ವಾರಾಣಸಿಯ ಗಂಗಾ ತಟದಲ್ಲಿ ಬನಾರಸ್ ಜೋಡಿ; ಪವಿತ್ರ ಗಂಗಾರತಿಯಲ್ಲಿ ಭಾಗಿ

ಜಯತೀರ್ಥ ನಿರ್ದೇಶನದ  ಬನಾರಸ್ ಸಿನೆಮಾ ಬಗೆಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ

Team Udayavani, Oct 18, 2022, 11:28 AM IST

ವಾರಾಣಸಿಯ ಗಂಗಾ ತಟದಲ್ಲಿ ಬನಾರಸ್ ಜೋಡಿ; ಪವಿತ್ರ ಗಂಗಾರತಿಯಲ್ಲಿ ಭಾಗಿ

ಪಂಚ ಭಾಷೆಗಳಲ್ಲೂ ಸದ್ದು ಮಾಡ್ತಿರುವ ಬನಾರಸ್  ಸಧ್ಯ ಸಿನಿಪ್ರಿಯರ ಗಮನ ಸೆಳೆದಿರುವ ಬಹುನಿರೀಕ್ಷಿತ ಚಿತ್ರ. ಬನಾರಸ್ ಸಿನಿಮಾದ ಹೀರೋ ಝೈದ್ ಖಾನ್ ಮತ್ತು ಸೋನಲ್ ಮೊಂತೇರೊ ಗಂಗಾರತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜಯತೀರ್ಥ ನಿರ್ದೇಶನದ  ಬನಾರಸ್ ಸಿನೆಮಾ ಬಗೆಗೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ. ಸಿನೆಮಾದ ಮೋಷನ್ ಪೋಸ್ಟರ್, ಟ್ರೈಲರ್, ಮಾಯಗಂಗೆ ಹಾಡನ್ನ ನೋಡಿದ ಮೇಲೆ ಚಿತ್ರದ ಮೇಲಿನ ಭರವಸೆ ದುಪ್ಪಾಟ್ಟಾಗಿದೆ. ನವ ನಾಯಕ ಝೈದ್ ಖಾನ್ ನಾಯಕನಾಗಿ ನಟಿಸಿದ್ದು, ಸೋನಲ್ ಮೊಂತೆರೋ ಜೋಡಿಯಾಗಿ ಸಾಥ್ ನೀಡಿರುವ ಈ ಚಿತ್ರದಲ್ಲಿ  ಟ್ವಿಸ್ವ್ ಅಂಡ್ ಟರ್ನಿಂಗ್ ಸೀಕ್ವೇನ್ಸ್ ಗಳಿರೋದು ಟ್ರೈಲರ್ ಝಲಕ್ ನಲ್ಲೇ ಸ್ಪಷ್ಟವಾಗಿದೆ.

ಈಗಾಗಲೇ ತಿಳಿದಿರುವಂತೆ ಬನಾರಸ್ ಚಿತ್ರಕ್ಕೂ ಗಂಗಾ ನದಿಗೂ ಅವಿನಾಭಾವ ಸಂಬಂಧವಿದೆ. ಗಂಗಾ ತಟದಲ್ಲಿ ತೆರೆದುಕೊಳ್ಳುವ  ಈ ಪ್ರೇಮಕಥೆಯ ಬನಾರಸ್ ನ ನಾಯಕ ನಾಯಕಿ ಯನ್ನ ಮತ್ತೆ ಆ  ಮಾಯಗಂಗೆಗೆ ಭೇಟಿ ನೀಡಿದ್ದಾರೆ. ವರ್ಣನೆಗೆ ನಿಲುಕದ ಪೂಜ್ಯ ಸ್ಥಾನ ಪಡೆದುಕೊಂಡಿರುವ ಗಂಗಾ ತೀರದಲ್ಲಿ ಶೂಟಿಂಗ್ ನಡೆಸಿದ್ದ ಬನಾರಸ್ ತಂಡ ಪ್ರಚಾರದ ನಿಮಿತ್ತ ವಾರಾಣಸಿಗೆ ತೆರಳಿದ್ದ ಸಂದರ್ಭದಲ್ಲಿ ಮತ್ತೆ ಗಂಗಾ ತಟಕ್ಕೆ ತೆರಳಿದೆ. ಅಲ್ಲಿ ನಡೆಯುವ ಪವಿತ್ರ ಗಂಗಾರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಜಾತಿ, ಧರ್ಮಗಳ ಹಂಗಿಲ್ಲದೇ ಭಕ್ತಿಯ ಭಾವದಿಂದ ಗಂಗಾ ಮಾತೆಗೆ ನಮಿಸಿದ್ದಾರೆ.

ನವೆಂಬರ್ 4 ರಂದು ದೇಶಾದ್ಯಂತ ತೆರೆ ಕಾಣಲಿರುವ ಬನಾರಸ್ ತಂಡ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ರಾಜ್ಯಗಳನ್ನ ಸುತ್ತಿ ಮಾಧ್ಯಮದವರೊಂದಿಗೆ ಮುಖಾಮುಖಿಯಾಗಿ, ಸಿನೆಮಾದ ಕುರಿತ ಕುತೂಹಲಕಾರಿ ಮಾಹಿತಿಯನ್ನ ಹಂಚಿಕೊಳ್ತಿದ್ದಾರೆ. ಜೊತೆಗೆ ಆ ರಾಜ್ಯಗಳಲ್ಲಿರುವ ಧಾರ್ಮಿಕ ಕ್ಷೇತ್ರಕ್ಕೂ ಭೇಟಿ ನೀಡಿ ಧರ್ಮದ ಹಂಗಿಲ್ಲದೇ ಭಕ್ತಿ ಭಾವದಿಂದ ನಮಿಸಿ, ತಮ್ಮ ಚೊಚ್ಚಲ ಸಿನೆಮಾಗೆ ಆಶೀರ್ವಾದ ಪಡೆದುಕೊಳ್ತಿದ್ದಾರೆ.

ತಿಲಕ್ ರಾಜ್ ಬಲ್ಲಾಳ್ ನಿರ್ಮಾಣದೊಂದಿಗೆ ಅದ್ದೂರಿಯಾಗಿ ತಯಾರಾದ ಬನಾರಸ್ ಗೆ ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ, ಅಜನೀಶ್ ಬಿ ಲೋಕನಾಥ್ ಸಂಗೀತ ನಿರ್ದೇಶನವಿದ್ದು, ದೇವರಾಜ್, ಅಚ್ಯುತಕುಮಾರ್, ಸುಜಯ್ ಶಾಸ್ತ್ರಿ, ಸ್ವಪ್ನ ರಾಜ್, ಬರ್ಕತ್ ಆಲಿ, ಚಿರಂತ್, ರೋಹಿತ್ ಸೇರಿದಂತೆ ನುರಿತ ತಾರಾಗಣ ಮತ್ತು ಪ್ರತಿಭಾನ್ವಿತ ತಂತ್ರಜ್ಞರ ತಂಡ ಬನಾರಸ್ ಗೆ ಸಾಥ್ ಕೊಟ್ಟಿದೆ.

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.