ಜಕ್ರಿಬೆಟ್ಟುವಿನಲ್ಲಿ ಕಾಮಗಾರಿ ಪ್ರಾರಂಭ

ಜೀವನದಿಗೆ ಮೂರು ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ

Team Udayavani, Oct 15, 2022, 11:33 AM IST

6

ಬಂಟ್ವಾಳ: ದ.ಕ.ಜಿಲ್ಲೆಯ ಜೀವನದಿ ನೇತ್ರಾವತಿ ನದಿಯಲ್ಲಿ ಪೂರ್ತಿ ನೀರು ನಿಲ್ಲಿಸುವ ಉದ್ದೇಶದ ಜತೆಗೆ ಎರಡು ತೀರಗಳನ್ನು ಸಂಪರ್ಕಿಸುವ ದೃಷ್ಟಿಯಿಂದ ಸಣ್ಣ ನೀರಾವರಿ ಇಲಾಖೆಯು ದ.ಕ. ಜಿಲ್ಲೆಯ ಜೀವನದಿಗೆ ಮೂರು ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣವನ್ನು ಕೈಗೆತ್ತಿಕೊಂಡಿದೆ. ಇದರಲ್ಲಿ ಎರಡು ಯೋಜನೆಗಳು ಈಗಾಗಲೇ ಅಂತಿಮ ಹಂತದಲ್ಲಿದ್ದು, ಜಕ್ರಿಬೆಟ್ಟಿನಲ್ಲಿ ಇದೀಗ ಪ್ರಾಥಮಿಕ ಹಂತದ ಕಾಮಗಾರಿ ಪ್ರಾರಂಭಗೊಂಡಿದೆ.

ಸಣ್ಣ ನೀರಾವರಿ ಇಲಾಖೆಯ ಮೂಲಕ ಬಿಳಿಯೂರು-ತೆಕ್ಕಾರು, ಅಡ್ಯಾರು-ಹರೇಕಳ ಪ್ರದೇಶವನ್ನು ಸಂಪರ್ಕಿಸುವ ಸೇತುವೆ ಹಾಗೂ ಕಿಂಡಿ ಅಣೆಕಟ್ಟು ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಕೆಲವೇ ಸಮಯಗಳಲ್ಲಿ ಉದ್ಘಾಟನೆಗೊಳ್ಳುವ ಸಾಧ್ಯತೆ ಇದೆ. ಇದೀಗ ಮೂರನೇ ಯೋಜನೆಯಾಗಿ ಸುಮಾರು 135 ಕೋ.ರೂ.ಗಳಲ್ಲಿ ಇಲಾಖೆಯು ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಪ್ರಸ್ತಾವನೆಯಂತೆ ಜಕ್ರಿಬೆಟ್ಟು ಕಿಂಡಿ ಅಣೆಕಟ್ಟು ಹಾಗೂ ಸೇತುವೆ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿ ಅನುದಾನ ಮಂಜೂರುಗೊಳಿಸಿದೆ. ಈ ಹಿಂದೆ ರಾಜ್ಯ ಸಣ್ಣ ನೀರಾವರಿ ಇಲಾಖೆ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಸೇತುವೆ ನಿರ್ಮಾಣದ ಸ್ಥಳ ಪರಿಶೀಲನೆ ನಡೆಸಿ ಅನುದಾನದ ಭರವಸೆ ನೀಡಿದ್ದರು.

