ಬ್ರಿಟಿಷರೊಂದಿಗೆ ಶಾಮೀಲಾಗಿದ್ದ ಆರ್ ಎಸ್ಎಸ್ ನವರು ದೇಶ ಭಕ್ತರಲ್ಲ: ರಾಮಲಿಂಗಾ ರೆಡ್ಡಿ
ಖರ್ಗೆ ಅವರ ಪರ ರಾಜ್ಯದಲ್ಲಿ ಸಹಜವಾಗಿ ವಿಶೇಷ ಒಲವಿದೆ...
Team Udayavani, Oct 16, 2022, 6:46 PM IST
ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್ಗೆ ಸೇರಿದವರು ಎಂದರು.
ಇದನ್ನೂ ಓದಿ : ಎಂಬಿಬಿಎಸ್: ದೇಶದ ಮೊದಲ ಹಿಂದಿ ಆವೃತ್ತಿ ಪುಸ್ತಕಗಳ ಬಿಡುಗಡೆ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳದವರು ತಮ್ಮನ್ನು ತಾವು (ಆರ್ ಎಸ್ಎಸ್, ಬಿಜೆಪಿ) ಸ್ವಾತಂತ್ರ್ಯ ಹೋರಾಟಗಾರೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇಂಥವರಿಂದಲೇ ದೇಶವನ್ನು ಛಿದ್ರವಾಗುತ್ತಿದೆ. ಜನರನ್ನು ದಾರಿ ತಪ್ಪಿಸಲು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿರುವ ಬಿಜೆಪಿ ಬುರುಡೆ ಪಕ್ಷ ಎಂದು ಬದರಿಸಿಕೊಳ್ಳುವುದು ಸೂಕ್ತ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಶಶಿ ತರೂರ್ ಅವರು ಸ್ಪರ್ಧಿಸಿದ್ದರೂ ಕನ್ನಡಿಗರಾದ ಖರ್ಗೆ ಅವರ ಪರ ರಾಜ್ಯದಲ್ಲಿ ಸಹಜವಾಗಿ ವಿಶೇಷ ಒಲವಿದೆ.ಎಐಸಿಸಿ ಅಧ್ಯಕ್ಷ ಸ್ಥಾನಕ್ಜೆ ಗಾಂಧಿ ಪರಿವಾರದವರು ಬಿಟ್ಟು ಬೇರೆ ನಾಯಕರಿಗೆ ಅವಕಾಶ ನೀಡಲಾಗುತ್ತಿದೆ. ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೂಡ ಗಾಂಧಿ ಕುಟುಂಬದ ಹೊರತಾದ ನಾಯಕರು ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಶಕ್ತಿಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದ ಹೊರತಾದವರಿಗೆ ನೀಡಬೇಕೆಂಬ ಆಶಯದಂತೆ ಚುನಾವಣೆ ಮೂಲಕ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್