ಮುಕ್ತಾಯದ ಹಂತಕ್ಕೆ ಏತ ನೀರಾವರಿ ಕಾಮಗಾರಿ

0.875 ಟಿಎಂಸಿ ನೀರು 12 ಸಾವಿರ ಹೆಕ್ಟೇರ್‌ ಭೂಮಿ ಬಳಕೆ; ರೈತರಿಗೆ ವರವಾಗಲಿದೆ ಯೋಜನೆ

Team Udayavani, Oct 9, 2022, 4:00 PM IST

22

ಯಲಬುರ್ಗಾ: ಬಹುನಿರೀಕ್ಷಿತ ಕೊಪ್ಪಳ ಏತ ನೀರಾವರಿ ಯೋಜನೆಯ ಎರಡನೇ ಹಂತದ ಕಾಮಗಾರಿ ಮುಕ್ತಾಯ ಹಂತಕ್ಕೆ ಬಂದಿದ್ದು, ನವೆಂಬರ್‌ ತಿಂಗಳೊಳಗೆ ಕ್ಷೇತ್ರದ ಕೆರೆಗಳಿಗೆ ನೀರು ಹರಿಸಲು ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದು ಇದು ತಾಲೂಕಿನ ರೈತಾಪಿ ಸಮೂಹದಲ್ಲಿ ಆಶಾಭಾವ ಮೂಡಿಸಿದೆ.

ಮೊದಲ ಹಂತದಲ್ಲಿ ಸರಕಾರ 1130 ಕೋಟಿ ರೂ. ಅನುದಾನ ನೀಡಿತ್ತು. ನಾರಾಯಣಪುರ ಜಲಾಶಯದಿಂದ ಮುರೋಳ, ಬಲಕುಂದಿ, ಕುಷ್ಟಗಿ ತಾಲೂಕಿನ ಕಲಾಲಬಂಡಿವರೆಗೆ ಕಾಮಗಾರಿ ಸಂಪೂರ್ಣ ಮುಗಿದಿದ್ದು, ಪ್ರಾಯೋಗಿಕವಾಗಿ ನೀರು ಹರಿಸಲಾಗಿದೆ.

ಎರಡನೇ ಹಂತದ ಕಾಮಗಾರಿಗೆ 1,864 ಕೋಟಿ ಅನುದಾನದಲ್ಲಿ ಕೆಲಸಗಳು ನಡೆದಿವೆ. ಕುಷ್ಟಗಿ ತಾಲೂಕಿನ ಕಲಾಲಬಂಡಿಯಿಂದ ಹಗೇದಾಳ, ಗುನ್ನಾಳ ಎರಡು ಪ್ರಮುಖ ಜಾಕ್‌ವೆಲ್‌ಗ‌ಳ ಮೂಲಕ ತಾಲೂಕಿನ 24 ಕೆರೆಗಳಿಗೆ ನೀರು ಹರಿಯಲಿದ್ದು, ಪೈಪ್‌ ಲೈನ್‌ ಜೋಡಣೆ, ವಿದ್ಯುತ್‌ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೇನು ಕೆಲ ದಿನಗಳಲ್ಲಿ ಬಾಕಿ ಇರುವ ಎಲ್ಲ ಕಾಮಗಾರಿಗಳು ಮುಕ್ತಾಯವಾಗಲಿವೆ. ಎರಡನೇ ಹಂತದ ಯೋಜನೆಗೆ 0.875 ಟಿಎಂಸಿ ಅಡಿ ನೀರು ಲಭ್ಯವಾಗಲಿದ್ದು, ಕ್ಷೇತ್ರದ 12 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಬಳಕೆಯಾಗಲಿದೆ.

24 ಕೆರೆಗಳಿಗೆ ನೀರು: ಬಳೂಟಗಿ, ಬಸಾಪುರ, ಯಲಬುರ್ಗಾ ಕೆಂಪುಕೆರೆ, ಕುದರಿಕೋಟಗಿ, ಮಲಕಸಮುದ್ರ, ಬೂನಕೊಪ್ಪ, ದಮ್ಮೂರು, ತಲ್ಲೂರು, ಚಿಕ್ಕಮ್ಯಾಗೇರಿ-1, ಚಿಕ್ಕಮ್ಯಾಗೇರಿ-2, ಮುರುಡಿ, ಬೆಣಕಲ್‌, ಬೇವೂರು, ವಟಪರ್ವಿ, ನೆಲಜೇರಿ, ಕುದರಿಮೋತಿ, ಗುನ್ನಾಳ, ನಿಲೋಗಲ್‌, ಹುಣಸಿಹಾಳ, ಕಲಭಾವಿ, ತಾಳಕೇರಿ, ಗಾಣಧಾಳ, ಗುಳೆ, ಕಟಗಿಹಳ್ಳಿ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.

ಕಟ್ಟುನಿಟ್ಟಿನ ಸೂಚನೆ: ಕ್ಷೇತ್ರದ ಶಾಸಕರು, ಸಚಿವ ಹಾಲಪ್ಪ ಆಚಾರ್‌ ಅವರು ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದಾರೆ. 2013ರಲ್ಲಿ ಆರಂಭಗೊಂಡ ಯೋಜನೆ ಬಾಗಲಕೋಟೆ ಜಿಲ್ಲೆಯಲ್ಲಿ ಸಾಕಷ್ಟು ವಿಳಂಬವಾಗಿದೆ. ಸಚಿವ ಹಾಲಪ್ಪ ಆಚಾರ್‌ ಅವರು ಅಲ್ಲಿನ ಜಿಲ್ಲಾಧಿ ಕಾರಿಗಳ ಹಾಗೂ ಪೊಲೀಸ್‌ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಅಲ್ಲಿನ ರೈತರ ಮನವೋಲಿಸಿ ಯೋಜನೆ ಸಮರೋಪಾದಿಯಲ್ಲಿ ಸಾಗಲು ಸಾಕಷ್ಟು ಶ್ರಮವಹಿಸಿದ್ದಾರೆ. ಪ್ರತಿ ತಿಂಗಳು ಕೃಷ್ಣಾ ಭಾಗ್ಯ ಜಲನಿಮಗದ ಅಧಿ ಕಾರಿಗಳ ಜೊತೆ ನಿರಂತರ ಸಭೆ ನಡೆಸುವ ಕಾರ್ಯ ಮಾಡಿದ್ದಾರೆ.

