ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಕಠಿನ ಸಜೆ
Team Udayavani, Oct 9, 2022, 12:44 AM IST
ಉಡುಪಿ: ಅಪ್ರಾಪ್ತೆ ಹಾಗೂ ಆಕೆಯ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪಣೆಗಳು ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿ ಕಿಶನ್ (27)ಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ನೀಡಿದ್ದಾರೆ.
ಪ್ರಕರಣದ ವಿವರ
ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ಈ ಘಟನೆ ನಡೆದಿದ್ದು, ಹೊಟೇಲ್ನಲ್ಲಿ ಉದ್ಯೋಗಿಯಾಗಿದ್ದ ಕಿಶನ್ (27) ಅಪ್ರಾಪ್ತೆಯನ್ನು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಅಡ್ಡಗಟ್ಟಿ ಆಕೆಯನ್ನು ಪ್ರೀತಿಸುವುದಾಗಿ ಬಲವಂತದಿಂದ ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಿದ್ದ. ಇದಾದ ಬಳಿಕ ಆಕೆಯ ಸಹೋದರಿಯನ್ನು ಕೂಡ ಅಡ್ಡಗಟ್ಟಿದ್ದು ಆಕೆ ಆತನಿಂದ ತಪ್ಪಿಸಿಕೊಂಡಿದ್ದಳು. ಈ ಘಟನೆ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಪಿಎಸ್ಐ ಕಬ್ಟಾಳರಾಜ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಮೊದಲಿಗೆ ಕುಂದಾಪುರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು 2019ರಲ್ಲಿ ಉಡುಪಿಯಲ್ಲಿ ಪೋಕೊÕà ವಿಶೇಷ ನ್ಯಾಯಾಲಯ ಸ್ಥಾಪಿತವಾದ ಬಳಿಕ ಇಲ್ಲಿಯೇ ವಿಚಾರಣೆ ಮುಂದುವರಿದಿತ್ತು. ನ್ಯಾಯಾಲಯದಲ್ಲಿ ಒಟ್ಟು 12 ಸಾಕ್ಷಿಗಳ ಪೈಕಿ 10 ಮಂದಿಯ ವಿಚಾರಣೆ ನಡೆದಿದ್ದು ಸಂತ್ರಸ್ತರಿಬ್ಬರ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದ ಹಿನ್ನೆಲೆ ಈತನೇ ದೋಷಿ ಎಂದು ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ.
ಆರೋಪಿಗೆ 1 ತಿಂಗಳು ಜೈಲು ಶಿಕ್ಷೆ, 2 ವರ್ಷ ಕಠಿನ ಶಿಕ್ಷೆ ಹಾಗೂ 1 ಸಾವಿರ ರೂ. ದಂಡ, ಬೆದರಿಕೆ ಹಾಕಿದ್ದಕ್ಕೆ ಸೆಕ್ಷನ್ 506ರ ಅಡಿಯಲ್ಲಿ 1 ವರ್ಷ ಕಠಿನ ಜೈಲು ಹಾಗೂ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕಾಗಿ ಪೋಕೊÕ ಕಾಯ್ದೆಯಡಿ 1 ವರ್ಷ ಕಠಿನ ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಸರಕಾರ 5 ಸಾವಿರ ರೂ. ಪರಿಹಾರ ನೀಡಬೇಕೆಂದು ಆದೇಶ ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು