ಜಾನುವಾರು ಚರ್ಮಗಂಟು ರೋಗ: ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು


Team Udayavani, Oct 14, 2022, 7:50 AM IST

ಜಾನುವಾರು ಚರ್ಮಗಂಟು ರೋಗ : ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ.  ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು

ಬಹುತೇಕ ಗುಣಮುಖವಾಗಿವೆ.  ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು,  20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಲಸಿಕೆ-ಫಾಗಿಂಗ್‌ ಕಾರ್ಯ :

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ  ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ  ಇಲಾಖೆ. ದ.ಕ.ಜಿಲ್ಲೆ

ಟಾಪ್ ನ್ಯೂಸ್

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.