ಚಿಂಚೋಳಿ: ಧಾರಾಕಾರ ಮಳೆ; 236 ಮನೆಗಳಿಗೆ ನುಗ್ಗಿದ ನೀರು

ವಾಹನಗಳ ಸಂಚಾರಕ್ಕೆ, ಗ್ರಾಮಸ್ಥರು ಹೊಲಗದ್ದೆಗಳಿಗೆ ಮತ್ತು ಬೇರೆಡೆ ಹೋಗಲು ತೊಂದರೆಪಡಬೇಕಾಯಿತು.

Team Udayavani, Oct 15, 2022, 5:47 PM IST

ಚಿಂಚೋಳಿ: ಧಾರಾಕಾರ ಮಳೆ; 236 ಮನೆಗಳಿಗೆ ನುಗ್ಗಿದ ನೀರು

ಚಿಂಚೋಳಿ: ತಾಲೂಕಿನಲ್ಲಿ ಗುರುವಾರ ಸಂಜೆ ಯಿಂದ ಮಧ್ಯರಾತ್ರಿ ವರೆಗೆ ಸುರಿದ ಧಾರಾಕಾರ ಮಳೆಯಿಂದ ಪಟ್ಟಣದ ತಗ್ಗುಪ್ರದೇಶದ ಬಡಾವಣೆಗಳ ಅನೇಕ ಮನೆಗಳಿಗೆ ನೀರು ನುಗ್ಗಿ ದಿನಬಳಕೆ ವಸ್ತುಗಳು ಹಾನಿಯಾಗಿವೆಯಲ್ಲದೇ, ಮನೆಯಲ್ಲಿ ಹೊಕ್ಕಿದ ನೀರನ್ನು ಹೊರಹಾಕಲು ಜನರು ಜಾಗರಣೆ ಮಾಡುವ ಪರಿಸ್ಥಿತಿ ಉಂಟಾಗಿತ್ತು.

ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಯಿಂದ ಪಟೇಲ್‌ ಕಾಲೋನಿ, ಬೆಳ್ಳಿಬೆಳಕು ಕಾಲೋನಿ, ಆಶ್ರಯ ಕಾಲೋನಿಯ 70ಮನೆಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಮಲಗಿದ್ದ ಜನರು ಎಚ್ಚರವಾಗಿದ್ದು, ಚಿಕ್ಕಮಕ್ಕಳನ್ನು ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ತೆರಳಿದರು. ಮನೆಯಲ್ಲಿದ್ದ ದಿನಬಳಕೆ ಆಹಾರ ಧಾನ್ಯ, ಬಟ್ಟೆಬರೆ, ಇನ್ನಿತರ ವಸ್ತುಗಳು ನೀರಿನಿಂದ ಹಾನಿಯಾಗಿವೆ.

ಗುರುವಾರ ರಾತ್ರಿ ಹಲವು ಗ್ರಾಮಗಳಲ್ಲಿ ಒಂದೇ ಸಮನೆ ಸುರಿದ ಭಾರಿ ಮಳೆಗೆ ಐನಾಪುರ, ಸುಲೇಪೇಟ, ಕುಂಚಾವರಂ, ಚಿಂಚೋಳಿ, ಚಿಮ್ಮನಚೋಡ, ನಿಡಗುಂದಾ ಹೋಬಳಿಯಲ್ಲಿ ಒಟ್ಟು 166 ಮನೆಗಳಿಗೆ ನೀರು ನುಗ್ಗಿದೆ. ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿಯಾಗಿರುವ ಆಶ್ರಯ ಕಾಲೋನಿ ಎಲ್ಲ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಹಾನಿಗೊಳಗಾದ ಎಲ್ಲರಿಗೂ ಸರ್ಕಾರದಿಂದ ಪರಿಹಾರ ಕೊಡಿಸಲು ಕಂದಾಯ ನಿರೀಕ್ಷಕರು ಮತ್ತು ಗ್ರಾಮಲೆಕ್ಕರಿಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಅಂಜುಮ್‌ ತಬಸುಮ್‌ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸಣ್ಣಪುಟ್ಟ ನಾಲೆಗಳು ತುಂಬಿ ಹರಿಯುತ್ತಿವೆ. ಕೆಳದಂಡೆ ಮುಲ್ಲಾಮಾರಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಆರ್ಭಟದಿಂದ ಮಳೆಯಾಗಿದೆ. ಇದರಿಂದಾಗಿ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದರಿಂದ ಮೂರು ಗೇಟ್‌ನಿಂದ 2ಸಾವಿರ ಕ್ಯೂಸೆಕ್‌ ನೀರನ್ನು ಮುಲ್ಲಾಮಾರಿ ನದಿಗೆ ಹರಿದುಬಿಡಲಾಗಿದೆ ಎಂದು ಎಇಇ ಹಣಮಂತರಾವ ಪೂಜಾರಿ ತಿಳಿಸಿದ್ದಾರೆ.

ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ಹರಿದುಬಿಟ್ಟ ಹೆಚ್ಚುವರಿ ನೀರಿನಿಂದ ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡಹನಳ್ಳಿ, ನಿಮಾಹೊಸಳ್ಳಿ,ಪೋಲಕಪಳ್ಳಿ, ಗರಗಪಳ್ಳಿ ಗ್ರಾಮದ ಬಳಿ ಮುಲ್ಲಾಮಾರಿ ನದಿಗೆ ನಿರ್ಮಿಸಿದ ಬ್ಯಾರೇಜ್‌ ಜಲಾವೃತವಾಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ, ಗ್ರಾಮಸ್ಥರು ಹೊಲಗದ್ದೆಗಳಿಗೆ ಮತ್ತು ಬೇರೆಡೆ ಹೋಗಲು ತೊಂದರೆಪಡಬೇಕಾಯಿತು.

ಪಟ್ಟಣದ ಪಟೇಲ್‌ ಕಾಲೋನಿ ಬಳಿ ಇರುವ ಎಸ್‌.ಬಿ.ಐ ಬ್ಯಾಂಕಿನ ನೆಲಮಹಡಿಯಲ್ಲಿ ಮಳೆ ನೀರು ನಿಂತಿದ್ದರಿಂದ ಬರುವ ಗ್ರಾಹಕರು ತೊಂದರೆ ಪಡುವಂತೆ ಆಗಿತ್ತು. ಬ್ಯಾಂಕಿನ ಹಿಂದುಗಡೆ ಇರುವ ಮನೆಗಳ ಸುತ್ತಮುತ್ತ ತಗ್ಗುಪ್ರದೇಶದಲ್ಲಿ ಮಳೆ ನೀರು ನಿಂತಿದೆ. ಆದರೆ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆಯಿಲ್ಲದ ಕಾರಣ ಮಳೆ ನೀರು ಹರಿದು ಹೋಗುತ್ತಿಲ್ಲ. ಮಳೆ ನೀರಿನಿಂದ ಸೊಳ್ಳೆಕಾಟ, ಗೊಬ್ಬುವಾಸನೆ ವಿಪರೀತವಾಗಿದೆ ಎಂದು ನಿವಾಸಿಗಳು ದೂರಿದ್ದಾರೆ. ಕನಕಪುರ,
ಗಾರಂಪಳ್ಳಿ, ಹೂಡದಳ್ಳಿ, ಮಿರಿಯಾಣ, ಮರಪಳ್ಳಿ, ಚಿಮ್ಮನಚೋಡ, ನರನಾಳ, ಚಿಂಚೋಳಿ ಗ್ರಾಮಗಳ ಹೊಲಗಳಲ್ಲಿ ಬೆಳೆದ ತೊಗರಿ ಮಳೆ ನೀರಲ್ಲಿ ನಿಂತಿದೆ.

ಆಹಾರ ಧಾನ್ಯಕ್ಕೆ ಹಾನಿ: ಪಟ್ಟಣದ ಚಂದಾಪುರ ನಗರದ ಚರಂಡಿಗೆ ಹೊಂದಿಕೊಂಡಿರುವ ಪಟೇಲ್‌ ಕಾಲೋನಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಆಹಾರಧಾನ್ಯಗಳಿಗೆ ಹಾನಿಯಾಗಿದೆ. ಬೈಕ್‌ ಮತ್ತು ಕಾರುಗಳು ಕೊಚ್ಚಿಕೊಂಡು ಹೋಗಿವೆ ಎಂದು ಇಸ್ಮಾಯಿಲ್‌ ಪಟೇಲ ತಿಳಿಸಿದ್ದಾರೆ.

ಕ್ರಮಕ್ಕೆ ಜೆಡಿಎಸ್‌ ಆಗ್ರಹ: ಪಟ್ಟಣದಲ್ಲಿ ಹೆಚ್ಚು ಮಳೆ ಸುರಿದ್ದರಿಂದ ಪಟೇಲ್‌, ಆಶ್ರಯ, ಬೆಳ್ಳಿ ಬೆಳಕು ಕಾಲೋನಿಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದು, ಕೂಡಲೇ ಈ ಪ್ರಸಂಗ ಮರುಕಳಿಸದಂತೆ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್‌ ತಾಲೂಕು ಅಧ್ಯಕ್ಷ ರವಿಶಂಕರರೆಡ್ಡಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.