ಧ್ವಜಸ್ತಂಭವೇ ಕರವೇ ಅಧ್ಯಕ್ಷರ ಬದಲಾವಣೆಗೆ ಕಾರಣವಾಯ್ತ; ಆಕ್ರೋಶ

ನೂರಾರು ಜನ ಸಾಮೂಹಿಕ ರಾಜಿನಾಮೆಗೆ ಸಿದ್ದತೆ

Team Udayavani, Oct 15, 2022, 9:07 PM IST

1-ddsdsf

ಕೊರಟಗೆರೆ: ತುಮಕೂರು ಜಿಲ್ಲಾಧ್ಯಕ್ಷ ರಾಜಕೀಯ ಪ್ರೇರಿತವಾಗಿ ಕೊರಟಗೆರೆ ಕರವೇ ಅಧ್ಯಕ್ಷರ ದಿಢೀರ್ ಬದಲಾವಣೆ ಮಾಡಿದ್ದಾರೆ. ಆದೇಶವನ್ನು ಹಿಂದಕ್ಕೆ ಪಡೆಯದಿದ್ದರೇ ಕೊರಟಗೆರೆಯ ಸಾವಿರಾರು ಕರವೇ ಕಾರ್ಯಕರ್ತರು ಸಾಮೂಹಿಕ ರಾಜಿನಾಮೆ ನೀಡಲು ಸಿದ್ದರಿದ್ದೇವೆ ಎಂದು ಕೊರಟಗೆರೆ ಘಟಕದ ಕರವೇ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕಲೀಂವುಲ್ಲಾ ಎಚ್ಚರಿಕೆ ನೀಡಿದ್ದಾರೆ.

ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ನಾರಾಯಣ ಗೌಡರ ಬಣ)ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ,ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ತುಮಕೂರು ನಗರದಲ್ಲಿ ಕುಳಿತು ಕೊರಟಗೆರೆಯ ವಿಚಾರದಲ್ಲಿ ಹಿಟ್ಲರ್ ಆದೇಶ ಮಾಡಿದ್ದಾರೆ. ಕೊರಟಗೆರೆಯ ಕರವೇ ಘಟಕದ ಗಮನಕ್ಕೆ ಬರದೇ, ಸಂಘಟನೆಯ ನಿಬಂಧನೆಯ ಗಾಳಿಗೆ ತೂರಿ ರಾಜಕೀಯ ಮತ್ತು ವೈಯಕ್ತಿಕ ದ್ವೇಷದಿಂದ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ. ಸಂಘಟನೆಯಲ್ಲಿ ಸಕ್ರಿಯ ಆಗಿರುವ ವ್ಯಕ್ತಿಗೆ ಅವಕಾಶ ನೀಡಬೇಕಿದೆ. ಇಲ್ಲವಾದ್ರೇ ಎಲ್ಲಾ ಘಟಕದ ಕಾರ್ಯಕರ್ತರು ಸಾಮೂಹಿಕ ರಾಜಿನಾಮೇ ನೀಡುತ್ತೇವೆ ಎಂದರು.

