‘ಓ…’ ಇದು ಹಾರರ್ ಸಿನಿಮಾ


Team Udayavani, Oct 7, 2022, 5:10 PM IST

‘ಓ…’ ಇದು ಹಾರರ್ ಸಿನಿಮಾ

“ಲವ್‌ ಮಾಕ್ಟೇಲ್‌’ ಚಿತ್ರದ ನಂತರ ಮಿಲನಾ ನಾಗರಾಜ್‌ ಹಾಗೂ ಅಮೃತಾ ಅಯ್ಯಂಗಾರ್‌ ಒಟ್ಟಿಗೇ ನಟಿಸಿರುವ ಚಿತ್ರ “ಓ’. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ನ.11ರಂದು ತೆರೆಗೆ ಬರಲಿದೆ. ವಾಮಾಚಾರ ಹಾಗೂ ಹಾರರ್‌ ಹಿನ್ನೆಲೆಯಲ್ಲಿ ಈ ಚಿತ್ರ ತಯಾರಾಗಿದೆ. ಮಹೇಶ್‌ ಸಿ.ಅಮ್ಮಳ್ಳಿದೊಡ್ಡಿ ಅವರ ಚಿತ್ರಕಥೆ ಹಾಗೂ ನಿರ್ದೇಶನ ಚಿತ್ರಕ್ಕಿದೆ. ಕಿರಣ್‌ ತಲಕಾಡು ಚಿತ್ರದ ಕಥೆ ಬರೆಯುವುದ ಜೊತೆಗೆ “ಏಕಾಕ್ಷರ ಫಿಲಂಸ್‌’ ಬ್ಯಾನರ್‌ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಕೋವಿಡ್‌ಗೂ ಮುನ್ನವೇ ಪ್ರಾರಂಭವಾಗಿದ್ದ ಈ ಚಿತ್ರ ಎಲ್ಲಾ ಅಡೆತಡೆಗಳನ್ನು ದಾಟಿ ಈಗ ಬಿಡುಗಡೆಯ ಹಂತ ತಲುಪಿದೆ. ನಿರ್ದೇಶಕ ಮಹೇಶ್‌ ಮಾತನಾಡಿ, “ಈವರೆಗೆ ನಾನೇನು ಹಾರರ್‌ ಸಿನಿಮಾಗಳನ್ನು ನೋಡಿದ್ದೇನೋ, ಅದೆಲ್ಲಕ್ಕಿಂತ ವಿಭಿನ್ನವಾಗಿರಬೇಕು ಎಂದು ಮಾಡಿದ ಚಿತ್ರ. ಒಂದು ಕುಟುಂಬದಲ್ಲಿ ಅಕ್ಕ ತಂಗಿಯ ಮೇಲೆ ನಡೆಯುವ ಕಥೆಯಿದು. “ಓ’ ಎಂಬ ಪದಕ್ಕೆ ಅರ್ಥವನ್ನು ಚಿತ್ರದಲ್ಲಿ ಹೇಳಿದ್ದೇವೆ. ಜೊತೆ ಗೆ ವಾಮಾಚಾರ ಮಾಡುವುದು ತಪ್ಪು ಅಂತಲೇ ತೋರಿಸಿದ್ದೇವೆ. ಈಗಾಗಲೇ ಚಿತ್ರದ ಮೊದಲ ಪ್ರತಿ ಬಂದಿದ್ದು, ನ.11ಕ್ಕೆ ಬಿಡುಗಡೆಯಾಗುತ್ತಿದೆ’ ಎಂದು ವಿವರಿಸಿದರು.