ಪ್ರಾಥಮಿಕ ಹಂತದ ಕಾಮಗಾರಿ

ಜಕ್ರಿಬೆಟ್ಟು ಕಿಂಡಿ ಅಣೆಕಟ್ಟು ಹಾಗೂ ಸೇತುವೆ ನಿರ್ಮಾಣಕ್ಕಾಗಿ ಬಂಟ್ವಾಳ ನಗರದ ಸಮಗ್ರ ಕುಡಿಯುವ ನೀರಿನ ಯೋಜನೆಯ ಜಾಕ್‌ವೆಲ್‌ ಸಮೀಪದಲ್ಲಿ ಈಗಾಗಲೇ ಪ್ರಾಥಮಿಕ ಹಂತದ ಕಾಮಗಾರಿ ಪ್ರಾರಂಭಗೊಂಡಿದ್ದು, ಮಣ್ಣು ತುಂಬಿಸಿ ಪೂರ್ಣ ಪ್ರಮಾಣದ ಕಾಮಗಾರಿಗಾಗಿ ವಿಸ್ತಾರವಾದ ಸ್ಥಳವನ್ನು ಅಂತಿಮ ಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಜತೆಗೆ ಪಿಲ್ಲರ್‌ಗಳ ನಿರ್ಮಾಣಕ್ಕಾಗಿ ಮಣ್ಣು ಹಾಕುವ ಕಾರ್ಯವೂ ನಡೆಯುತ್ತಿದೆ.

ಸೇತುವೆಯು ಬಂಟ್ವಾಳ ನಗರ ಹಾಗೂ ನರಿಕೊಂಬು ಪ್ರದೇಶವನ್ನು ಸಂಪರ್ಕಿಸಲಿದ್ದು, ಒಂದು ಬದಿ ಪುಂಜಾಲಕಟ್ಟೆ-ಬಿ.ಸಿ.ರೋಡ್‌ ಹೆದ್ದಾರಿಯನ್ನು ಸಂಪರ್ಕಿಸಿದರೆ ಮತ್ತೂಂದು ಬದಿಯಲ್ಲಿ ನರಿಕೊಂಬು ಪುಳಿಕುಕ್ಕು ಪ್ರದೇಶದಲ್ಲಿ ಸಂಪರ್ಕ ಸಾಧಿಸಲಿದೆ. ಸೇತುವೆ ಸಂಪರ್ಕಿಸುವ ಎರಡೂ ಭಾಗದ ಪಕ್ಕದಲ್ಲೂ ರಸ್ತೆ ಇರುವುದರಿಂದ ದೊಡ್ಡ ಮಟ್ಟದ ಸಂಪರ್ಕ ರಸ್ತೆಯ ಅಗತ್ಯ ಇಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಇಲಾಖೆಯ ಮಾಹಿತಿ ಪ್ರಕಾರ, ಒಟ್ಟು 7.50 ಮೀ. ಅಗಲದಲ್ಲಿ ವಾಹನ ಸಾಗುವುದಕ್ಕೆ ಅನುಕೂಲವಾಗುವ ಸೇತುವೆ ಇದಾಗಿದ್ದು, ಈ ಭಾಗದಲ್ಲಿ ನದಿಯ ಅಗಲ 341 ಮೀ. ಆಗಿರುತ್ತದೆ. ಬಹುತೇಕ ಎರಡು ಬಸ್ಸುಗಳು ಮುಖಾಮುಖೀಯಾಗಿ ಸಾಗುವ ರೀತಿಯಲ್ಲಿ ಸೇತುವೆಯನ್ನು ಅಗಲಗೊಳಿಸಲಾಗಿದೆ.

