ಕುಷ್ಟಗಿ: ಮಣ್ಣಿನ ಮನೆಯಲ್ಲಿದ್ದವರಿಗೆ‌ ಆತಂಕ ಸೃಷ್ಟಿಸಿದ ಮಳೆ


Team Udayavani, Oct 17, 2022, 3:57 PM IST

ಕುಷ್ಟಗಿ: ಮಣ್ಣಿನ ಮನೆಯಲ್ಲಿದ್ದವರಿಗೆ‌ ಆತಂಕ ಸೃಷ್ಟಿಸಿದ ಮಳೆ

ಕುಷ್ಟಗಿ: ಚಿತ್ತಾ ಮಳೆಗೆ ತಾಲೂಕು ತತ್ತರಿಸಿದ್ದು, ನಿರಂತರ ಮಳೆಗೆ ಅನ್ನದಾತರ ಚಿತ್ತ ಕದಡಿದೆ. ತಾಲೂಕಿನಲ್ಲಿ ವ್ಯಾಪಕ ಮಳೆಗೆ ಬಹುತೇಕ ಮಣ್ಣಿನ ಮನೆಗಳು ಕುಸಿಯಲಾರಂಭಿಸಿದ್ದು, ಮಣ್ಣಿನ ಮನೆಯಲ್ಲಿದ್ದವರಿಗೆ ಆತಂಕಸೃಷ್ಟಿಸಿದೆ.

ತಾಲೂಕಿನಲ್ಲಿ ಆಗಸ್ಟ್‌ ಕೊನೆಯ ವಾರದಿಂದ ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ ನಲ್ಲಿ ನಿರಂತರ ಮಳೆಯಾಗುತ್ತಿದೆ. ಈ ಮಳೆಗೆ ತಾಲೂಕಿನ 41 ಕೆರೆಗಳ ಪೈಕಿ ಈಗಾಗಲೇ 11 ಕೆರೆಗಳು ತುಂಬಿ ಕೋಡಿ ಬಿದ್ದಿವೆ. ಪ್ರಸಕ್ತ ವರ್ಷ ಎಲ್ಲ ಮಳೆಗಳಾಗುತ್ತಿದ್ದು, ಕೆರೆ ಕಟ್ಟೆ, ಚೆಕ್‌ ಡ್ಯಾಂ, ಕೃಷಿ ಹೊಂಡ ನೀರಿನಿಂದ ಭರ್ತಿಯಾಗಿದೆ.

ನಿರಂತರ ಮಳೆಯಿಂದ ಬಿತ್ತನೆಗೆ ಅವಕಾಶ ಇಲ್ಲ. ಹೀಗಾಗಿ ಜಮೀನುಗಳ ತೇವಾಂಶ ಹೆಚ್ಚಿದ್ದು, ಕಳೆಕಸ ಜಾಸ್ತಿಯಾಗಿದೆ. ಈ ಮಳೆಯಿಂದಾಗಿ ಹತ್ತಿ, ತೊಗರಿ, ಮೆಕ್ಕೆಜೋಳ ಸೇರಿದಂತೆ 25 ಹೆಕ್ಟೇರ್‌ನಲ್ಲಿ ಮೆಣಸಿನಕಾಯಿ, ಟೋಮ್ಯಾಟೋ, ಈರುಳ್ಳಿ, ಚೆಂಡು ಹೂವು, ಗಲಾಟೆ ಸೇರಿದಂತೆ 89 ಹೆಕ್ಟೇರ್‌ ಬೆಳೆ ಹಾನಿಯಾಗಿದ್ದು, ಸರ್ಕಾರದಿಂದ ಇದುವರೆಗೂ 130 ರೈತರಿಗೆ 16.15 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬಿದ್ದ ಮನೆಗಳ ಪೈಕಿ ಬಹುತೇಕ ಮಣ್ಣಿನ ಮನೆಗಳಾಗಿದ್ದು, ಹನುಮನಾಳ, ಹನುಮಸಾಗರ ಹೋಬಳಿಗಳಲ್ಲಿ ಹೆಚ್ಚು ಮನೆ ಬಿದ್ದಿರುವುದು ಕಂದಾಯ ಇಲಾಖೆಯ ಮಾಹಿತಿ. ಗ್ರಾಮ ಲೆಕ್ಕಾಧಿಕಾರಿಗಳು, ಜೆಇ  ಹಾಗೂ ಪಿಡಿಒ ಸೇರಿದಂತೆ ಜಂಟಿ ಸಮೀಕ್ಷೆ ನಡೆಸಲಾಗಿದೆ.

