ಮಹಿಳಾ ಪ್ರಾತಿನಿಧ್ಯ ಹೆಚ್ಚಿಸಲು ಆರ್ಎಸ್ಎಸ್ ನಿರ್ಧಾರ
ಪದಾಧಿಕಾರಿಗಳ ಹುದ್ದೆಗಳಿಗೆ ಶೇ.33-50ರಷ್ಟು ಮಹಿಳೆಯರನ್ನು ನೇಮಿಸಲು ತೀರ್ಮಾನ
Team Udayavani, Oct 9, 2022, 7:25 AM IST
ನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್) ತನ್ನ ಸಹವರ್ತಿ ಸಂಘಟನೆಗಳಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರನ್ನು ಪದಾಧಿಕಾರಿಗಳ ಹುದ್ದೆಗೆ ನೇಮಿಸಲು ನಿರ್ಧರಿಸಿದೆ.
ಸಂಘಟನೆಯ ಪದಾಧಿಕಾರಿಗಳ ಹುದ್ದೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪುರುಷರೇ ಇದ್ದಾರೆ ಎಂಬ ಭಾವನೆಯನ್ನು ತೊಡೆದುಹಾಕಲು ಆರ್ಎಸ್ಎಸ್ ಈ ಚಿಂತನೆ ನಡೆಸಿದೆ ಎನ್ನಲಾಗಿದೆ.
ತನ್ನ ವಿವಿಧ ಸಂಘಟನೆಗಳಲ್ಲಿ ಶೇ.33ರಿಂದ ಶೇ.50ರಷ್ಟು ಮಹಿಳಾ ಪದಾಧಿಕಾರಿಗಳನ್ನು ನೇಮಿಸಲು ಕಳೆದ ತಿಂಗಳು ರಾಯ್ಪುರದಲ್ಲಿ ನಡೆದ ಅಖಿಲ ಭಾರತೀಯ ಸಮನ್ವಯ ಬೈಠಕ್ನಲ್ಲಿ ತೀರ್ಮಾನಿಸಲಾಯಿತು ಎಂದು ಆರ್ಎಸ್ಎಸ್ ಮೂಲಗಳನ್ನು ಉಲ್ಲೇಖಿಸಿ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಮಹಿಳೆಯರಿಗಾಗಿ ಆರ್ಎಸ್ಎಸ್ನಲ್ಲಿ ಪ್ರತ್ಯೇಕ ಸಂಘಟನೆ-“ರಾಷ್ಟ್ರೀಯ ಸೇವಿಕಾ ಸಮಿತಿ’ ಇದೆ. ಆದರೆ ತನ್ನ ಇತರ ಸಂಘಟನೆಗಳಾದ ಭಾರತೀಯ ಕಿಸಾನ್ ಸಂಘ, ಭಾರತೀಯ ಮಜ್ದೂರ್ ಸಂಘಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಲು ಆರ್ಎಸ್ಎಸ್ ನಿರ್ಧರಿಸಿದೆ.
“ರಾಂಚಿಯಲ್ಲಿ ನಡೆದ ಸಭೆಯಲ್ಲಿ ಕೆಲವು ಶಾಖೆಗಳ ಮಹಿಳಾ ಪದಾಧಿಕಾರಿಗಳಿಗೆ ವಾರ್ಷಿಕ ವರದಿ ಮಂಡಿಸಲು ಅವಕಾಶ ಕಲ್ಪಿಸಲಾಗಿತ್ತು. ಆರ್ಎಸ್ಎಸ್ ಪುರುಷ ಪ್ರಧಾನ ಸಂಘಟನೆ ಎಂದು ಹಾಗೂ ಪುರುಷರು ಮತ್ತು ಮಹಿಳೆಯರ ಚಟುವಟಿಕೆಗಳನ್ನು ಪ್ರತ್ಯೇಕಿಸಲಾಗುತ್ತದೆ ಎಂದು ವಿರೋಧಿಗಳು ಟೀಕಿಸುತ್ತಾರೆ.
2025ಕ್ಕೆ ಸಂಘ ಶತಮಾನೋತ್ಸವ ಆಚರಿಸುತ್ತಿದೆ. ಈ ವೇಳೆಗೆ ಸಂಘದ ಇಮೇಜ್ ಬದಲಾಯಿಸುವ ನಿಟ್ಟಿನಲ್ಲಿ ಪ್ರಮುಖ ಸ್ಥಾನಗಳಿಗೆ ಹೆಚ್ಚಿನ ಮಹಿಳಾ ಕಾರ್ಯಕರ್ತರನ್ನು ನೇಮಿಸಲು ಉದ್ದೇಶಿಸಲಾಗಿದೆ,’ ಎಂದು ಅವರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