ಕುಡಿಯುವ ನೀರು, ಕೈಗಾರಿ ಕೆಗಳಿಗೆ ನೀರು, ವಿದ್ಯುತ್‌ ಉತ್ಪಾ ದನೆ, ಕೃಷಿಗೆ ನೀರು ಹೀಗೆ ಎಲ್ಲ ಉದ್ದೇಶಗಳಿಗೆ ಉಪ್ಪಿನಂಗಡಿ- ಮಂಗಳೂರು ಮಧ್ಯೆ ನೇತ್ರಾವತಿ ನದಿಯಲ್ಲಿ ಜಕ್ರಿಬೆಟ್ಟುವಿನಲ್ಲಿ ನಿರ್ಮಾಣವಾಗುತ್ತಿರುವ ಡ್ಯಾಮ್‌ ಸೇರಿದರೆ ಒಟ್ಟು ಸಂಖ್ಯೆ 6ಕ್ಕೇ ರುತ್ತದೆ. ಉಪ್ಪಿನಂಗಡಿಯಿಂದ ಮಂಗಳೂರು ಭಾಗಕ್ಕೆ ಲೆಕ್ಕಾಚಾರ ಹಾಕಿದರೆ ಬಿಳಿಯೂರಿನಲ್ಲಿ ಕಿಂಡಿ ಅಣೆಕಟ್ಟು, ಅದರ ಕೆಳಭಾಗದ ಶಂಭೂರಿನಲ್ಲಿ ವಿದ್ಯುತ್‌ ಉತ್ಪಾದ ನೆಯ ಎಎಂಆರ್‌ ಡ್ಯಾಮ್‌, ಇದರ ನಡುವೆ ಸರಪಾಡಿಯಲ್ಲಿ ಎಂಆರ್‌ಪಿಎಲ್‌ಗೆ ನೀರು ಪೂರೈಕೆ ಮಾಡುವ ಸಣ್ಣ ಡ್ಯಾಮ್‌ ಇದ್ದು, ಪ್ರಸ್ತುತ ಅದು ಶಂಭೂರು ಡ್ಯಾಮ್‌ ನಿಂದಾಗಿ ಮುಳುಗಡೆಯಾಗಿದೆ.

ಜಕ್ರಿ ಬೆಟ್ಟಿನಲ್ಲಿ ಕಿಂಡಿ ಅಣೆಕಟ್ಟಿನ ಕಾಮ ಗಾರಿ ಪ್ರಾರಂಭಗೊಂಡಿದ್ದು, ಅದರ ಕೆಳಭಾಗಕ್ಕೆ ಮಂಗಳೂರು ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಮ್‌ ಇರುತ್ತದೆ. ಅದರಿಂದ ಮತ್ತೂ ಕೆಳಗಡೆ ಅಡ್ಯಾರ್‌-ಹರೇಕಳ ಮಧ್ಯೆ ಕಿಂಡಿ ಅಣೆಕಟ್ಟು ನಿರ್ಮಾಣವಾಗಿದೆ. ಈ ನಡುವೆ ತುಂಬೆಯಲ್ಲಿ ಮತ್ತೂಂದು ಹಳೆಯ ಡ್ಯಾಮ್‌ ಇದ್ದು, ಸದ್ಯಕ್ಕೆ ಅದು ಹೊಸ ಡ್ಯಾಮ್‌ನ ಹಿನ್ನೀರಿನಲ್ಲಿ ಮುಳುಗಡೆಯಾಗಿದೆ.

ಸೈಟ್‌ ಕ್ಲಿಯರೆನ್ಸ್‌ ಕಾಮಗಾರಿ: ಜಕ್ರಿಬೆಟ್ಟುವಿನಲ್ಲಿ ಕಿಂಡಿ ಅಣೆಕಟ್ಟು, ಸೇತುವೆ ನಿರ್ಮಾಣಕ್ಕಾಗಿ ಪ್ರಸ್ತುತ ಪ್ರಾಥಮಿಕ ಹಂತದ ಸೈಟ್‌ ಕ್ಲಿಯರೆನ್ಸ್‌ ಕಾಮಗಾರಿ ಆರಂಭಗೊಂಡಿದ್ದು, ಮುಂದೆ ಪೂರ್ಣ ಪ್ರಮಾಣದ ಕಾಮಗಾರಿ ಆರಂಭಗೊಳ್ಳುತ್ತದೆ. ಈ ಭಾಗದಲ್ಲಿ ನದಿಯ ಅಗಲ 341 ಮೀ. ಇದ್ದು, 7.50 ಮೀ. ಅಗಲದಲ್ಲಿ ಸೇತುವೆ ನಿರ್ಮಾಣಗೊಳ್ಳಲಿದೆ. -ಶಿವಪ್ರಸನ್ನ, ಸಹಾಯಕ ಎಂಜಿನಿಯರ್‌ ಸಣ್ಣ ನೀರಾವರಿ ಇಲಾಖೆ, ಬಂಟ್ವಾಳ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.