ಪಂಪ್‌ವೆಲ್‌-ಪಡೀಲ್‌ ಸ್ಮಾರ್ಟ್‌ ರಸ್ತೆ ಕಾಮಗಾರಿಗೆ ವೇಗ

ಸ್ಮಾರ್ಟ್‌ ರಸ್ತೆ ಪ್ಯಾಕೇಜ್‌- 5ರಡಿ ಕಾಮಗಾರಿ

Team Udayavani, Oct 18, 2022, 12:08 PM IST

9

ಮಹಾನಗರ: ನಗರದ ಬಹು ಮುಖ್ಯ ರಸ್ತೆಗಳಲ್ಲಿ ಒಂದಾಗಿರುವ, ಪಡೀಲ್‌ – ಪಂಪ್‌ವೆಲ್‌ ರಸ್ತೆಯ ಅಭಿವೃದ್ಧಿ ಕೆಲಸ ಭರದಿಂದ ಸಾಗಿದೆ. ಬೆಂಗಳೂರು ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಬಂದು ಮಂಗಳೂರು ನಗರ ಪ್ರವೇಶಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಿಸ್ತ ರಣೆ ಅಗತ್ಯವಾಗಿದ್ದು, ಆ ಹಿನ್ನೆಲೆಯಲ್ಲಿ ಸ್ಮಾರ್ಟ್‌ ಸಿಟಿಯ ಸ್ಮಾರ್ಟ್‌ ರಸ್ತೆ ಪ್ಯಾಕೇಜ್‌- 5ರಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

ಪಡೀಲ್‌ನಿಂದ ಕಾಮಗಾರಿ ಆರಂಭವಾಗಿದ್ದು, ಒಂದು ಬದಿಯಲ್ಲಿ ಸುಮಾರು 200 ಮೀ.ನಷ್ಟು ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗಿದೆ. ಉಳಿದಂತೆ ಕಪಿತಾನಿಯೋ ವರೆಗೆ ಅಲ್ಲಲ್ಲಿ ತಡೆ ಗೋಡೆ ನಿರ್ಮಿಸಿ ಮಣ್ಣ ಹಾಕಿ ಸಮತಟ್ಟುಗೊಳಿಸಲಾಗಿದೆ. ರಸ್ತೆ ಬದಿಯ ಕೆಲವು ಕಟ್ಟಡಗಳನ್ನೂ ತೆರವುಗೊಳಿಸಲಾಗಿದೆ. ಮಳೆ ನೀರು ಹರಿಯುವ ಚರಂಡಿ ನಿರ್ಮಾಣ ಕೆಲಸವೂ ಅಲ್ಲಲ್ಲಿ ನಡೆಯುತ್ತಿದೆ. ರಸ್ತೆ ಕಾಮಗಾರಿ ಉದ್ದೇಶ ದಕ್ಕೆ ಸ್ಥಳದಲ್ಲಿದ್ದ ಬೃಹತ್‌ ಮರ ಗಳನ್ನು ನೆಲಸಮಗೊಳಿಸಲಾಗಿದೆ. ಸಾಧ್ಯವಿರುವ ಮರಗಳನ್ನು ಸ್ಥಳಾಂತರಗೊಳಿಸುವ ಚಿಂತನೆಯಿದೆ. ಕಡಿಯಲಾದ ಮರಗಳ ಬದಲಿಗೆ ಬೇರೆ ಕಡೆಗಳಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲು ಸ್ಮಾರ್ಟ್‌ ಸಿಟಿಯಿಂದ ಅರಣ್ಯ ಇಲಾಖೆಗೆ ಮೊತ್ತ ಪಾವತಿ ಸಲಾ ಗಿದೆ ಎನ್ನುತ್ತಾರೆ ಅಧಿಕಾರಿಗಳು.

24 ಮೀ. ಅಗಲದ ಕಾಂಕ್ರೀಟ್‌ ರಸ್ತೆ

ಪ್ರಸ್ತುತ 10 ಮೀ. ಅಗಲದ ಡಾಮರು ರಸ್ತೆಯಿದ್ದು, ಇದು 24 ಮೀ. ಅಗಲದ ಚತುಷ್ಪಥ ಕಾಂಕ್ರೀಟ್‌ ರಸ್ತೆ ಯಾಗಿ ಪರಿವರ್ತನೆಯಾಗಲಿದೆ. ಇದರಲ್ಲಿ 3.50 ಮೀ. ಅಗಲದ ನಾಲ್ಕು ಲೇನ್‌ ಕಾಂಕ್ರೀಟ್‌ ವೇ, 3 ಮೀ.ಅಗಲದ ಇಂಟರ್‌ಲಾಕ್‌ ಅಳವಡಿಸಲಾಗುತ್ತದೆ. ಎರಡೂ ಬದಿಗಳಲ್ಲಿ ಫುಟ್‌ಪಾತ್‌, ಚರಂಡಿ, ಯುಟಿಲಿಟಿ ಡಕ್ಟ್, ರಸ್ತೆಯ ಮಧ್ಯದಲ್ಲಿ ಡಿವೈಡರ್‌, ದಾರಿದೀಪ ಅಳವಡಿಕೆಯಾಗಲಿದೆ. ಪಂಪ್‌ವೆಲ್‌ ನಿಂದ ಪಡೀಲ್‌ವರೆಗೆ ಒಟ್ಟು 2.8 ಕಿ.ಮೀ. ಉದ್ದದ ರಸ್ತೆಯಾಗಿದ್ದು, 26 ಕೋ. ರೂ. ವೆಚ್ಚದಲ್ಲಿ ಸ್ಮಾರ್ಟ್‌ ಸಿಟಿಯಿಂದ ಅಭಿವೃದ್ಧಿಯಾಗಲಿದೆ.