ಜೂನ್‌-ಸೆಪ್ಟೆಂಬರ್‌ವರೆಗೂ ಸುರಿದ ಮಳೆಯಿಂದ ಭಾಗಶಃ ಹಾನಿಯಾದ 188 ಮನೆಗಳಿಗೆ 1.03 ಕೋಟಿ ರೂ.ಪರಿಹಾರ ನೀಡಲಾಗಿದೆ. ಈ ಪೈಕಿ ಪುನರ್‌ ನಿರ್ಮಾಣ ಸ್ಥಿತಿಯಲ್ಲಿ (ಬಿ-2) 22 ಮನೆಗಳಿಗೆ ತಲಾ 95,100 ರೂ. ಪರಿಹಾರ, ಭಾಗಶಃ (ಸಿ-2) 161 ಮನೆಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡಲಾಗಿದೆ.

ಹನುಮನಾಳ, ಯಲಬುರ್ತಿ, ಕಿಲ್ಲಾರಹಟ್ಟಿ, ಹಿರೇಬನ್ನಿಗೋಳ, ತೋಪಲಕಟ್ಟಿ,ಬಾದಮಿನಾಳ, ತುಮರಿಕೊಪ್ಪ, ನೀಲೋಗಲ್‌, ವಕ್ಕಂದುರ್ಗ, ಎಂ. ರಾಂಪುರ, ಗುಮಗೇರಿ, ನಿಡಶೇಸಿ, ಟೆಂಗುಂಟಿ, ಹನುಮಸಾಗರ, ಕಾಟಾಪುರ, ಯಲಬುಣಚಿ, ಯರಗೇರಾದಲ್ಲಿ ಮನೆಗಳು ಕುಸಿದಿವೆ. ಕಳೆದ 15 ದಿನಗಳಲ್ಲಿ 95 ಮನೆಗಳು ಬಿದ್ದಿದ್ದು, ಜಂಟಿ ಸಮೀಕ್ಷೆ ಮೂಲಕ ಪರಿಹಾರ ನೀಡಲಾಗುತ್ತಿದೆ.

ಗುಡುಗು, ಸಿಡಿಲಿನ ಅವಘಡ ತಡೆಯಲು ಈಗಾಗಲೇ ಗ್ರಾಮ ಸಭೆ ಮೂಲಕ ಸಿಡಿಲು ಸ್ಮಾರ್ಟ್‌ ಫೋನ್‌ನಲ್ಲಿ ಆ್ಯಪ್‌ ಅಳವಡಿಸಿಕೊಳ್ಳಲು ಮುನ್ನೆಚ್ಚರಿಕೆ ಮಾಹಿತಿ
ನೀಡಲಾಗಿದೆ. ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒ ಕೇಂದ್ರ ಸ್ಥಳದಲ್ಲಿದ್ದು, ಘಟನೆ ನಡೆದರೆ ಸ್ಥಾನಿಕ ಪರಿಶೀಲಿಸಿ ವರದಿ ನೀಡಲು ಸೂಚಿಸಲಾಗಿದೆ.

ಮಣ್ಣಿ ಮನೆಯಲ್ಲಿ ವಾಸವಾಗಿರುವವರು ಅಭದ್ರವಾಗಿದ್ದರೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ  ಶಾಲೆಗಳು ದಸರಾ ರಜೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಶಾಲೆ, ಅಂಗನವಾಡಿ, ಸಮುದಾಯ ಭವನದಲ್ಲಿ ಉಳಿದುಕೊಳ್ಳಬಹುದಾಗಿದೆ. ಮಳೆ ಬಂದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಹಳ್ಳದ ಪ್ರವಾಹ ಇಳಿಯುವವರೆಗೂ ಹಳ್ಳದಾಟಬಾರದು.

ಗುರುರಾಜ್‌ ಚಲವಾದಿ, ಕುಷ್ಟಗಿ ತಹಶೀಲ್ದಾರ್‌

*ಮಂಜುನಾಥ ಮಹಾಲಿಂಗಪುರ 

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.