ಬೆಂಗಳೂರು: ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ
Team Udayavani, Oct 15, 2022, 12:09 AM IST
ಬೆಂಗಳೂರು: ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆ ಶುಕ್ರವಾರವೂ ಮುಂದುವರಿದಿದೆ.
ರಾತ್ರಿ 7 ಗಂಟೆ ಬಳಿಕ ಸತತ ಒಂದು ಗಂಟೆಗಳ ಮಳೆಯಾಗಿದ್ದು, ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಶಿವಾನಂದ ವೃತ್ತ, ಮಲ್ಲೇಶ್ವರ, ಎಂ.ಜಿ. ರಸ್ತೆ, ಡಬಲ್ ರೋಡ್, ಆನಂದ್ರಾವ್ ವೃತ್ತ, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್, ಚಾಮರಾಜಪೇಟೆ ಸಹಿತ ಹಲವು ಬಡಾವಣೆಗಳಲ್ಲಿ ಮಳೆಯಾಗಿದೆ.
ಏಕಾಏಕಿ ಮಳೆ ಸುರಿದ ಕಾರಣ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದವರು ಪರದಾಡಿದರು. ಜತೆಗೆ ಒಕಳಿಪುರ ಕೆಳಸೇತುವೆ, ಶಿವಾನಂದ ವೃತ್ತ, ಕಾವೇರಿ ಜಂಕ್ಷನ್ ಸಹಿತ ಹಲವು ರಸ್ತೆಗಳು, ಕೆಳಸೇತುವೆಗಳಲ್ಲಿ ನೀರು ನಿಂತು ತೊಂದರೆ ಉಂಟಾಯಿತು.ಹೆಬ್ಬಾಳ ಎನ್ಇಟಿ ಬಸ್ ನಿಲ್ದಾಣ, ಸಂಜಯನಗರ ಬಳಿ ಮರ ಬಿದ್ದಿದ್ದು, ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