ವಾಹನ ದಟ್ಟಣೆ ನಿವಾರಣೆ

ಪಡೀಲ್‌- ಪಂಪ್‌ವೆಲ್‌ ರಸ್ತೆ ನಗರದ ಪ್ರಮುಖ ರಸ್ತೆಗಳಲ್ಲಿ ಒಂದಾಗಿದೆ. ಈ ಹಿಂದೆ ಹೆದ್ದಾರಿಯಾಗಿದ್ದ ಈ ರಸ್ತೆ ಪ್ರಸ್ತುತ ಪಾಲಿಕೆಗೆ ಸೇರಿದ್ದು, ಬಿ.ಸಿ.ರೋಡ್‌ ಕಡೆಯಿಂದ ಮಂಗಳೂರು ನಗರ ಪ್ರವೇಶಿಸಲು ಇರುವ ಪ್ರಮುಖ ರಸ್ತೆ. ಸದ್ಯ ಅಗಲ ಕಿರಿದಾದ ರಸ್ತೆಯಾದ ಕಾರಣ, ಪ್ರತಿ ನಿತ್ಯ ವಾಹನ ದಟ್ಟಣೆ ಉಂಟಾಗುತ್ತಿದೆ. ಚತುಷ್ಪಥವಾದರೆ ವಾಹನಗಳ ಸುಗಮ ಸಂಚಾರ ಸಾಧ್ಯವಾಗಲಿದೆ. ಜತೆಗೆ ಪಡೀಲ್‌ನಲ್ಲಿ ನಿರ್ಮಾಣ ವಾಗಲಿರುವ ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣ ಮೊದಲಾದೆಡೆಗಳಿಗೆ ತೆರಳು ವವರಿಗೂ ಅನುಕೂಲವಾಗಲಿದೆ.

ರಸ್ತೆಗೆ ಡಾಮರು

ಪ್ರಸ್ತುತ ವಾಹನಗಳು ಸಂಚರಿಸುತ್ತಿರುವ ಈ ಹಿಂದಿನ ಡಾಮರು ರಸ್ತೆ ಮಳೆ, ಕಾಮಗಾರಿಯ ಕಾರಣ ದಿಂದಾಗಿ ಹದಗೆಟ್ಟಿತ್ತು. ಇದೀಗ ರಸ್ತೆಯನ್ನು ಪ್ಯಾಚ್‌ವರ್ಕ್‌ ಮೂಲಕ ದುರಸ್ತಿ ಪಡಿಸಲಾಗಿದೆ.ಇದರಿಂದ ವಾಹನಗಳ ಸುಗಮ ಸಂಚಾರಕ್ಕೆ ಅವ ಕಾಶವಾಗಿದೆ. ಕಾಮಗಾರಿಯ ಕಾರಣದಿಂದಾಗಿ ಧೂಳು ಸಾಮಾನ್ಯವಾಗಿಬಿಟ್ಟಿದೆ.

ಮಾರ್ಚ್‌ ಅಂತ್ಯದೊಳಗೆ ಪೂರ್ಣ: ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ಪೂರಕವಾಗಿ ವಿದ್ಯುತ್‌ ಕಂಬಗಳ ತೆರವು, ತಡೆಗೋಡೆಗಳ ನಿರ್ಮಾಣ, ನೀರು, ಒಳಚರಂಡಿ ಪೈಪ್‌ಗ್ಳನ್ನು ಸಮರ್ಪಕವಾಗಿ ಅಳವಡಿಸುವ ಕೆಲಸಗಳು ನಡೆಯುತ್ತಿವೆ. ಈಗಾಗಲೇ ಪಡೀಲ್‌ ಭಾಗದಲ್ಲಿ ಒಂದು ಕಡೆ ರಸ್ತೆ ನಿರ್ಮಾಣ ಮಾಡಲಾಗಿದೆ. 2023ರ ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. –ಅರುಣ್‌ ಪ್ರಭ ಕೆ.ಎಸ್‌., ಜನರಲ್‌ ಮ್ಯಾನೇಜರ್‌-ಟೆಕ್ನಿಕಲ್‌, ಮಂಗಳೂರು ಸ್ಮಾರ್ಟ್‌ ಸಿಟಿ ಲಿ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.