Watch: ಅಂಗಡಿ ಮುಂಭಾಗದ ಬಲ್ಬ್ ಕದ್ದ ಪೊಲೀಸ್ ಕಾನ್ಸ್ ಟೇಬಲ್ ಅಮಾನತು-ವಿಡಿಯೋ ವೈರಲ್
ವರ್ಮಾಗೆ ಇತ್ತೀಚೆಗಷ್ಟೇ ಪ್ರಮೋಷನ್ ನೀಡಿ ಫುಲ್ಪುರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
Team Udayavani, Oct 15, 2022, 3:42 PM IST
ಲಕ್ನೋ: ಅಂಗಡಿಯ ಹೊರಭಾಗದಲ್ಲಿ ಉರಿಯುತ್ತಿದ್ದ ಬಲ್ಬ್ ಅನ್ನು ಕಳವುಗೈದ ಆರೋಪದಡಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನ ಪೊಲೀಸ್ ಕಾನ್ಸ್ ಟೇಬಲ್ ಅಮಾನತುಗೊಂಡಿದ್ದು, ಬಲ್ಬ್ ಕಳವು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಇಂಡಿಯಾ ಆರ್ಭಟಕ್ಕೆ ಲಂಕಾ ಪತನ: ಏಳನೇ ಬಾರಿಗೆ ಏಷ್ಯಾ ಕಪ್ ಗೆದ್ದ ಭಾರತ ವನಿತಾ ತಂಡ
ಎಂದಿನಂತೆ ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಬಂದ ಸಂದರ್ಭದಲ್ಲಿ ಬಲ್ಬ್ ಕಾಣೆಯಾಗಿರುವುದು ಮಾಲೀಕನ ಗಮನಕ್ಕೆ ಬಂದಿತ್ತು. ಬಳಿಕ ಅವರು ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ, ಅಚ್ಚರಿಯಾಗಿತ್ತು ಯಾಕೆಂದರೆ ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಬಲ್ಬ್ ತೆಗೆದು ಕಿಸೆಯೊಳಗೆ ಹಾಕಿಕೊಂಡಿರುವ ದೃಶ್ಯ ಸೆರೆಯಾಗಿತ್ತು.
“ಮುಚ್ಚಿದ್ದ ಅಂಗಡಿ ಬಳಿ ಬಂದು ಸುತ್ತಮುತ್ತ ಗಮನಿಸಿದ ನಂತರ ಕಾನ್ಸ್ ಟೇಬಲ್ ರಾಜೇಶ್ ವರ್ಮಾ, ಉರಿಯುತ್ತಿದ್ದ ಬಲ್ಬ್ ಅನ್ನು ತೆಗೆದು, ಕಿಸಿಯೊಳಗೆ ಹಾಕಿ ನಡೆದು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ದಸರಾ ಹಬ್ಬದಂದು ವರ್ಮಾ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.
Uttar Pradesh: Policeman steals LED bulb, caught on CCTV camera #UttarPradesh #LED #WATCH #UPPolice #ViralVideo #वायरल #Prayagraj #cctv pic.twitter.com/WEtp86Lbt2
— Harish Deshmukh (@DeshmukhHarish9) October 15, 2022
ಈ ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕವಾಗಿ ತೀವ್ರ ಟೀಕೆ ವ್ಯಕ್ತವಾಗಿದ್ದು, ಬಳಿಕ ಕಾನ್ಸ್ ಟೇಬಲ್ ವರ್ಮಾ ಅವರನ್ನು ಅಮಾನತು ಮಾಡಲಾಗಿದೆ. ವರ್ಮಾಗೆ ಇತ್ತೀಚೆಗಷ್ಟೇ ಪ್ರಮೋಷನ್ ನೀಡಿ ಫುಲ್ಪುರ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.
ಕತ್ತಲಾಗಿದ್ದರಿಂದ ಆ ಬಲ್ಬ್ ಅನ್ನು ತೆಗೆದು ತಾನು ನಿಂತಿದ್ದ ಜಾಗದಲ್ಲಿ ಬಲ್ಬ್ ಹಾಕಿಕೊಂಡಿರುವುದಾಗಿ ಅಮಾನತುಗೊಂಡಿರುವ ಪೊಲೀಸ್ ಕಾನ್ಸ್ ಟೇಬಲ್ ವರ್ಮಾ ಸಮಜಾಯಿಷಿ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