ಪ್ರಾದೇಶಿಕ ಸಾರಿಗೆ ಕಚೇರಿಗೆ ಶೀಘ್ರ ಕೊನೆ ಮೊಳೆ

ಎಲ್ಲ 58 ಸೇವೆಗಳನ್ನು ಆನ್‌ಲೈನ್‌ಗೊಳಿಸಲು ಸಿದ್ಧತೆ ; ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಸರ್ಕಾರದ ಕ್ರಮ

Team Udayavani, Oct 7, 2022, 3:48 PM IST

22

ರಾಯಚೂರು: ಸಾರ್ವಜನಿಕರ ಬಹುಬೇಡಿಕೆಯ ಪ್ರಾದೇಶಿಕ ಸಾರಿಗೆ ಕಚೇರಿ ಇನ್ನು ಮುಂದೆ ಕಾಲಗರ್ಭದಲ್ಲಿ ಲೀನವಾಗುವ ಸಾಧ್ಯತೆಗಳು ದಟ್ಟವಾಗಿವೆ. ಜನರಿಗೆ ಉತ್ತಮ ಹಾಗೂ ತ್ವರಿತ ಸೇವೆ ನೀಡಬೇಕು ಎನ್ನುವ ಕಾರಣಕ್ಕೆ ಈಗಾಗಲೇ ಕೆಲವೊಂದು ಸೇವೆಗಳನ್ನು ಆನ್‌ಲೈನ್‌ಗೊಳಿಸಿರುವ ಸರ್ಕಾರ, ಶೀಘ್ರದಲ್ಲೇ ಎಲ್ಲ 58 ಸೇವೆಗಳನ್ನು ಆನ್‌ಲೈನ್‌ಗೆ ವರ್ಗಾಯಿಸಿ ಆರ್‌ಟಿಒ ಕಚೇರಿ ನಿಷ್ಕ್ರಿಯಗೊಳಿಸುವ ಚಿಂತನೆ ನಡೆಸಿದೆ.

ಸರ್ಕಾರಕ್ಕೆ ಆದಾಯ ತರುವ ಕಚೇರಿ ಇದಾಗಿತ್ತು. ವಾಹನಗಳ ನೋಂದಣಿ, ವರ್ಗಾವಣೆ, ವಾಹನಗಳ ನವೀಕರಣ, ಚಾಲನಾ ಪರವಾನಗಿ ವಿತರಣೆ ಸೇರಿದಂತೆ ನಾನಾ ಕಾರ್ಯಗಳಿಗೆ ಈ ಕಚೇರಿಗೆ ನಿತ್ಯ ನೂರಾರು ಜನ ಅಲೆಯುತ್ತಿದ್ದರು. ಆದರೆ, ಸರ್ಕಾರಕ್ಕೆ ಸಂದಾಯವಾಗುವ ಶುಲ್ಕದ ದುಪ್ಪಟ್ಟು ಹಣ ಮಧ್ಯವರ್ತಿಗಳ ಜೇಬು ಸೇರುತ್ತಿತ್ತು. ಅಲ್ಲದೇ, ವಾಹನಗಳ ತಪಾಸಣೆ ಕಾರ್ಯವನ್ನು ಇದೇ ಇಲಾಖೆ ನಿರ್ವಹಿಸಬೇಕಿತ್ತು. ಈಗಾಗಲೇ ಆರ್‌ಟಿಒ ಹಂತ ಹಂತವಾಗಿ ಆನ್‌ಲೈನ್‌ ಸೇವೆಗಳನ್ನು ಆರಂಭಿಸಿದೆ. ಬೈಕ್‌ ಮತ್ತು ಕಾರುಗಳ ನೋಂದಣಿ ಸಂಖ್ಯೆಗಳನ್ನು ವಾಹನಗಳ ಶೋರೂಂಗಳಿಗೆ ನೀಡಲಾಗಿದೆ. ಸರ್ಕಾರ ನಿಗದಿ ಮಾಡಿದ ಶುಲ್ಕ ಪಾವತಿಸಿದರೆ ಆರ್‌ಟಿಒಗೆ ಬರುವ ಅಗತ್ಯವೂ ಇಲ್ಲ. ಇದರ ಜತೆಗೆ ಚಾಲನಾ ಪರವಾನಗಿ ಪಡೆಯಲು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ, ಅಲ್ಲೇ ಪರೀಕ್ಷೆ ನೀಡುವ ವ್ಯವಸ್ಥೆ ಜಾರಿ ಮಾಡಲಾಗಿದೆ. ವಾಹನಗಳ ವರ್ಗಾವಣೆ, ನವೀಕರಣ ಸೇರಿದಂತೆ ಎಲ್ಲವೂ ಆನ್‌ಲೈನ್‌ ಮಯವಾಗುತ್ತಿದೆ.