ವರದಾನ: ಒಣಬೇಸಾಯ ಪ್ರದೇಶವಾದ ತಾಲೂಕಿಗೆ ಕೆರೆ ತುಂಬಿಸುವ ಯೋಜನೆ ವರದಾನವಾಗಲಿದೆ. ಸತತ ಬರದಿಂದ ತತ್ತರಿಸುವ ಈ ಭಾಗದ ಜನರಿಗೆ ಅಂರ್ತಜಲಮಟ್ಟ ಹೆಚ್ಚಳಗೊಂಡು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ತಾಲೂಕಿನ ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸಲಾಗುತ್ತಿದೆ.

ಕೆರೆಗಳ ಅಭಿವೃದ್ಧಿ: ತಾಲೂಕಿನ 24 ಕೆರೆಗಳನ್ನು ಈಗಾಗಲೇ ಸಣ್ಣನೀರಾವರಿ ಯೋಜನೆಯಡಿ ಕೆರೆ ಹೂಳೆತ್ತುವುದು, ಒಡ್ಡು ನಿರ್ಮಾಣ, ಜಂಗಲ್‌ ಕಟಿಂಗ್‌, ಸುತ್ತಲೂ ತಂತಿಬೇಲಿ ಅಳವಡಿಕೆ ಸೇರಿದಂತೆ ಎಲ್ಲಾ ಕೆಲಸ ಕಾರ್ಯಗಳನ್ನು ಮಾಡಲಾಗಿದೆ.

ಇದೊಂದು ಒಳ್ಳೆಯ ಯೋಜನೆಯಾಗಿದ್ದು, ರೈತರಿಗೆ ಅನುಕೂಲವಾಗಲಿದೆ. ಏತ ನೀರಾವರಿ ಯೋಜನೆ ಯಶಸ್ಸು ಸಚಿವ ಹಾಲಪ್ಪ ಆಚಾರ್‌ ಅವರಿಗೆ ಸಲ್ಲಬೇಕಾಗುತ್ತದೆ. ಎರಡನೇ ಹಂತದ ಯೋಜನೆಗೆ 1864 ಕೋಟಿ ಅನುದಾನವನ್ನು ಸರಕಾರದಿಂದ ತಂದಿದ್ದಾರೆ. ನಿತ್ಯ ಯೋಜನೆ ಬಗ್ಗೆ ಅಧಿಕಾರಿಗಳ ಜತೆ ಸಂಪರ್ಕದಲ್ಲಿರುತ್ತಾರೆ. ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ನವೆಂಬರ್‌ ತಿಂಗಳಲ್ಲಿ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಲಾಗುತ್ತದೆ. ತಾಲೂಕಿನ 24 ಕೆರೆಗಳಿಗೆ ನೀರು ಹರಿಸಲು ಈಗಾಗಲೇ ಪೈಪ್‌ಲೈನ್‌ ಪೂರ್ಣಗೊಂಡಿದೆ. ವಿದ್ಯುತ್‌ ಕಾಮಗಾರಿಯಷ್ಟೇ ಬಾಕಿ.  –ಮುರಳಿ ಮನೋಹರ, ಅಭಿಯಂತರರು, ಕೆಬಿಜಿಎನ್‌ಎಲ್‌

ನೀರಾವರಿ ವಿಚಾರದಲ್ಲಿ ನನ್ನ ಬದ್ಧತೆ ಕೆಲವೇ ದಿನಗಳಲ್ಲಿ ಸಾಬೀತು ಪಡಿಸುತ್ತೇನೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕ್ಷೇತ್ರದ ಕೆರೆಗಳಿಗೆ ನೀರು ಹರಿಸುತ್ತೇನೆ. ಕ್ಷೇತ್ರದ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡಲಾಗುತ್ತದೆ. ಡಿಸೆಂಬರ್‌ನೊಳಗೆ ನೀರು ತುಂಬಿಸಲಾಗುತ್ತದೆ. ಈ ನಿಟ್ಟಿನಲ್ಲಿ ಹಲವಾರು ಕ್ರಮ ವಹಿಸಲಾಗಿದೆ.  –ಹಾಲಪ್ಪ ಆಚಾರ್‌, ಸಚಿವರು

ಕ್ಷೇತ್ರದ ಶಾಸಕರಾದ ಸಚಿವ ಹಾಲಪ್ಪ ಆಚಾರ್‌ ಅವರು ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿಗೆ ಒತ್ತು ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಹಲವಾರು ಕೆಲಸಗಳನ್ನು ಮಾಡಿದ್ದಾರೆ. ಕೊಪ್ಪಳ ಏತ ನೀರಾವರಿ ಯೋಜನೆ ಮುಕ್ತಾಯ ಹಂತಕ್ಕೆ ತಲುಪಿದ್ದು ಸಂತಸ ತಂದಿದೆ.  -ವೀರಣ್ಣ ಹುಬ್ಬಳ್ಳಿ, ಭೂ ನ್ಯಾಯ ಮಂಡಳಿ ಸದಸ್ಯ

„ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.