತಿಗೊಳ್ಳಲಿದ್ದು, ಮುಗ್ರೋಡಿ ಕನ್‌ಸ್ಟ್ರಕ್ಷನ್ಸ್‌ ಕಾಮಗಾರಿ ನಿರ್ವಹಿಸಲಿದೆ.

92,174 ಫಲಾನುಭವಿಗಳು
ಯೋಜನೆಯು ಒಟ್ಟು 92,174 ಮಂದಿ ಫಲಾನುಭವಿಗಳನ್ನು ತಲುಪಲಿದ್ದು, ಬಂಟ್ವಾಳದ 51 ಜನವಸತಿ ಪ್ರದೇಶದ 22,708, ಮಂಗಳೂರು ಕ್ಷೇತ್ರದ 34 ಜನವಸತಿ ಪ್ರದೇಶದ 27,751 ಹಾಗೂ ಮಂಗಳೂರು ಉತ್ತರದ 47 ಜನವಸತಿ ಪ್ರದೇಶದ 41,679 ಮಂದಿಗೆ ನೀರನ್ನೊದಗಿಸುವ ಗುರಿ ಹೊಂದಲಾಗಿದೆ.

15 ಗ್ರಾಮಗಳಿಗೆ ಯೋಜನೆ
ಪ್ರಸ್ತುತ ಅನುಷ್ಠಾನಗೊಳ್ಳುತ್ತಿರುವ ಯೋಜನೆ ಯಲ್ಲಿ ಬಂಟ್ವಾಳದ ಕ್ಷೇತ್ರದ 5 ಗ್ರಾ.ಪಂ.ಗಳ ಅಮ್ಮುಂಜೆ, ಬಡಗಬೆಳ್ಳೂರು, ತೆಂಕಬೆಳ್ಳೂರು, ಕರಿಯಂಗಳ, ಕಳ್ಳಿಗೆ ಗ್ರಾಮಗಳು, ಮಂಗಳೂರು ಕ್ಷೇತ್ರದ 3 ಗ್ರಾ.ಪಂ.ಗಳ ಪುದು, ಕೊಡಾ¾ಣ್‌, ಮೇರಮಜಲು, ತುಂಬೆ ಗ್ರಾಮಗಳು, ಮಂಗ ಳೂರು ಉತ್ತರ ಕ್ಷೇತ್ರದ 4 ಗ್ರಾ.ಪಂ.ಗಳ ಅಡ್ಯಾರ್‌, ಅರ್ಕುಳ, ಮಲ್ಲೂರು, ಬೊಂಡಂತಿಲ, ನೀರುಮಾರ್ಗ, ಉಳ್ಳಾಯಿಬೆಟ್ಟು ಹೀಗೆ ಒಟ್ಟು 15 ಗ್ರಾಮ(11 ಗ್ರಾ.ಪಂ.)ಗಳ ಒಟ್ಟು 132 ಜನವಸತಿ ಪ್ರದೇಶಗಳಿಗೆ ನೀರು ತಲುಪಲಿದೆ.

ಬೆಂಜನಪದವಿನಲ್ಲಿ ಮುಖ್ಯ ಟ್ಯಾಂಕ್‌
ಯೋಜನೆಗೆ ಬೇಕಾಗುವ 5.60 ಎಂಎಲ್‌ಡಿ ನೀರನ್ನು ನೇತ್ರಾವತಿ ನದಿಯ ತುಂಬೆ ಮನಪಾ ಅಣೆಕಟ್ಟಿನಿಂದ ರಾಮಲ್‌ಕಟ್ಟೆ ಘಟಕದ ಮೂಲಕ ಮೇಲೆತ್ತಿ ಬೆಂಜನಪದವು ರಾಮನಗರದ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಳ್ಳುವ 5.50 ಲಕ್ಷ ಲೀ. ಸಾಮರ್ಥ್ಯದ ಮೇಜರ್‌ ಬ್ಯಾಲೆನ್ಸಿಂಗ್‌ ಟ್ಯಾಂಕ್‌ (ಎಂಬಿಟಿ)ಗೆ ತುಂಬಿಸಿ ಬಳಿಕ 9 ಝೋನಲ್‌ ಬ್ಯಾಲೆನ್ಸಿಂಗ್‌ ಟ್ಯಾಂಕ್‌(ಝಡ್‌ಬಿಟಿ)ಗಳಿಗೆ ಪೂರೈಸಲಾಗುತ್ತದೆ.

ಯೋಜನೆಯಲ್ಲಿ 3 ಕ್ಷೇತ್ರಗಳ 15 ಗ್ರಾಮದ 132 ಜನವಸತಿ ಪ್ರದೇಶಗಳಿಗೆ ಬೇಕಾದ ಒಟ್ಟು 5.60 ಎಂಎಲ್‌ಡಿ ನೀರನ್ನು ನೇತ್ರಾವತಿ ನದಿಯಿಂದ ರಾಮಲ್‌ಕಟ್ಟೆಯ ನೀರು ಶುದ್ಧೀಕರಣ ಘಟಕದಿಂದ ಪಡೆಯಲಾಗುತ್ತದೆ. ಸಾಕಷ್ಟು ಬಹುಗ್ರಾಮ ನೀರಿನ ಯೋಜನೆಗಳು ಅನುಷ್ಠಾನಗೊಂಡಿದ್ದು, ಜಿಲ್ಲೆಯಲ್ಲಿ ಮೂರು ಕ್ಷೇತ್ರಗಳನ್ನು ಒಳಗೊಂಡ ಯೋಜನೆ ಇದೇ ಮೊದಲಾಗಿದೆ.
– ನರೇಂದ್ರಬಾಬು ಕಾರ್ಯಪಾಲಕ ಎಂಜಿನಿಯರ್‌, ಗ್ರಾ.ಕು.ನೀ.ಹಾಗೂ ನೈ.ಇಲಾಖೆ ಮಂಗಳೂರು ವಿಭಾಗ

–  ಕಿರಣ್‌ ಸರಪಾಡಿ

 

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.