ನಿರ್ಮಾಪಕ ಕಿರಣ್‌ ತಲಕಾಡು ಮಾತನಾಡುತ್ತ “ಚಿಕ್ಕವನಿದ್ದಾಗಲೇ ನನಗೆ ಏಕಾಕ್ಷರ ಶೀರ್ಷಿಕೆಯಿಟ್ಟುಕೊಂಡು ಸಿನಿಮಾ ಮಾಡಬೇಕೆಂಬ ಆಸೆಯಿತ್ತು. ನಮ್ಮ ಸಿನಿಮಾದಲ್ಲಿ ಪುನೀತ್‌ ರಾಜ್‌ ಕುಮಾರ್‌ ಅವರು ಒಂದು ಹಾಡನ್ನು ಹಾಡಿದ್ದಾರೆ. ಆ ಹಾಡಿನ ಬಿಡುಗಡೆಯನ್ನು ದೊಡ್ಡ ಇವೆಂಟ್‌ ಮೂಲಕ ಮಾಡಬೇಕೆಂಬ ಯೋಚನೆಯಿದೆ. ಆಡಿಯೋ ಬಿಡುಗಡೆಗೆ ನಾನು ಬರುತ್ತೇನೆ ಎಂದೂ ಪುನೀತ್‌ ಅವರು ಹೇಳಿದ್ದರು.ಅವರನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತಿದ್ದೇವೆ. ಚಿತ್ರವನ್ನು ಜನರಿಗೆ ಹೇಗೆಲ್ಲಾ ತಲುಪಿಸಬೇಕೆಂದು ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ:BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್

ನಾಯಕಿ ಮಿಲನಾ ನಾಗರಾಜ್‌ ಮಾತನಾಡಿ, “ಲಾಕ್‌ ಡೌನ್‌ಗೂ ಮುನ್ನವೇ ಈ ಸಿನಿಮಾ ಪ್ರಾರಂಭವಾಗಿತ್ತು. ಬೇರೆಯದೇ ರೀತಿಯ ಅನುಭವ ಕೊಡುವಂಥ ಚಿತ್ರವಿದು. ಈ ಥರದ ಚಿತ್ರಗಳನ್ನು ಮಾಡುವಾಗ ತುಂಬಾ ಸಹನೆ ಇರಬೇಕು, ಅದು ಈ ನಿರ್ದೇಶಕರಲ್ಲಿತ್ತು. ಅಮೃತಾ ನನ್ನ ಸಹೋದರಿ ಪಾತ್ರ ಮಾಡಿದ್ದಾರೆ. ಸಿದ್ದು ಕೂಡ ಒಂದೊಳ್ಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಬ್ಲಾಕ್‌ ಮ್ಯಾಜಿಕ್‌, ಹಾರರ್‌ ಹೀಗೆ ತುಂಬಾ ವಿಷಯಗಳಿವೆ. ಇದನ್ನು ನಾರ್ಮಲ್‌ ಸಿನಿಮಾ ರೀತಿ ಶೂಟ್‌ ಮಾಡಲು ಸಾಧ್ಯವಿಲ್ಲ, ಬೇರೆ ಥರದ ಶಾಟ್‌ ಇಡಬೇಕು’ ಎಂದು ಚಿತ್ರದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು.

ಅಮೃತಾ ಅಯ್ಯಂಗಾರ್‌ ಮಾತನಾಡಿ, “ಚಿತ್ರದಲ್ಲಿ ಹಾರರ್‌ ಎಫೆಕ್ಟ್… ತುಂಬಾ ಚೆನ್ನಾಗಿ ಮೂಡಿಬಂದಿದೆ. ನನ್ನದು ಎಲ್ಲ ಥರದ ಎಮೋಷನ್ಸ್‌ ಕ್ಯಾರಿ ಮಾಡುವಂಥ ಪಾತ್ರ. ಜನರಿಗೆ ಹೆದರಿಸೋದು ತುಂಬಾ ಕಷ್ಟದ ಕೆಲಸ. ಕೆಲವು ಸೀನ್‌ಗಳಲ್ಲಿ ನಟಿಸುವಾಗ ತುಂಬಾ ಭಯವಾಗಿತ್ತು’ ಎಂದರು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.