ಹೆಬ್ರಿ- ಕಾರ್ಕಳ ಪರಿಸರದ ಅಡಿಕೆ ತೋಟಕ್ಕೆ ದುಂಬಿ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ


Team Udayavani, Oct 17, 2022, 9:46 AM IST

ಅಡಿಕೆ ತೋಟಕ್ಕೆ ದುಂಬಿ ಬಾಧೆ : ವಿಜ್ಞಾನಿಗಳಿಂದ ಪರಿಶೀಲನೆ

ಕಾರ್ಕಳ/ಹೆಬ್ರಿ : ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಅಡಿಕೆ ಬೆಳೆಗೆ ಅಂಬ್ರೋಸಿಯಾ ಕೀಟ ಬಾಧೆ ಕಾಣಿಸಿಕೊಂಡಿದೆ.

2018ರಲ್ಲಿ ಪುತ್ತೂರು, ಸುಳ್ಯ ಭಾಗಗಳಲ್ಲಿ ಕಂಡುಬಂದಿದ್ದ ಈ ಬಾಧೆ ಪ್ರಸ್ತುತ ಹೆಬ್ರಿ ತಾಲೂಕಿನ ಮಾಗದ್ದೆ ಹಾಗೂ ಕಾರ್ಕಳದ ಶಿರ್ಲಾಲು ಭಾಗದ ಕೆಲವು ರೈತರ ತೋಟಗಳಲ್ಲಿ ಕಾಣಿಸಿಕೊಂಡಿದ್ದು, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಪ್ರಾದೇಶಿಕ ಕೃಷಿ ಹಾಗೂ ತೋಟಗಾರಿಕೆ ಸಂಶೋಧನ ಕೇಂದ್ರ ಬ್ರಹ್ಮಾವರದ ವಿಜ್ಞಾನಿಗಳೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಇದು ಕುಟ್ಟೆ ಜಾತಿಯ ದುಂಬಿ ಯಾಗಿದ್ದು ಯೂಪ್ಲಾಟಿ ಪಸ್ಪಾ ರಾಲ್ಲೆಲಸ್‌ ಎಂದು ಗುರುತಿಸಲ್ಪಟ್ಟಿದೆ. ಸುಮಾರು 4 ಮಿ.ಮೀ. ಉದ್ದವಿದ್ದು ಕಂದು ಬಣ್ಣದ ಶರೀರದೊಂದಿಗೆ ಹಳದಿ ಬಣ್ಣದ ರೋಮಗಳನ್ನು ಹೊಂದಿರುತ್ತದೆ. ಈ ದುಂಬಿಗಳು ಸಸಿ ಗಿಡಗಳಿಗೆ ಹೆಚ್ಚಾಗಿ ಬಾಧೆ ಉಂಟುಮಾಡುತ್ತಿದ್ದು ಪ್ರೌಢ ಹೆಣ್ಣು ದುಂಬಿಯು ಅಡಿಕೆ ಮರದ ಕಾಂಡಗಳ ಮೇಲೆ 1.50 ಮಿ.ಮೀ. ಸುತ್ತಳತೆಯ 1.20ರಿಂದ 4.60 ಸೆ.ಮೀ.ನಷ್ಟು ಅಳದ ರಂದ್ರಗಳನ್ನು ಕೊರೆದು ಪ್ರವೇಶಿಸಿ ಸಂತಾನೋತ್ಪತ್ತಿ ಮುಂದುವರಿಸುತ್ತವೆ. ಪ್ರಥಮ ಹಂತದಲ್ಲಿ ಅಡಿಕೆ ಮರಗಳ ಕಾಂಡದ ಭಾಗದಲ್ಲಿ ಅಲ್ಲಲ್ಲಿ ಕಂದುಬಣ್ಣದ ಅಂಟು ದ್ರವ ಸೋರಿಕೆ ಕಂಡು ಬಂದು ಅಂಟು ದ್ರವದ ತಳಭಾಗದಲ್ಲಿ ಸಣ್ಣ ಗಾತ್ರದ ರಂಧ್ರಗಳು ಕಾಣುತ್ತವೆ. ಇದರಿಂದ ಮರದ ಬೆಳವಣಿಗೆ ಕುಂಠಿತವಾಗುತ್ತದೆ. ಅನಂತರದ ಹಂತಗಳಲ್ಲಿ ನೂರಾರು ರಂದ್ರಗಳಿಂದ ಬಿಳಿ ಬಣ್ಣದ ಪುಡಿ ಉದುರುವಿಕೆ ಪ್ರಾರಂಭವಾಗುತ್ತದೆ. ಮುಂದಿನ ಹಂತದಲ್ಲಿ ಅಡಿಕೆಮರದ ಕೆಳಭಾಗದ ಎಲೆಗಳು ಹಳದಿಯಾಗಿ ಕಳಚಿ ಬೀಳುವ ಸಂಭವವಿರುತ್ತದೆ.

ಈ ದುಂಬಿಯ ಬಾಧೆಯು ಸಾಮಾ ನ್ಯವಾಗಿ ಕಡಿಮೆ ಪ್ರಾಯದ ಗಿಡಗಳಲ್ಲಿ ಹೆಚ್ಚು ಕಂಡುಬರುತ್ತಿದ್ದು ಹೆಚ್ಚು ನೀರಾವರಿ ನೀಡುವ ತೋಟಗಳಲ್ಲಿ, ತಗ್ಗು ಪ್ರದೇಶದ ತೋಟಗಳಲ್ಲಿ ಹಾಗೂ ಅತೀ ಹೆಚ್ಚು ಪೋಷಕಾಂಶ ನೀಡುತ್ತಿರುವ ರೈತರ ತೋಟಗಳಲ್ಲಿ (ಪ್ರಮುಖವಾಗಿ ಸಾರಜನಕಯುಕ್ತ ಸಾವಯವ ಹಾಗೂ ರಾಸಾಯನಿಕ ಗೊಬ್ಬರ) ಹೆಚ್ಚಾಗಿ ಕಂಡು ಬರುತ್ತದೆ. ದುಂಬಿಯ ನಿಯಂತ್ರಣಕ್ಕೆ ಸಮ ತೋಲನ ಸಾವಯವ ಹಾಗೂ ರಾಸಾ ಯನಿಕ ರಸಗೊಬ್ಬರ ಬಳಕೆ, ಸಮರ್ಪಕ ಬಸಿ ಕಾಲುವೆ ಹಾಗೂ ಹದವಾದ ನೀರಾವರಿ ಅವಶ್ಯ. ಬಾಧಿತ ಮರ ಹಾಗೂ ಸುತ್ತಲಿನ ಮರಗಳಿಗೆ ಕ್ಲೋರೊಪೈರಿಫಾಸ್‌ 20 ಇ.ಸಿ. ಕೀಟನಾಶಕವನ್ನು 2 ಮಿ.ಲೀ. ಲೀಟರ್‌ ನೀರಿಗೆ ಬೆರೆಸಿ ಕಾಂಡದ ಭಾಗಕ್ಕೆ ಹಚ್ಚಿ ನಿಯಂತ್ರಿಸಬಹುದು.

ಟಾಪ್ ನ್ಯೂಸ್

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.