ಮುದ್ದೇಬಿಹಾಳ: ಸಾಲದ ಬಾಧೆ ತಾಳಲಾರದೆ ನೇಕಾರ ಆತ್ಮಹತ್ಯೆ
Team Udayavani, Oct 7, 2022, 10:15 PM IST
ಮುದ್ದೇಬಿಹಾಳ : ಸಾಲದ ಬಾಧೆ ತಾಳದೇ ಮನನೊಂದು ತಮ್ಮದೇ ಜಮೀನಿನಲ್ಲಿ ನೇಣು ಬಿಗಿದುಕೊಂಡು ನೇಕಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಶಿರೋಳ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಶಿರೋಳ ಗ್ರಾಮದ ದಾನಪ್ಪ ಮಲಕಾಜಪ್ಪ ಹೆಬ್ಬಾಳ(45) ಆತ್ಮಹತ್ಯೆಗೆ ಶರಣಾಗಿರುವ ನೇಕಾರ.ಜಮೀನಿನಲ್ಲಿ ಹಾಕಿದ್ದ ಸಜ್ಜೆ ಬೆಳೆ ರಾಶಿ ಮಾಡುವ ಮುಂಚೆ ಮಳೆ ಬಂದು ಹಾನಿಯಾಗಿತ್ತು.ಅಲ್ಲದೇ ನೇಕಾರಿಕೆಯಲ್ಲೂ ಅಷ್ಟೊಂದು ಆದಾಯ ಇಲ್ಲದ್ದರಿಂದ ಅವರಿವರ ಬಳಿ ಮಾಡಿಕೊಂಡಿದ್ದ ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರಿಹಾರ ನೀಡಲು ಅಗ್ರಹ
ನೇಕಾರ ಕುಟುಂಬದ ವ್ಯಕ್ತಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆಯ ಹಿನ್ನೆಲೆಯಲ್ಲಿ ಸರಕಾರ ತಕ್ಷಣ ಆತನ ಕುಟುಂಬದ ನೆರವಿಗೆ ಬರಬೇಕು.ಪರಿಹಾರಧನ ಬಿಡುಗಡೆ ಮಾಡಬೇಕು ಎಂದು ನೇಕಾರ ಪರ ಸಂಘಟನೆಗಳು ಆಗ್ರಹಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