ಮಧ್ಯವರ್ತಿಗಳಿಗೆ ಕಂಟಕ: ಸರ್ಕಾರದ ಈ ಕ್ರಮದಿಂದ ಮುಖ್ಯವಾಗಿ ಮಧ್ಯವರ್ತಿಗಳಿಗೆ ಕಂಟಕವಾಗಿ ಪರಿಣಮಿಸಲಿದೆ. ಇಷ್ಟು ದಿನ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಂದ ವಸೂಲಿ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸರ್ಕಾರ ಹೆಡೆಮುರಿ ಕಟ್ಟುವ ಕಾಲ ಸನ್ನಿಹಿತವಾದಂತಾಗಿದೆ. ಕಚೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಸಿಗದ ಸೌಲಭ್ಯಗಳು ಹಣ ಕೊಟ್ಟರೆ ಒಂದೆರಡು ದಿನಗಳಿಗೆ ಸಿಗುತ್ತಿದ್ದವು. ಇನ್ನು ಮುಂದೆ ಅಂಥ ದಂಧೆಗಳಿಗೆ ಕಡಿವಾಣ ಬೀಳಲಿದ್ದು, ಜನರಿಗೆ ತ್ವರಿತ ಸಿಗಬಹುದು ಎನ್ನುವುದೇ ಸಮಾಧಾನಕರ ಸಂಗತಿ.

ಆರ್‌ಟಿಒ ಕಚೇರಿ ಕಥೆ ಏನು?

ಸರ್ಕಾರ ಎಲ್ಲ ಸೇವೆಗಳು ಆನ್‌ಲೈನ್‌ ಗೊಳಿಸಿದರೆ ಆರ್‌ಟಿಒ ಕಚೇರಿ ಸಂಪೂರ್ಣ ಕಣ್ಮರೆಯಾಗಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಇದಕ್ಕೆ ಆರ್‌ಟಿಒ ಸಿಬ್ಬಂದಿ ಕೂಡ ಹೌದು ಎನ್ನುತ್ತಾರೆ. ಸರ್ಕಾರ ಈಗ ಕೈಗೊಳ್ಳುತ್ತಿರುವ ಹೆಜ್ಜೆ ನಮ್ಮೆಲ್ಲರ ಕೆಲಸಗಳಿಗೆ ಕತ್ತರಿ ಹಾಕುವಂತಿದೆ. ಈಗಿರುವ ಸಿಬ್ಬಂದಿಯನ್ನು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿ ಅಗತ್ಯವಿರುವ ಒಂದೆರಡು ಹುದ್ದೆಗಳನ್ನು ಮಾತ್ರ ಉಳಿಸಿಕೊಳ್ಳಬಹುದು. ಅದಕ್ಕೆ ಇಷ್ಟೊಂದು ದೊಡ್ಡ ಕಚೇರಿಯ ಅಗತ್ಯವೂ ಇರಲಿಕ್ಕಿಲ್ಲ ಎನ್ನುತ್ತಾರೆ ಸಿಬ್ಬಂದಿ.

ಸಿಬ್ಬಂದಿ ಕೊರತೆಯಲ್ಲೇ ಕೆಲಸ

ಸರ್ಕಾರದ ಈ ನಿರ್ಧಾರ ಪರಿಣಾಮವೋ ಅಥವಾ ಬೇರೆ ಕಾರಣಕ್ಕೋ ಆರ್‌ಟಿಒ ಕಚೇರಿಯಲ್ಲಿ ಅಗತ್ಯವಿದ್ದರೂ ಸಿಬ್ಬಂದಿಗಳ ನೇಮಕ ಪ್ರಕ್ರಿಯೆಗೆ ಸರ್ಕಾರ ಮುಂದಾಗಿಲ್ಲ. ರಾಯಚೂರು ಆರ್‌ಟಿಒಗೆ ಯಾದಗಿರಿ ಜಿಲ್ಲೆಯ ಹೊಣೆಯನ್ನು ನೀಡಲಾಗಿದೆ. ಇನ್ನೂ ಇನ್ಸ್‌ಪೆಕ್ಟರ್‌ಗಳ ಕೊರತೆಯಿದ್ದು, ಕಚೇರಿಯಲ್ಲೂ ಕೆಲಸ ಮಾಡಬೇಕು, ಹೊರಗೆ ವಾಹನಗಳ ತಪಾಸಣೆ ಮಾಡಬೇಕಿದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎನ್ನುತ್ತಾರೆ ಸಿಬ್ಬಂದಿ.

ಈಗಾಗಲೇ ಆರ್‌ಟಿಒ ಬಹುತೇಕ ಸೇವೆಗಳನ್ನು ಆನ್‌ಲೈನ್‌ ಮಾಡಲಾಗಿದೆ. ಈಗ ಎಲ್ಲ 58 ಸೇವೆಗಳನ್ನು ಆನ್‌ಲೈನ್‌ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿರುವ ಮಾಹಿತಿ ಇದೆ. ಬಹುಶಃ ಹಾಗಾದರೆ ನಮ್ಮ ಕಚೇರಿಯಲ್ಲೇ ಮಾಡಲು ಕೆಲಸಗಳೇ ಇರದಂಥ ಸ್ಥಿತಿ ಬರಬಹುದು.  –ವಿನಯಾ ಕಟೋಕರ್‌, ಆರ್‌ಟಿಒ, ರಾಯಚೂರು

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.