ಕದ್ರಿ: ಚರಂಡಿಯಲ್ಲಿ ಗಲೀಜು ನೀರು; ಸ್ಥಳೀಯರಿಗೆ ಸಮಸ್ಯೆ
Team Udayavani, Oct 13, 2022, 9:55 AM IST
ಮಹಾನಗರ: ಶ್ರೀ ಕ್ಷೇತ್ರ ಕದ್ರಿಯ ಸಮೀಪದ ಕದ್ರಿಪಾದೆ ಮತ್ತು ಮಂಜುಶ್ರೀ ಬಡಾವಣೆಗಳ ವ್ಯಾಪ್ತಿಯಲ್ಲಿರುವ ಬೃಹತ್ ಚರಂಡಿಯಲ್ಲಿ ಒಳಚರಂಡಿ ನೀರು ಹರಿಯುತ್ತಿದ್ದು, ಸ್ಥಳೀಯ ನಿವಾಸಿಗಳಿಗೆ ನಿತ್ಯ ಸಮಸ್ಯೆಯಾಗಿ ಕಾಡುತ್ತಿದೆ.
ಕೆಲವು ಫ್ಲ್ಯಾಟ್ನವರು ಡ್ರೈನೇಜ್ ನೀರನ್ನು ಚರಂಡಿಗೆ ಬಿಡುತ್ತಿದ್ದಾರೆ. ಮಳೆಗಾಲದಲ್ಲಿ ತೋಡು ತುಂಬಾ ನೀರು ಹರಿಯುವುದರಿಂದ ಅಷ್ಟು ಸಮಸ್ಯೆ ಆಗುವುದಿಲ್ಲ.ಆದರೆ ಮಳೆ ನಿಂತ ಅನಂತರ ತೋಡಿನಲ್ಲಿ ನೀರಿನ ಹರಿಯುವಿಕೆ ಕಡಿಮೆಯಾಗಿ ಡ್ರೈನೇಜ್ನ ಕೊಳಕು ವಾಸನೆ ನೀರು ಹರಿಯುತ್ತದೆ. ಅಲ್ಲದೆ ಸೊಳ್ಳೆಗಳ ಉತ್ಪತ್ತಿಯಾಗಿ ತೋಡಿನ ಹತ್ತಿರದ ಮನೆಗಳಲ್ಲಿ ವಾಸಿಸಲು ಅಸಾಧ್ಯವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಈ ಬಗ್ಗೆ ಸ್ಥಳೀಯ ಕಾರ್ಪೋರೆಟರ್, ಮೇಯರ್ ಅವರ ಗಮನಕ್ಕೂ ತರಲಾಗಿತ್ತು. ಪರಿಣಾಮವಾಗಿ ಕದ್ರಿ ದೇಗುಲದ ಮುಂಭಾಗ ಒಂದು ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಸಮಸ್ಯೆ ಹಾಗೆಯೇ ಉಳಿದಿದೆ. ಈಗ ಮಳೆ ಕಡಿಮೆಯಾಗಿ ತೋಡಲ್ಲಿ ಡ್ರೈನೇಜ್ ನೀರು ಮಾತ್ರ ಹರಿಯುತ್ತಿದೆ ಎಂದು ಕದ್ರಿಪಾದೆ ಮತ್ತು ಮಂಜುಶ್ರೀ ಬಡಾವಣೆಗಳ ನಿವಾಸಿಗಳು ದೂರಿದ್ದಾರೆ.
ಇನ್ನಾದರೂ ಮೇಯರ್, ಆರೋಗ್ಯಾಧಿಕಾರಿ, ಸ್ಥಳೀಯ ಕಾರ್ಪೋರೆಟರ್ಗಳು ಈ ಬಗ್ಗೆ ಸ್ಥಳ ಪರಿಶೀಲಿಸಿ ಸಮಸ್ಯೆ ಪರಿಹಾರಕ್ಕೆ ತುರ್ತು ಮಾರ್ಗೋಪಾಯಗಳನ್ನು ಕಂಡು ಕೊಳ್ಳುವಂತೆ ಅವರು ಮನವಿಯಲ್ಲಿ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