ಸರಕಾರಿ ಶಾಲೆ, ಕಾಲೇಜು ಆಸ್ತಿ ಸಂರಕ್ಷಿಸದಿದ್ದರೆ ಕ್ರಮ
Team Udayavani, Oct 11, 2022, 6:30 AM IST
ಬೆಂಗಳೂರು: ಸರಕಾರಿ ಶಾಲೆ ಮತ್ತು ಕಾಲೇಜುಗಳ ಆಸ್ತಿ ಸಂರಕ್ಷಣ ಆಂದೋಲನವನ್ನು ಕಾಲಮಿತಿಯಲ್ಲಿ ಪೂರ್ಣ ಗೊಳಿಸಲು ವಿಫಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರಗಿಸುವುದಾಗಿ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಅ.13ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಸಚಿವ ಬಿ.ಸಿ.ನಾಗೇಶ್ ಅವರು ಇಲಾಖೆಯ ಪ್ರಗತಿ ಪರಿಶೀಲನ ಸಭೆ ಕರೆದಿರುವುದರಿಂದ ಈವರೆಗೆ ಎಷ್ಟು ಶಾಲೆ, ಕಾಲೇಜುಗಳ ಆಸ್ತಿ ನೋಂದಣಿ ಮಾಡಲಾಗಿದೆ, ಎಷ್ಟು ಬಾಕಿ ಇದೆ ಎಂಬ ಪ್ರಗತಿ ವರದಿಯನ್ನು ಇಲಾಖೆಗೆ ಸಲ್ಲಿಸುವಂತೆ ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಆಗಸ್ಟ್ನಿಂದ ಅಕ್ಟೋಬರ್ವರೆಗೆ ಆಂದೋಲನ ರೂಪದಲ್ಲಿ ನೋಂದಣಿ ಮಾಡುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು.
ಒಂದು ವೇಳೆ ಯಾವುದೇ ಜಿಲ್ಲೆಯಲ್ಲಿ ನೋಂದಣಿ ಪ್ರಕ್ರಿಯೆ ಬಾಕಿ ಇದ್ದರೆ ತತ್ಕ್ಷಣ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿತ್ತು. ಈ ಸಂಬಂಧ ಅ.13ರಂದು ನಡೆಯಲಿರುವ ಪ್ರಗತಿ ಪರಿಶೀಲನ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ಈ ವರೆಗೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!