ಕೊರಟಗೆರೆ ಘಟಕದ ಕರವೇ ಗೌರವಧ್ಯಕ್ಷ ಬಿ.ಹೆಚ್.ಪ್ರಸನ್ನಕುಮಾರ್ ಮಾತನಾಡಿ, ಗ್ರಾಮೀಣ ಕಾರ್ಯಕರ್ತರಿಗೆ ತಿಳಿಸದೇ ಕೊರಟಗೆರೆ ಕರವೇ ಅಧ್ಯಕ್ಷರ ಬದಲಾವಣೆ ರಾಜಕೀಯ ಪ್ರೇರಿತ. ಜಿಲ್ಲಾಧ್ಯಕ್ಷ ತುಮಕೂರು ನಗರದಲ್ಲಿ ಕುಳಿತು ಕರವೇಗೆ ಸಂಬಂಧವೇ ಇಲ್ಲದ ವ್ಯಕ್ತಿಗೆ ಅಧ್ಯಕ್ಷ ಮಾಡಿರುವುದೇ ನಮ್ಮೇಲ್ಲರ ದುರ್ದೈವ. ಕನ್ನಡದ ನೆಲ ಜಲ-ಬಾಷೆಯ ಪರವಾಗಿ ಹೋರಾಡುವ ನಟರಾಜ್‌ಗೆ ಜಿಲ್ಲಾಧ್ಯಕ್ಷನಿಂದ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕೊರಟಗೆರೆ ಸಾಮಾಜಿಕ ಹೋರಾಟಗಾರ ಜೆಟ್ಟಿಅಗ್ರಹಾರ ನಾಗರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದ ಪ್ರತಿಹಳ್ಳಿಗೂ ಕನ್ನಡದ ಕಂಪನ್ನು ಹರಿಸಿದ ಕೀರ್ತಿ ಕರವೇ ನಟರಾಜ್‌ಗೆ ಸಲ್ಲಲಿದೆ. ಕನ್ನಡ ನಾಡುನುಡಿ-ನೆಲ ಜಲ-ಭಾಷೆಯ ಜೊತೆ ಕೊರಟಗೆರೆ ಅಭಿವೃದ್ದಿಗೆ ಪೂರಕವಾಗಿ ಯುವಜನತೆಯ ಜೊತೆಗೂಡಿ ನೂರಾರು ಹೋರಾಟ ನಡೆಸಿದ್ದಾರೆ. ತುಮಕೂರು ಜಿಲ್ಲಾಧ್ಯಕ್ಷ ಮಂಜುನಾಥಗೌಡನ ಏಕಪಕ್ಷಿಯ ಹಿಟ್ಲರ್ ರೀತಿಯ ತಿರ್ಮಾನದಿಂದ ಕರವೇ ಕಾರ್ಯಕರ್ತರಿಗೆ ನೋವಾಗಿದೆ. ರಾಜ್ಯಾಧ್ಯಕ್ಷ ನಾರಾಯಣಗೌಡ ತಕ್ಷಣ ಸಮಸ್ಯೆಯನ್ನು ಸರಿಪಡಿಸಬೇಕಿದೆ ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಕರವೇ ಹೊಳವನಹಳ್ಳಿ ಅಧ್ಯಕ್ಷರಾದ ಮಹೇಶ್, ಸಿ.ಎನ್.ದುರ್ಗ ದಿನೇಶ್, ತುಂಬಾಡಿ ಕೋದಂಡರಾಮು, ಬುಕ್ಕಾಪಟ್ಟಣ ಸುನಿಲ್, ಮುಖಂಡರಾದ ರಮೇಶ್, ಶ್ರೀನಿವಾಸು, ವಿಜಯ್, ಪ್ರೇಮಕುಮಾರ್, ಮಂಜುನಾಥ, ಗಿರೀಶ್, ಲಕ್ಷ್ಮೀಕಾಂತ, ರಕ್ಷಿತ್‌ಗೌಡ್ರು, ರಾಮಮೂರ್ತಿ, ಮಲ್ಲೇಶ್, ಓಬಳರಾಜು ಸೇರಿದಂತೆ ಇತರರು ಇದ್ದರು.

ಅಧ್ಯಕ್ಷ ಸ್ಥಾನಕ್ಕೆ ಧ್ವಜಸ್ತಂಭವೇ ಕಂಟಕವಾಯ್ತ

ಸರಕಾರಿ ಬಸ್ ನಿಲ್ದಾಣದ ಸಮೀಪದ ಮುಖ್ಯರಸ್ತೆಯಲ್ಲಿ ಕಳೆದ ೧೪ತಿಂಗಳ ಹಿಂದೆಯೇ ೫೬ಅಡಿ ಎತ್ತರದ ಕನ್ನಡಧ್ವಜ ಕಂಬ ನಿರ್ಮಾಣವಾಗಿದೆ. ಧ್ವಜಕಂಬದ ವಿಚಾರದಲ್ಲಿ ಸರಕಾರಿ ಅಧಿಕಾರಿವರ್ಗ ಮತ್ತು ಕರವೇ ಕಾರ್ಯಕರ್ತರ ನಡುವೆ ತಿಕ್ಕಾಟ ನಡೆದಿದೆ. ಇದರ ನಡುವೆಯೇ ರಾಜಕೀಯ ಪ್ರೇರಿತ ಮತ್ತು ವೈಯಕ್ತಿಕ ದ್ವೇಷದಿಂದ ತುಮಕೂರು ಜಿಲ್ಲಾಧ್ಯಕ್ಷರು ಕೊರಟಗೆರೆ ಅಧ್ಯಕ್ಷರ ಬದಲಾವಣೆ ಮಾಡಿದ್ದಾರೆ ಎಂದು ಕರವೇ ಪ್ರಧಾನ ಕಾರ್ಯದರ್ಶಿ ಕಲೀಂವುಲ್ಲಾ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.